ಬ್ರೇಕಿಂಗ್ ನ್ಯೂಸ್
25-12-20 03:09 pm Source: vijaykarnataka ಸಿನಿಮಾ
ಹೈದರಾಬಾದ್, ಡಿ.25: ಕಳೆದ ಕೆಲವು ದಿನಗಳಿಂದ 'ಅಣ್ಣಾಥೆ' ಸಿನಿಮಾದ ಶೂಟಿಂಗ್ನಲ್ಲಿ ತೊಡಗಿಕೊಂಡಿದ್ದ ನಟ ರಜನಿಕಾಂತ್ ಅವರಿಗೆ ತೀವ್ರ ರಕ್ತದೊತ್ತಡದ (ಬಿ.ಪಿ.) ಸಮಸ್ಯೆ ಎದುರಾಗಿದೆ. ಹಾಗಾಗಿ ಅವರನ್ನು ಹೈದರಾಬಾದ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ 'ತಲೈವಾ' ಆರೋಗ್ಯ ಹೇಗಿದೆ ಎಂಬ ಬಗ್ಗೆ ಆಸ್ಪತ್ರೆಯು ಹೇಳಿಕೆ ಬಿಡುಗಡೆ ಮಾಡಿದೆ.
ಬಹುನಿರೀಕ್ಷಿತ 'ಅಣ್ಣಾಥೆ' ಸಿನಿಮಾದ ಶೂಟಿಂಗ್ನಲ್ಲಿ ಭಾಗವಹಿಸಿದ್ದ ಕೆಲವರಿಗೆ ಇತ್ತೀಚೆಗಷ್ಟೇ ಕೊರೊನಾ ವೈರಸ್ ತಗುಲಿತ್ತು. ನಾಲ್ಕು ಜನರಿಗೆ ಪಾಸಿಟಿವ್ ವರದಿ ಬಂದ ಬಳಿಕ ರಜನಿಕಾಂತ್ ಅವರನ್ನೂ ಪರೀಕ್ಷೆಗೆ ಒಳಪಡಿಸಲಾಯಿತು. ಅದೃಷ್ಟವಶಾತ್ ಅವರಿಗೆ ನೆಗೆಟಿವ್ ವರದಿ ಬಂದಿದೆ. ಹಾಗಿದ್ದರೂ ಅವರು ಸದ್ಯ ಐಸೊಲೇಟ್ ಆಗಿದ್ದಾರೆ. ಈ ವೇಳೆ ಅವರಿಗೆ ರಕ್ತದೊತ್ತಡ ಸಮಸ್ಯೆ ಕಾಣಿಸಿಕೊಂಡಿದೆ.
ಶುಕ್ರವಾರ (ಡಿ.25) ಬೆಳಗ್ಗೆ ಹೈದರಾಬಾದ್ನ ಖಾಸಗಿ ಆಸ್ಪತ್ರೆಗೆ ರಜನಿಕಾಂತ್ ದಾಖಲಾಗಿದ್ದಾರೆ. 'ಅವರಿಗೆ ಕೋವಿಡ್-19ನ ಯಾವುದೇ ಲಕ್ಷಣಗಳು ಕಾಣಿಸಿಲ್ಲ. ಆದರೂ ಅವರ ಆರೋಗ್ಯದ ಮೇಲೆ ಹೆಚ್ಚಿನ ನಿಗಾ ವಹಿಸಲಾಗುತ್ತಿದೆ. ರಕ್ತದೊತ್ತಡ ಸಹಜ ಸ್ಥಿತಿಗೆ ಬರುವವರೆಗೂ ಅವರನ್ನು ಡಿಸ್ಚಾರ್ಜ್ ಮಾಡಲು ಸಾಧ್ಯವಿಲ್ಲ' ಎಂದು ಆಸ್ಪತ್ರೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಶುಕ್ರವಾರ ಅವರಿಗೆ ಮತ್ತೊಮ್ಮೆ ಕೊರೊನಾ ಪರೀಕ್ಷೆ ಮಾಡಲಾಗಿದೆ.
'ಅಣ್ಣಾಥೆ' ಚಿತ್ರವನ್ನು 'ಸನ್ ಪಿಕ್ಚರ್ಸ್' ಸಂಸ್ಥೆ ನಿರ್ಮಾಣ ಮಾಡುತ್ತಿದೆ. 'ಚಿತ್ರತಂಡದ ನಾಲ್ಕು ಜನರಿಗೆ ಕೊರೊನಾ ಪಾಸಿಟಿವ್ ಆಗಿದೆ. ರಜನಿಕಾಂತ್ ಮತ್ತು ಇತರೆ ತಂತ್ರಜ್ಞರಿಗೆ ನೆಗೆಟಿವ್ ವರದಿ ಬಂದಿದೆ. ಎಲ್ಲರ ಆರೋಗ್ಯದ ಸುರಕ್ಷತೆಯ ದೃಷ್ಟಿಯಿಂದ ಚಿತ್ರೀಕರಣವನ್ನು ಮುಂದೂಡಲಾಗಿದೆ' ಎಂದು ಸನ್ ಪಿಕ್ಚರ್ಸ್ ಗುರುವಾರ ಟ್ವೀಟ್ ಮೂಲಕ ತಿಳಿಸಿದೆ.
This News Article is a Copy of vijaykarnataka
26-02-26 10:01 pm
HK News Staffer
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
27-02-26 06:14 am
HK News Staffer
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
26-02-26 01:21 pm
HK News Staffer
Mangalore: ಕುರ್ನಾಡಿನ ವೃದ್ಧ ದಂಪತಿಗೆ ನೂತನ ಮನೆ ಹ...
26-02-26 10:37 am
ಮಂಗಳೂರು ವಿವಿಯ ಯಕ್ಷಮಂಗಳ ಪ್ರಶಸ್ತಿ ಪ್ರಕಟ ; ಕಪ್ಪೆ...
25-02-26 05:41 pm
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
26-02-26 11:04 pm
mangalore
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm
Vexon fraud Company, Mangalore: ಮಂಗಳೂರಿನಲ್ಲಿ...
26-02-26 03:48 pm
Mangalore Blackmail, Crime: ಖಾಸಗಿ ವೀಡಿಯೋ ಮುಂದ...
24-02-26 10:07 pm
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm