ಬ್ರೇಕಿಂಗ್ ನ್ಯೂಸ್
22-12-20 02:22 pm Source: FILMIBEAT Shruthi Gk ಸಿನಿಮಾ
ಇತ್ತೀಚಿನ ದಿನಗಳಲ್ಲಿ ಪ್ಯಾನ್ ಇಂಡಿಯಾ ಸಿನಿಮಾಗಳು ಹೆಚ್ಚಾಗುತ್ತಿವೆ. ಕಲಾವಿದರು ಗಡಿಗೂ ಮೀರಿ ಖ್ಯಾತಿಗಳಿಸುವ ಜೊತೆಗೆ ಅಭಿಮಾನಿ ಬಳಗವನ್ನು ಹೆಚ್ಚಿಸಿಕೊಳ್ಳುತ್ತಿದ್ದಾರೆ. ಕೇವಲ ಒಂದೇ ಭಾಷೆಗೆ ಸೀಮಿತವಾಗದೆ ಬೇರೆ ಬೇರೆ ಭಾಷೆಯಲ್ಲೂ ಮಿಂಚುವ ಮೂಲಕ ತನ್ನ ಖ್ಯಾತಿಯನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾ ಜೊತೆಗೆ ಕಲಾವಿದರು ಸಹ ಬೇರೆ ಬೇರೆ ಭಾಷೆಯಲ್ಲಿ ಸಿನಿಮಾ ಮಾಡುತ್ತಿದ್ದಾರೆ.
ಕನ್ನಡದ ಸಾಕಷ್ಟು ಕಲಾವಿದರು ಬೇರೆ ಭಾಷೆಯಲ್ಲಿ ಮಿಂಚುತ್ತಿದ್ದಾರೆ. ಈ ಸಾಲಿಗೆ ಈಗ ನಟ ನೀನಾಸಂ ಸತೀಶ್ ಸಹ ಸೇರ್ಪಡೆಗೊಂಡಿದ್ದಾರೆ. ಹೌದು, ನಟ ನೀನಾಸಂ ಸತೀಶ್ ತಮಿಳು ಸಿನಿಮಾರಂಗಕ್ಕೆ ಕಾಲಿಟ್ಟಿದ್ದಾರೆ. ಸತೀಶ್ ಕಾಲಿವುಡ್ ಗೆ ಎಂಟ್ರಿ ಕೊಡುತ್ತಿದ್ದಾರೆ ಎನ್ನುವ ವಿಚಾರ ಈಗಾಗಲೇ ಸದ್ದು ಮಾಡುತ್ತಿತ್ತು. ಆದರೆ ಹೆಚ್ಚಿನ ಮಾಹಿತಿ ಬಿಟ್ಟುಕೊಟ್ಟಿರಲಿಲ್ಲ.
ಇದೀಗ ತಮಿಳು ಸಿನಿಮಾರಂಗದ ಎಂಟ್ರಿಗೆ ಸಮಯ ನಿಗದಿಯಾಗಿದೆ. ಸತೀಶ್ ನಟಿಸುತ್ತಿರುವ ಚಿತ್ರಕ್ಕೆ 'ಪಗೆಮನುಕ್ಕು ಅರುಲ್ವಾಯ್' ಎಂದು ಶೀರ್ಷಿಕೆ ಇಡಲಾಗಿದ್ದು, ಚಿತ್ರಕ್ಕೆ ಅನೀಶ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಅಂದಹಾಗೆ ಸತೀಶ್ ಮುಂದಿನ ವರ್ಷ ಜನವರಿಯಿಂದ ತಮಿಳು ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಲಿದ್ದಾರೆ.

ಸತೀಶ್ ಜೊತೆ ಚಿತ್ರದಲ್ಲಿ ಖ್ಯಾತ ನಟ ಸಸಿಕುಮಾರ್ ನಟಿಸುತ್ತಿದ್ದಾರೆ. ಸಸಿಕುಮಾರ್ ಮತ್ತು ಸತೀಶ್ ನಡುವೆ ನೇರ ಹಣಾಹಣಿ ಇರಲಿದೆಯಂತೆ. ಚಿತ್ರದ ಬಹುತೇಕ ಭಾಗ ಜೈಲಿನಲ್ಲೇ ಚಿತ್ರೀಕರಣವಾಗಲಿದೆ ಎನ್ನಲಾಗುತ್ತಿದೆ. ಈಗಾಗಲೇ ಚಿತ್ರೀಕರಣ ಪ್ರಾರಂಭವಾಗಿದ್ದು, ಸತೀಶ್ ಮುಂದಿನ ತಿಂಗಳಿಂದ ಎಂಟ್ರಿ ಕೊಡಲಿದ್ದಾರೆ. ಚಿತ್ರದಲ್ಲಿ ಸತೀಶ್ ಖೈದಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಈ ಪಾತ್ರಕ್ಕಾಗಿ ಸತೀಶ್ ಎಲ್ಲಾ ರೀತಿಯ ತಯಾರಿ ಮಾಡಿಕೊಂಡಿದ್ದಾರೆ. ಸತೀಶ್ ನೀನಾಸಂ ಸದ್ಯ ಕನ್ನಡದಲ್ಲಿ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಪೆಟ್ರೊಮ್ಯಾಕ್ಸ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಜೊತೆಗೆ ದಸರಾ, ಮ್ಯಾಟ್ನಿ ಸಿನಿಮಾಗಳು ಸಾಲಿನಲ್ಲಿವೆ. ಇನ್ನೂ ಶ್ರದ್ಧಾ ಶ್ರೀನಾಥ್ ಜೊತೆ ನಟಿಸಿರುವ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ.
This News Article is a Copy of FILMIBEAT
09-01-26 04:42 pm
Bangalore Correspondent
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
09-01-26 11:00 pm
HK News Desk
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
09-01-26 09:18 pm
Mangalore Correspondent
ಉದ್ಯೋಗ ಖಾತ್ರಿ ಯೋಜನೆಯನ್ನೇ ಮೋದಿ ಕೊಂದಾಕಿದ್ದಾರೆ,...
09-01-26 05:47 pm
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm