ಬ್ರೇಕಿಂಗ್ ನ್ಯೂಸ್
24-12-20 02:34 pm Source: FILMIBEAT Manjunatha C ಸಿನಿಮಾ
ಬೆಂಗಳೂರು, ಡಿ.24: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿ ಪರಪ್ಪನ ಅಗ್ರಹಾರದಲ್ಲಿ ದಿನ ಕಳೆಯುತ್ತಿರುವ ನಟಿ ರಾಗಿಣಿ ದ್ವಿವೇದಿ ಆರೋಗ್ಯದಲ್ಲಿ ವ್ಯತ್ಯಯವಾಗಿದೆ. ನಿನ್ನೆ (ಡಿಸೆಂಬರ್ 24) ರಾತ್ರಿ ರಾಗಿಣಿ ಆರೋಗ್ಯದಲ್ಲಿ ವ್ಯತ್ಯವಾಗಿದ್ದು, ಕೂಡಲೇ ಅವರನ್ನು ಜೈಲಿನಿಂದ ನಗರದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ರಾಗಿಣಿ ಉಸಿರಾಟದ ತೊಂದರೆ ಮತ್ತು ಹೊಟ್ಟೆ ನೋವಿನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಜೈಲು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರಾದರೂ, ನಿನ್ನೆ ರಾತ್ರಿ ಸಮಸ್ಯೆ ಹೆಚ್ಚಾದ ಕಾರಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಟಿ ರಾಗಿಣಿಯನ್ನು ಡ್ರಗ್ಸ್ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ಸೆಪ್ಟೆಂಬರ್ 4 ರಂದು ಬಂಧಿಸಿದ್ದರು. ಆರಂಭದಲ್ಲಿ ಕೆಲ ದಿನ ಸಿಸಿಬಿ ವಶದಲ್ಲಿದ್ದ ರಾಗಿಣಿ ನಂತರ ನ್ಯಾಯಾಂಗ ಬಂಧನದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ರಾಗಿಣಿ ನಂತರ ಬಂಧನಕ್ಕೆ ಒಳಗಾಗಿದ್ದ ಸಂಜನಾ ಗಲ್ರಾನಿಗೆ ಕೆಲವು ದಿನಗಳ ಮುಂಚೆಯಷ್ಟೆ ಜಾಮೀನು ದೊರೆತಿದೆ.
ಸಂಜನಾ ಗಲ್ರಾನಿಯು ಆರೋಗ್ಯ ಕಾರಣ ಮುಂದಿಟ್ಟು ಜಾಮೀನಿಗೆ ಅರ್ಜಿ ಹಾಕಿದ್ದರು, ಅಂತೆಯೇ ಆರೋಗ್ಯ ವಿಷಯದ ಆಧಾರದಲ್ಲಿ ಸಂಜನಾ ಗೆ ಜಾಮೀನು ನೀಡಲಾಗಿದೆ. ಇದೀಗ ರಾಗಿಣಿಗೂ ಆರೋಗ್ಯ ಸಮಸ್ಯೆ ಎದುರಾಗಿದ್ದು, ರಾಗಿಣಿಯೂ ಸಹ ಆರೋಗ್ಯದ ಕಾರಣ ಮುಂದಿಟ್ಟು ಜಾಮೀನಿಗೆ ಅರ್ಜಿ ಹಾಕುವ ಸಾಧ್ಯತೆ ಇದೆ.
This News Article is a Copy of FILMIBEAT
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm