ಬ್ರೇಕಿಂಗ್ ನ್ಯೂಸ್
18-12-20 05:15 pm Source: FILMIBEAT Manjunatha C ಸಿನಿಮಾ
ತಮಿಳುನಾಡು, ಡಿ. 18: ತಮಿಳು ಧಾರಾವಾಹಿ ನಟಿ, ನಿರೂಪಕಿ ವಿಜೆ ಚಿತ್ರಾ ಆತ್ಮಹತ್ಯೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಆರಂಭದಲ್ಲಿ ವಿಜೆ ಚಿತ್ರಾ ಸಾವಿಗೆ ಪತಿ ಹೇಮಂತ್ ನೇರ ಕಾರಣ ಎನ್ನಲಾಗಿತ್ತು, ನಂತರ ವಿಜೆ ಚಿತ್ರಾ ತಮ್ಮ ಮನೆಯವರೊಂದಿಗೆ ಉತ್ತಮ ಸಂಬಂಧ ಹೊಂದಿರಲಿಲ್ಲ, ಚಿತ್ರಾ ಸಾಯುವ ದಿನ ತಾಯಿಯೊಂದಿಗೆ ಗಂಟೆಗಟ್ಟಲೆ ಮಾತನಾಡಿ ಜಗಳವಾಡಿದ್ದರು ಎನ್ನಲಾಯಿತು.
ಈಗ ವಿಜೆ ಚಿತ್ರಾ ಆಪ್ತ ಗೆಳತಿಯೊಬ್ಬರು ಮಾಧ್ಯಮಗಳ ಮುಂದೆ ಹೇಳಿಕೆ ಕೊಟ್ಟಿದ್ದು, ಈ ಹೇಳಿಕೆ ಆಧರಿಸಿ ನೋಡುವುದಾದರೆ, ವಿಜೆ ಚಿತ್ರಾ ಸಾವಿನ ಹಿಂದೆ ತೆಲುಗಿನ ಖ್ಯಾತ ನಟನೊಬ್ಬನ ಕೈವಾಡವಿದ್ದಂತಿದೆ. ಮಾಧ್ಯಮದೊಟ್ಟಿಗೆ ಮಾತನಾಡಿರುವ ವಿಜೆ ಚಿತ್ರಾ ಆಪ್ತ ಗೆಳತಿ, ತೆಲುಗು ಯುವ ನಟನೊಬ್ಬನೊಂದಿಗೆ ವಿಜೆ ಚಿತ್ರಾಗೆ ಗೆಳತನವಿತ್ತು. ರಾಜಕೀಯ ಪ್ರಭಾವವನ್ನೂ ಹೊಂದಿರುವ ಆ ನಟ, ಚಿತ್ರಾಳ ಖಾಸಗಿ ವಿಡಿಯೋ ಮಾಡಿಕೊಂಡು, ಅದನ್ನು ಚಿತ್ರಾಳ ಪತಿ ಹೇಮಂತ್ ಗೆ ತೋರಿಸುವುದಾಗಿ ಬೆದರಿಕೆ ಹಾಕುತ್ತಿದ್ದ' ಎಂದಿದ್ದಾರೆ.

ಚಿತ್ರಾ ಗೆಳತಿಯ ಸ್ಪೋಟಕ ಹೇಳಿಕೆ
ಚಿತ್ರಾ ಗೆಳತಿಯ ಈ ಹೇಳಿಕೆ ಚಿತ್ರಾ ಸಾವಿನ ಪ್ರಕರಣಕ್ಕೆ ಹೊಸ ತಿರುವು ನೀಡಿದೆ. 'ಆ ಯುವ ನಟ ಚಿತ್ರಾಳಿಗೆ ಸಾಕಷ್ಟು ಬೆದರಿಸಿದ್ದ, ಅಲ್ಲದೆ, 2021 ರ ಹೊಸವರ್ಷದಂದು ಒಂದು ರಾಜಕೀಯ ಪಾರ್ಟಿಗೆ ಬಂದು ಅಲ್ಲಿಯೇ ಉಳಿದುಕೊಳ್ಳಬೇಕೆಂದು ಒತ್ತಡ ಹಾಕಿದ್ದ' ಎಂದು ಸಹ ಹೇಳಿದ್ದಾರೆ.
ಸೆಟ್ನಲ್ಲಿ ಎಲ್ಲರೆದರು ಕೂಗಾಡಿದ್ದ ಹೇಮಂತ್
ಚಿತ್ರಾ ನಟಿಸುತ್ತಿದ್ದ ಧಾರಾವಾಹಿಯ ಸಹನಟ-ನಟಿಯರು ಹೇಳಿರುವಂತೆ, ಚಿತ್ರಾ ಆತ್ಮಹತ್ಯೆ ಮಾಡಿಕೊಂಡ ದಿನ, ಚಿತ್ರಾಳ ಪತಿ ಹೇಮಂತ್ ಸೆಟ್ಗೆ ಬಂದಿದ್ದ, ಸೆಟ್ನಲ್ಲಿಯೇ ಎಲ್ಲರ ಎದುರು ಚಿತ್ರಾ ಜೊತೆ ಜಗಳವಾಡಿ, ಆಕೆಯ ಶೀಲದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ.

ಜಗಳವಾಡಿದ್ದ ಪತಿ ಹೇಮಂತ್
ಹೋಟೆಲ್ಗೆ ಹೋದ ಬಳಿಕವೂ ಹೇಮಂತ್ ಜಗಳ ಮುಂದುವರೆಸಿದ್ದು, ಜೋರಾಗಿ ಕೂಗಾಡಿ, ಮದುವೆಯನ್ನು ಅಂತ್ಯಗೊಳಿಸುವುದಾಗಿ ಬೆದರಿಸಿದ್ದ. ಆ ನಂತರ ಚಿತ್ರಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಹೇಮಂತ್ ಅನ್ನು ಪೊಲೀಸರು ಬಂಧಿಸಿದ್ದಾರೆ, ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ಸತ್ಯ ಇನ್ನಷ್ಟೆ ಹೊರಬರಬೇಕಿದೆ.
ಗುಟ್ಟಾಗಿ ಮದುವೆಯಾಗಿದ್ದ ಚಿತ್ರಾ
ವಿಜೆ ಚಿತ್ರಾ ಹಾಗೂ ಹೇಮಂತ್ ಇದೇ ವರ್ಷದ ಅಕ್ಟೋಬರ್ 19 ರಂದು ಗುಟ್ಟಾಗಿ ರಿಜಿಸ್ಟರ್ ಮದುವೆ ಆಗಿದ್ದರು. ಇಬ್ಬರೂ ಫೆಬ್ರವರಿಯಲ್ಲಿ ತಮ್ಮ ಮದುವೆಯನ್ನು ಬಹಿರಂಗಗೊಳಿಸುವ ಯೋಚನೆಯಲ್ಲಿದ್ದರು. ಆದರೆ ಚಿತ್ರಾ ಮನೆಯವರಿಗೆ ಈ ಮದುವೆ ಇಷ್ಟವಿರಲಿಲ್ಲ.
This News Article is a Copy of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm