ಬ್ರೇಕಿಂಗ್ ನ್ಯೂಸ್
18-12-20 05:15 pm Source: FILMIBEAT Manjunatha C ಸಿನಿಮಾ
ತಮಿಳುನಾಡು, ಡಿ. 18: ತಮಿಳು ಧಾರಾವಾಹಿ ನಟಿ, ನಿರೂಪಕಿ ವಿಜೆ ಚಿತ್ರಾ ಆತ್ಮಹತ್ಯೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಆರಂಭದಲ್ಲಿ ವಿಜೆ ಚಿತ್ರಾ ಸಾವಿಗೆ ಪತಿ ಹೇಮಂತ್ ನೇರ ಕಾರಣ ಎನ್ನಲಾಗಿತ್ತು, ನಂತರ ವಿಜೆ ಚಿತ್ರಾ ತಮ್ಮ ಮನೆಯವರೊಂದಿಗೆ ಉತ್ತಮ ಸಂಬಂಧ ಹೊಂದಿರಲಿಲ್ಲ, ಚಿತ್ರಾ ಸಾಯುವ ದಿನ ತಾಯಿಯೊಂದಿಗೆ ಗಂಟೆಗಟ್ಟಲೆ ಮಾತನಾಡಿ ಜಗಳವಾಡಿದ್ದರು ಎನ್ನಲಾಯಿತು.
ಈಗ ವಿಜೆ ಚಿತ್ರಾ ಆಪ್ತ ಗೆಳತಿಯೊಬ್ಬರು ಮಾಧ್ಯಮಗಳ ಮುಂದೆ ಹೇಳಿಕೆ ಕೊಟ್ಟಿದ್ದು, ಈ ಹೇಳಿಕೆ ಆಧರಿಸಿ ನೋಡುವುದಾದರೆ, ವಿಜೆ ಚಿತ್ರಾ ಸಾವಿನ ಹಿಂದೆ ತೆಲುಗಿನ ಖ್ಯಾತ ನಟನೊಬ್ಬನ ಕೈವಾಡವಿದ್ದಂತಿದೆ. ಮಾಧ್ಯಮದೊಟ್ಟಿಗೆ ಮಾತನಾಡಿರುವ ವಿಜೆ ಚಿತ್ರಾ ಆಪ್ತ ಗೆಳತಿ, ತೆಲುಗು ಯುವ ನಟನೊಬ್ಬನೊಂದಿಗೆ ವಿಜೆ ಚಿತ್ರಾಗೆ ಗೆಳತನವಿತ್ತು. ರಾಜಕೀಯ ಪ್ರಭಾವವನ್ನೂ ಹೊಂದಿರುವ ಆ ನಟ, ಚಿತ್ರಾಳ ಖಾಸಗಿ ವಿಡಿಯೋ ಮಾಡಿಕೊಂಡು, ಅದನ್ನು ಚಿತ್ರಾಳ ಪತಿ ಹೇಮಂತ್ ಗೆ ತೋರಿಸುವುದಾಗಿ ಬೆದರಿಕೆ ಹಾಕುತ್ತಿದ್ದ' ಎಂದಿದ್ದಾರೆ.

ಚಿತ್ರಾ ಗೆಳತಿಯ ಸ್ಪೋಟಕ ಹೇಳಿಕೆ
ಚಿತ್ರಾ ಗೆಳತಿಯ ಈ ಹೇಳಿಕೆ ಚಿತ್ರಾ ಸಾವಿನ ಪ್ರಕರಣಕ್ಕೆ ಹೊಸ ತಿರುವು ನೀಡಿದೆ. 'ಆ ಯುವ ನಟ ಚಿತ್ರಾಳಿಗೆ ಸಾಕಷ್ಟು ಬೆದರಿಸಿದ್ದ, ಅಲ್ಲದೆ, 2021 ರ ಹೊಸವರ್ಷದಂದು ಒಂದು ರಾಜಕೀಯ ಪಾರ್ಟಿಗೆ ಬಂದು ಅಲ್ಲಿಯೇ ಉಳಿದುಕೊಳ್ಳಬೇಕೆಂದು ಒತ್ತಡ ಹಾಕಿದ್ದ' ಎಂದು ಸಹ ಹೇಳಿದ್ದಾರೆ.
ಸೆಟ್ನಲ್ಲಿ ಎಲ್ಲರೆದರು ಕೂಗಾಡಿದ್ದ ಹೇಮಂತ್
ಚಿತ್ರಾ ನಟಿಸುತ್ತಿದ್ದ ಧಾರಾವಾಹಿಯ ಸಹನಟ-ನಟಿಯರು ಹೇಳಿರುವಂತೆ, ಚಿತ್ರಾ ಆತ್ಮಹತ್ಯೆ ಮಾಡಿಕೊಂಡ ದಿನ, ಚಿತ್ರಾಳ ಪತಿ ಹೇಮಂತ್ ಸೆಟ್ಗೆ ಬಂದಿದ್ದ, ಸೆಟ್ನಲ್ಲಿಯೇ ಎಲ್ಲರ ಎದುರು ಚಿತ್ರಾ ಜೊತೆ ಜಗಳವಾಡಿ, ಆಕೆಯ ಶೀಲದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ.

ಜಗಳವಾಡಿದ್ದ ಪತಿ ಹೇಮಂತ್
ಹೋಟೆಲ್ಗೆ ಹೋದ ಬಳಿಕವೂ ಹೇಮಂತ್ ಜಗಳ ಮುಂದುವರೆಸಿದ್ದು, ಜೋರಾಗಿ ಕೂಗಾಡಿ, ಮದುವೆಯನ್ನು ಅಂತ್ಯಗೊಳಿಸುವುದಾಗಿ ಬೆದರಿಸಿದ್ದ. ಆ ನಂತರ ಚಿತ್ರಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಹೇಮಂತ್ ಅನ್ನು ಪೊಲೀಸರು ಬಂಧಿಸಿದ್ದಾರೆ, ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ಸತ್ಯ ಇನ್ನಷ್ಟೆ ಹೊರಬರಬೇಕಿದೆ.
ಗುಟ್ಟಾಗಿ ಮದುವೆಯಾಗಿದ್ದ ಚಿತ್ರಾ
ವಿಜೆ ಚಿತ್ರಾ ಹಾಗೂ ಹೇಮಂತ್ ಇದೇ ವರ್ಷದ ಅಕ್ಟೋಬರ್ 19 ರಂದು ಗುಟ್ಟಾಗಿ ರಿಜಿಸ್ಟರ್ ಮದುವೆ ಆಗಿದ್ದರು. ಇಬ್ಬರೂ ಫೆಬ್ರವರಿಯಲ್ಲಿ ತಮ್ಮ ಮದುವೆಯನ್ನು ಬಹಿರಂಗಗೊಳಿಸುವ ಯೋಚನೆಯಲ್ಲಿದ್ದರು. ಆದರೆ ಚಿತ್ರಾ ಮನೆಯವರಿಗೆ ಈ ಮದುವೆ ಇಷ್ಟವಿರಲಿಲ್ಲ.
This News Article is a Copy of FILMIBEAT
26-02-26 10:01 pm
HK News Staffer
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
27-02-26 06:14 am
HK News Staffer
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
26-02-26 01:21 pm
HK News Staffer
Mangalore: ಕುರ್ನಾಡಿನ ವೃದ್ಧ ದಂಪತಿಗೆ ನೂತನ ಮನೆ ಹ...
26-02-26 10:37 am
ಮಂಗಳೂರು ವಿವಿಯ ಯಕ್ಷಮಂಗಳ ಪ್ರಶಸ್ತಿ ಪ್ರಕಟ ; ಕಪ್ಪೆ...
25-02-26 05:41 pm
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
26-02-26 11:04 pm
mangalore
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm
Vexon fraud Company, Mangalore: ಮಂಗಳೂರಿನಲ್ಲಿ...
26-02-26 03:48 pm
Mangalore Blackmail, Crime: ಖಾಸಗಿ ವೀಡಿಯೋ ಮುಂದ...
24-02-26 10:07 pm
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm