ಬ್ರೇಕಿಂಗ್ ನ್ಯೂಸ್
23-12-20 12:06 pm Source: FILMIBEAT Shruthi Gk ಸಿನಿಮಾ
ಸ್ಯಾಂಡಲ್ ವುಡ್ ಕೃಷ್ಣ ಎಂದೇ ಖ್ಯಾತಿಗಳಿಸಿರುವ ನಟ ಅಜಯ್ ರಾವ್. ಕೃಷ್ಣನ ಸರಣಿಯ ಸಿನಿಮಾ ಮೂಲಕ ಅಭಿಮಾನಿಗಳ ಮನಗೆದ್ದಿರುವ ನಟ ಅಜಯ್ ರಾವ್ ಇದೀಗ ಹೊಸ ಸಿನಿಮಾ ಅನೌನ್ಸ್ ಆಗಿದ್ದು, ಮತ್ತೆ ಕೃಷ್ಣನ ಅವತಾರ ಎತ್ತಲು ಸಜ್ಜಾಗಿದ್ದಾರಾ? ಎನ್ನುವ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ. ಕೃಷ್ಣನ್ ಲವ್ ಸ್ಟೋರಿ ಸಿನಿಮಾದ ಭರ್ಜರಿ ಯಶಸ್ಸಿನ ಬಳಿಕ ಕೃಷ್ಣ ಲೀಲಾ, ಕೃಷ್ಣ ರುಕ್ಕು, ಕೃಷ್ಣನ್ ಮ್ಯಾರೇಜ್ ಸ್ಟೋರಿ ಹೀಗೆ ಸಾಲು ಸಾಲು ಕೃಷ್ಣನ ಸರಣಿಗಳಲ್ಲಿ ಅಜಯ್ ರಾವ್ ನಟಿಸಿದ್ದಾರೆ. ಇದೀಗ ಮತ್ತೊಂದು ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದು, ಚಿತ್ರಕ್ಕೆ ಶಶಾಂಕ್ ಕಥೆ ರಚಿಸಿದ್ದಾರೆ. ಶಶಾಂಕ್ ಮತ್ತು ಅಜಯ್ ರಾವ್ ಅವರದ್ದು ಹಿಟ್ ಜೋಡಿ. ಕೃಷ್ಣನ್ ಲವ್ ಸ್ಟೋರಿ ಮತ್ತು ಕೃಷ್ಣ ಲೀಲಾ ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದು ಶಶಾಂಕ್. ಇದೀಗ ಮತ್ತೆ ಅಜಯ್ ರಾವ್ ಗೆ ಕಥೆ ಬರೆದಿದ್ದಾರೆ ಅಂದ್ಮೇಲೆ ಕೃಷ್ಣ ಸೀರಿಸ್ ಆಗಿರಲಿದೆ ಎನ್ನುವುದು ಚಿತ್ರಪ್ರಿಯರ ಲೆಕ್ಕಾಚಾರ.
ಅಂದಹಾಗೆ ಶಶಾಂಕ್ ಕಥೆ ಮಾತ್ರ ಬರೆದಿದ್ದಾರೆ. ನಿರ್ದೇಶನದ ಜವಾಬ್ದಾರಿಯನ್ನು ಬೇರೆಯವರಿಗೆ ವಹಿಸಿದ್ದಾರೆ. ಚಿತ್ರಕ್ಕೆ ಶಂಕರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಮೊದಲು ರಾಜಾ ಹುಲಿ, ಜಂಟಲ್ ಮ್ಯಾನ್ ಸೇರಿದಂತೆ ಸುಮಾರು 15ಕ್ಕೂ ಹೆಚ್ಚು ಸಿನಿಮಾಗಳಿಗೆ ಸಹನಿರ್ದೇಶಕರಾಗಿ ಕೆಲಸ ಮಾಡಿದ್ದ ಶಂಕರ್ ಇದೀಗ ಪೂರ್ಣ ಪ್ರಮಾಣದ ನಿರ್ದೇಶಕರಾಗಿ ಎಂಟ್ರಿ ಕೊಡುತ್ತಿದ್ದಾರೆ.

ನಿರ್ದೇಶಕ ಗುರುದೇಶಪಾಂಡೆ ಬ್ಯಾನರ್ ನಲ್ಲಿ ಸಿನಿಮಾ ಮೂಡಿಬರುತ್ತಿದೆ. ಹೊಸ ಸಿನಿಮಾ ಮುಹೂರ್ತ ಮುಂದಿನ ವರ್ಷ ಜನವರಿಯಲ್ಲಿ ನೆರವೇರಲಿದೆ. ಜನವರಿ 24ರಂದು ಮುಹೂರ್ತ ಮಾಡಿಕೊಳ್ಳುವ ಮೂಲಕ ಅಧಿಕೃತವಾಗಿ ಚಾಲನೆ ಸಿಗಲಿದೆ. ಇನ್ನು ಉಳಿದಂತೆ ಅಜಯ್ ರಾವ್ ಗೆ ನಾಯಕಿಯಾಗಿ ಟಾಪ್ ನಟಿಯೊಬ್ಬರು ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಯಾರು ಎನ್ನುವುದು ಬಹಿರಂಗವಾಗಿಲ್ಲ. ಸದ್ಯದಲ್ಲೇ ಸಿನಿಮಾದ ಬಗ್ಗೆ ಹೆಚ್ಚಿನ ಮಾಹಿತಿ ಹೊರಬೀಳಲಿದೆ.
This News Article is a Copy of FILMIBEAT
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 02:25 pm
HK News Staffer
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm