ಬ್ರೇಕಿಂಗ್ ನ್ಯೂಸ್
18-12-20 02:52 pm Source: FILMIBEAT ಸಿನಿಮಾ
ಸ್ಯಾಂಡಲ್ವುಡ್ನ ರಾಕಿಂಗ್ ಜೋಡಿ ಯಶ್-ರಾಧಿಕಾ ಮತ್ತೆ ಕಿರುತೆರೆಯಲ್ಲಿ ಮೋಡಿ ಮಾಡಲು ಸಜ್ಜಾಗಿದ್ದಾರೆ. ಈ ಹಿಂದೆ 'ನಂದಗೋಕುಲ' ಎಂಬ ಧಾರಾವಾಹಿಯಲ್ಲಿ ನಟಿಸಿ ಕಿರುತೆರೆ ಪ್ರೇಕ್ಷಕರ ಮನಗೆದ್ದಿದ್ದರು ಈ ಜೋಡಿ. ಈಗ ಹಲವು ವರ್ಷಗಳ ಬಳಿಕ ಮತ್ತೆ ಕಿರುತೆರೆಯಲ್ಲಿ ಒಂದಾಗಿದ್ದಾರೆ. ಅದು ಜಾಹೀರಾತು ಒಂದಕ್ಕೆ. ಇದೇ ಮೊದಲ ಬಾರಿ ಇಬ್ಬರು ಜಾಹೀರಾತಿನಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದು, ಇವರ ಜೋಡಿ ಮತ್ತೊಮ್ಮೆ ಕಿರುತೆರೆ ಪ್ರೇಕ್ಷಕರ ಮನಗೆಲ್ಲುವುದು ಸುಳ್ಳಲ್ಲ.
ಈ ಮೂಲಕ ಮತ್ತೊಮ್ಮೆ ಕನ್ನಡಿಗರ ಮನಗೆಲ್ಲಲು ಈ ಜೋಡಿ ಸಿದ್ದವಾಗಿದ್ದಾರೆ. ಕಿರುತೆರೆ ಜೊತೆಗೆ ಬೆಳ್ಳಿತೆರೆಯಲ್ಲಿ ಕೆಲಕಾಲ ಅಂತರ ಕಾಯ್ದುಕೊಂಡಿರುವ ನಟಿ ರಾಧಿಕಾ ಪಂಡಿತ್, ಯಶ್ ಜೊತೆ ಮತ್ತೆ ತೆರೆ ಮೇಲೆ ಕಾಣಿಸುತ್ತಿರುವುದು ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ.
ಸದ್ಯ ನಟ ಯಶ್ ಕೆಜಿಎಫ್ -2 ಸಿನಿಮಾದ ಕೊನೆ ಹಂತದ ಚಿತ್ರೀಕರಣದಲ್ಲಿ ತಲ್ಲೀನರಾಗಿದ್ದಾರೆ. ಇತ್ತ ಮಗನ ಮೊದಲ ಹಾಗೂ ಮಗಳ ಎರಡನೇ ಹುಟ್ಟು ಹಬ್ಬ ಆಚರಿಸಿರುವ ನಟಿ ರಾಧಿಕಾ ಈ ಜಾಹೀರಾತಿನ ಮೂಲಕ ಮತ್ತೆ ಸೆಕೆಂಡ್ ಇನ್ನಿಂಗ್ಸ್ ಶುರು ಮಾಡಲು ಸಿದ್ಧರಾಗಿದ್ದಾರೆ.

ಇನ್ನು ಈ ಕುರಿತು ಸಂತಸ ಹಂಚಿಕೊಂಡಿರುವ ನಟಿ ರಾಧಿಕಾ, ನಾಲ್ಕು ವರ್ಷದ ಬಳಿಕ ತನ್ನ ಸಹ ನಟನೊಂದಿಗೆ ಕಾರ್ಯ ಆರಂಭಿಸಿರುವುದು ಖುಷಿ ಮೂಡಿಸಿದೆ ಎಂದು ತಿಳಿಸಿದ್ದಾರೆ. ಮದುವೆಗೂ ಮೊದಲು ಇವರಿಬ್ಬರು 'ಮಿಸ್ಟರ್ ಅಂಡ್ ಮಿಸ್ಸೆಸ್ ರಾಮಚಾರಿ', 'ಸಂಜು ಸ್ಟ್ರೈಟ್ ಫಾರ್ವಡ್' ನಲ್ಲಿ ನಟಿಸಿದ್ದರು.
ಈಗಾಗಲೇ ಕಿರುತೆರೆ ಹಾಗೂ ಬೆಳ್ಳಿತೆರೆಯಲ್ಲಿ ತಮ್ಮ ಛಾಪು ಮೂಡಿಸುತ್ತಿರುವ ಈ ಜೋಡಿ ಈಗ ಜಾಹೀರಾತಿನ ಮೂಲಕ ಇನ್ನಷ್ಟು ಅಭಿಮಾನಿಗಳಿಗೆ ಆತ್ಮೀಯವಾಗುವ ಪ್ರಯತ್ನ ನಡೆಸಿದ್ದಾರೆ.
This News Article is a Copy of FILMIBEAT
09-01-26 02:05 pm
Bangalore Correspondent
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
ಅತ್ತೆ ಕಿರುಕುಳ ಆರೋಪ ; ಸೊಸೆ ತನ್ನ ಇಬ್ಬರು ಮಕ್ಕಳೊಂ...
08-01-26 07:51 pm
08-01-26 11:21 pm
HK News Desk
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
09-01-26 03:21 pm
Mangalore Correspondent
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
ಜ.10- 11ರಂದು ಮಂಗಳೂರು ಲಿಟ್ ಫೆಸ್ಟ್ ; ರಾಜ್ಯಸಭೆ ಸ...
08-01-26 08:09 pm
ಗಡಿನಾಡು ಕಾಸರಗೋಡಿನಲ್ಲಿ ಮಲಯಾಳ ಹೇರಿಕೆ ; ಕಡ್ಡಾಯ ಭ...
08-01-26 02:34 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm