ಬ್ರೇಕಿಂಗ್ ನ್ಯೂಸ್
23-12-20 12:17 pm Source: FILMIBEAT Shruthi Gk ಸಿನಿಮಾ
ಬಾಲಿವುಡ್ ನ ಯಶಸ್ವಿ ನಟ ಆಯುಷ್ಮಾನ್ ಖುರಾನ ಇದೀಗ ಡಾಕ್ಟರ್ ಆಗಿದ್ದಾರೆ. ಅಂದಹಾಗೆ ಸಿನಿಮಾ ಬಿಟ್ಟು ವೈದ್ಯಕೀಯ ವೃತ್ತಿ ಆರಂಭಿಸಿದ್ರಾ ಅಂತ ಅಚ್ಚರಿ ಪಡಬೇಡಿ, ಆಯುಷ್ಮಾನ್ ಡಾಕ್ಟರ್ ಆಗಿದ್ದು ಸಿನಿಮಾದಲ್ಲಿ. ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾಗಳನ್ನು ನೀಡುತ್ತಾ, ತರಹೇವಾರಿ ಪಾತ್ರಗಳ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿರುವ ಆಯುಷ್ಮಾನ್ ಬಾಲಿವುಡ್ ನ ಸ್ಟಾರ್ ನಟರ ಸಾಲಿನಲ್ಲಿದ್ದಾರೆ.
ಅಳೆದು ತೂಗಿ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುವ ಆಯುಷ್ಮಾನ್ ಇದೀಗ ಡಾಕ್ಟರ್ ಆಗಿ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಹೌದು, ಆಯುಷ್ಮಾನ್ ಹೊಸ ಸಿನಿಮಾಗೆ 'ಡಾಕ್ಟರ್ ಜಿ' ಎಂದು ಟೈಟಲ್ ಇಡಲಾಗಿದೆ. ಡಾಕ್ಟರ್ ಜಿ ಕಾಮಿಡಿ ಸಿನಿಮಾವಾಗಿದೆ. ಈ ಬಗ್ಗೆ ಮಾತನಾಡಿರುವ ಆಯುಷ್ಮಾನ್, ಇದೊಂದು ಫ್ರೆಶ್ ಕಥೆಯಾಗಿದ್ದು, ತುಂಬಾ ಇಷ್ಟವಾಗಿದೆ. ಮೊದಲ ಬಾರಿಗೆ ಡಾಕ್ಟರ್ ಆಗಿ ಕಾಣಿಸಿಕೊಳ್ಳುತ್ತಿದ್ದೀನಿ. ಈ ಸಿನಿಮಾದಲ್ಲಿ ನಟಿಸಲು ಸಖತ್ ಎಕ್ಸಾಯಿಟ್ ಆಗಿದ್ದೀನಿ ಎಂದು ಹೇಳಿದ್ದಾರೆ.
ವಿಶೇಷ ಎಂದರೆ ಚಿತ್ರಕ್ಕೆ ಅನುರಾಗ್ ಕಶ್ಯಪ್ ಸಹೋದರಿ ಅನುಭೂತಿ ಕಶ್ಯಪ್ ನಿರ್ದೇಶನ ಮಾಡುತ್ತಿದ್ದಾರೆ. ಹಲವು ಕಿರು ಸಿನಿಮಾಗಳನ್ನು ಮಾಡಿರುವ ಅನುಭೂತಿ ಕಶ್ಯಪ್ ಡಾಕ್ಟರ್ ಜಿ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕಿಯಾಗಿ ಬಾಲಿವುಡ್ ಗೆ ಎಂಟ್ರಿ ಕೊಡುತ್ತಿದ್ದಾರೆ.
ಜಂಗ್ಲಿ ಪಿಕ್ಟರ್ಸ್ ಸಿನಿಮಾಗೆ ಬಂಡವಾಳ ಹೂಡುತ್ತಿದೆ. ಈ ಹಿಂದೆ ಬರೇಲಿ ಕೀ ಬರ್ಫಿ, ಬದಾಯಿ ಹೋ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದ ಈ ಸಂಸ್ಥೆ ಮತ್ತ ಆಯುಷ್ಮಾನ್ ಜೊತೆ ಸಿನಿಮಾ ಮಾಡುತ್ತಿದ್ದಾರೆ. ಸದ್ಯ ಸಿನಿಮಾ ಅನೌನ್ಸ್ ಮಾಡಿರುವ ಚಿತ್ರತಂಡ ಉಳಿದ ಪಾತ್ರ ವರ್ಗವನ್ನು ಸದ್ಯದಲ್ಲೇ ಬಹಿರಂಗ ಪಡಿಸಲಿದೆ. ಸಿನಿಮಾ ಮುಂದಿನ ವರ್ಷ ಸೆಟ್ಟೇರಲಿದೆ.
This News Article is a Copy of FILMIBEAT
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm