ಬ್ರೇಕಿಂಗ್ ನ್ಯೂಸ್
19-12-20 01:08 pm Source: FILMIBEAT Bharath Kumar K ಸಿನಿಮಾ
ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದಲ್ಲಿ ಮೂಡಿ ಬಂದಿದ್ದ ಸೂಪರ್ ಹಿಟ್ ಚಿತ್ರ ಬಾಜಿರಾವ್ ಮಸ್ತಾನಿ ತೆರೆಕಂಡ ಡಿಸೆಂಬರ್ 18ಕ್ಕೆ ಐದು ವರ್ಷ ಕಳೆದಿದೆ. ಬಾಲಿವುಡ್ ಇಂಡಸ್ಟ್ರಿಯಲ್ಲಿ ಹೊಸ ದಾಖಲೆ ಸೃಷ್ಟಿಸಿದ್ದ ಸಿನಿಮಾಗೆ ಐದು ವರ್ಷ ಪೂರೈಸಿದ ಸಂದರ್ಭದಲ್ಲಿ ದೀಪಿಕಾ ಪಡುಕೋಣೆ ಸಂತಸ ಹಂಚಿಕೊಂಡಿದ್ದಾರೆ. ಬಾಜಿರಾವ್ ಮಸ್ತಾನಿ ಚಿತ್ರದ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಜೊತೆಗಿನ ಫೋಟೋ ಹಂಚಿಕೊಂಡಿರುವ ದೀಪಿಕಾ, ಮಸ್ತಾನಿಯ ವ್ಯಕ್ತಿತ್ವವನ್ನು ಹೊಗಳಿದ್ದಾರೆ. ಅಷ್ಟೇ ಅಲ್ಲ, ತಮ್ಮ ಇನ್ಸ್ಟಾಗ್ರಾಂನಲ್ಲಿ ಪ್ರೋಫೈಲ್ ಮಸ್ತಾನಿ ಫೋಟೋ ಮತ್ತು ಹೆಸರನ್ನು ಸಹ ಬದಲಾಯಿಸಿಕೊಂಡಿದ್ದಾರೆ.
ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಬಾಜಿರಾವ್ ಮಸ್ತಾನಿ 2015ರ ಡಿಸೆಂಬರ್ 19 ರಂದು ಬಿಡುಗಡೆಯಾಗಿತ್ತು. ದೀಪಿಕಾ ಪಡುಕೋಣೆ, ರಣ್ವೀರ್ ಸಿಂಗ್, ಪ್ರಿಯಾಂಕಾ ಚೋಪ್ರಾ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದರು.
ಈ ಸಿನಿಮಾ ಬಿಡುಗಡೆ ವೇಳೆ ಸಂದರ್ಶನವೊಂದರಲ್ಲಿ ಮಾತನಾಡಿದ್ದ ದೀಪಿಕಾ ಪಡುಕೋಣೆ ''ಇದು ನನ್ನ ಜೀವನದಲ್ಲಿ ಅತ್ಯಂತ ಕಷ್ಟದ ಸಿನಿಮಾ'' ಎಂದು ಹೇಳಿಕೊಂಡಿದ್ದರು. ''ಬಾಜಿರಾವ್ ಮಸ್ತಾನಿ ನನ್ನ ವೃತ್ತಿ ಜೀವನದಲ್ಲಿ ಕಷ್ಟದ ಸಿನಿಮಾ. ನಾನು ಪ್ರಯತ್ನದ ಬಗ್ಗೆ ಮಾತನಾಡುವುದಿಲ್ಲ ಏಕಂದ್ರೆ ಅಂತಿಮವಾಗಿ ಅಭಿನಯ ಮುಖ್ಯವಾಗುತ್ತದೆ. ಬಾಜಿರಾವ್ ಮಸ್ತಾನಿ ಚಿತ್ರಕ್ಕೆ ಹೋಲಿಸಿಕೊಂಡರೆ ರಾಮ್ ಲೀಲಾ ಸುಲಭವಾಗಿತ್ತು'' ಎಂದು 2015ರ ಸಂದರ್ಶನವೊಂದರಲ್ಲಿ ಹೇಳಿದ್ದರು.

ಅಂದ್ಹಾಗೆ, ಬಾಜಿರಾವ್ ಮಸ್ತಾನಿ ಚಿತ್ರವನ್ನು ಆರಂಭದಲ್ಲಿ ಸಲ್ಮಾನ್ ಖಾನ್ ಮತ್ತು ಐಶ್ವರ್ಯ ರೈ ಅವರ ಜೊತೆ ಮಾಡಬೇಕೆಂದು ಸಂಜಯ್ ಲೀಲಾ ಬನ್ಸಾಲಿ ನಿರ್ಧರಿಸಿದ್ದರು. ಆದ್ರೆ, ಆಗಿನ ಸಮಯಕ್ಕೆ ಆದ ಕೆಲವು ಬದಲಾವಣೆಗಳಿಂದ ಅದು ಸಾಧ್ಯವಾಗಿಲ್ಲ.
ನಂತರ ರಾಣಿ ಮುಖರ್ಜಿ ಮತ್ತು ಕರೀನಾ ಅವರನ್ನು ಸಹ ಸಂಪರ್ಕಿಸಲಾಗಿತ್ತು. ಇದೆಲ್ಲದಕ್ಕೂ ಮುಂಚೆ ಅಜಯ್ ದೇವಗನ್, ಶಾರೂಖ್ಖಾನ್, ಹೃತಿಕ್ ರೋಷನ್, ಕತ್ರಿನಾ ಕೈಫ್ ಅವರ ಹೆಸರುಗಳು ಸಹ ಈ ಚಿತ್ರದಲ್ಲಿ ಕೇಳಿ ಬಂದಿತ್ತು. ಆದ್ರೆ, ಅಂತಿಮವಾಗಿ ರಣ್ವೀರ್ ಸಿಂಗ್, ದೀಪಿಕಾ ಪಡುಕೋಣೆ, ಪ್ರಿಯಾಂಕಾ ಚೋಪ್ರಾಗೆ ಈ ಅದೃಷ್ಟದ ಬಾಗಿಲು ತೆರೆಯಿತು.
This News Article is a Copy of FILMIBEAT
31-10-25 08:10 pm
HK News Desk
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
31-10-25 10:47 pm
Mangalore Correspondent
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
31-10-25 10:57 pm
Mangalore Correspondent
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm