ಬ್ರೇಕಿಂಗ್ ನ್ಯೂಸ್
25-12-20 03:09 pm Source: vijaykarnataka ಸಿನಿಮಾ
ಹೈದರಾಬಾದ್, ಡಿ.25: ಕಳೆದ ಕೆಲವು ದಿನಗಳಿಂದ 'ಅಣ್ಣಾಥೆ' ಸಿನಿಮಾದ ಶೂಟಿಂಗ್ನಲ್ಲಿ ತೊಡಗಿಕೊಂಡಿದ್ದ ನಟ ರಜನಿಕಾಂತ್ ಅವರಿಗೆ ತೀವ್ರ ರಕ್ತದೊತ್ತಡದ (ಬಿ.ಪಿ.) ಸಮಸ್ಯೆ ಎದುರಾಗಿದೆ. ಹಾಗಾಗಿ ಅವರನ್ನು ಹೈದರಾಬಾದ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ 'ತಲೈವಾ' ಆರೋಗ್ಯ ಹೇಗಿದೆ ಎಂಬ ಬಗ್ಗೆ ಆಸ್ಪತ್ರೆಯು ಹೇಳಿಕೆ ಬಿಡುಗಡೆ ಮಾಡಿದೆ.
ಬಹುನಿರೀಕ್ಷಿತ 'ಅಣ್ಣಾಥೆ' ಸಿನಿಮಾದ ಶೂಟಿಂಗ್ನಲ್ಲಿ ಭಾಗವಹಿಸಿದ್ದ ಕೆಲವರಿಗೆ ಇತ್ತೀಚೆಗಷ್ಟೇ ಕೊರೊನಾ ವೈರಸ್ ತಗುಲಿತ್ತು. ನಾಲ್ಕು ಜನರಿಗೆ ಪಾಸಿಟಿವ್ ವರದಿ ಬಂದ ಬಳಿಕ ರಜನಿಕಾಂತ್ ಅವರನ್ನೂ ಪರೀಕ್ಷೆಗೆ ಒಳಪಡಿಸಲಾಯಿತು. ಅದೃಷ್ಟವಶಾತ್ ಅವರಿಗೆ ನೆಗೆಟಿವ್ ವರದಿ ಬಂದಿದೆ. ಹಾಗಿದ್ದರೂ ಅವರು ಸದ್ಯ ಐಸೊಲೇಟ್ ಆಗಿದ್ದಾರೆ. ಈ ವೇಳೆ ಅವರಿಗೆ ರಕ್ತದೊತ್ತಡ ಸಮಸ್ಯೆ ಕಾಣಿಸಿಕೊಂಡಿದೆ.
ಶುಕ್ರವಾರ (ಡಿ.25) ಬೆಳಗ್ಗೆ ಹೈದರಾಬಾದ್ನ ಖಾಸಗಿ ಆಸ್ಪತ್ರೆಗೆ ರಜನಿಕಾಂತ್ ದಾಖಲಾಗಿದ್ದಾರೆ. 'ಅವರಿಗೆ ಕೋವಿಡ್-19ನ ಯಾವುದೇ ಲಕ್ಷಣಗಳು ಕಾಣಿಸಿಲ್ಲ. ಆದರೂ ಅವರ ಆರೋಗ್ಯದ ಮೇಲೆ ಹೆಚ್ಚಿನ ನಿಗಾ ವಹಿಸಲಾಗುತ್ತಿದೆ. ರಕ್ತದೊತ್ತಡ ಸಹಜ ಸ್ಥಿತಿಗೆ ಬರುವವರೆಗೂ ಅವರನ್ನು ಡಿಸ್ಚಾರ್ಜ್ ಮಾಡಲು ಸಾಧ್ಯವಿಲ್ಲ' ಎಂದು ಆಸ್ಪತ್ರೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಶುಕ್ರವಾರ ಅವರಿಗೆ ಮತ್ತೊಮ್ಮೆ ಕೊರೊನಾ ಪರೀಕ್ಷೆ ಮಾಡಲಾಗಿದೆ.
'ಅಣ್ಣಾಥೆ' ಚಿತ್ರವನ್ನು 'ಸನ್ ಪಿಕ್ಚರ್ಸ್' ಸಂಸ್ಥೆ ನಿರ್ಮಾಣ ಮಾಡುತ್ತಿದೆ. 'ಚಿತ್ರತಂಡದ ನಾಲ್ಕು ಜನರಿಗೆ ಕೊರೊನಾ ಪಾಸಿಟಿವ್ ಆಗಿದೆ. ರಜನಿಕಾಂತ್ ಮತ್ತು ಇತರೆ ತಂತ್ರಜ್ಞರಿಗೆ ನೆಗೆಟಿವ್ ವರದಿ ಬಂದಿದೆ. ಎಲ್ಲರ ಆರೋಗ್ಯದ ಸುರಕ್ಷತೆಯ ದೃಷ್ಟಿಯಿಂದ ಚಿತ್ರೀಕರಣವನ್ನು ಮುಂದೂಡಲಾಗಿದೆ' ಎಂದು ಸನ್ ಪಿಕ್ಚರ್ಸ್ ಗುರುವಾರ ಟ್ವೀಟ್ ಮೂಲಕ ತಿಳಿಸಿದೆ.
This News Article is a Copy of vijaykarnataka
09-01-26 04:42 pm
Bangalore Correspondent
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
09-01-26 11:00 pm
HK News Desk
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
09-01-26 09:18 pm
Mangalore Correspondent
ಉದ್ಯೋಗ ಖಾತ್ರಿ ಯೋಜನೆಯನ್ನೇ ಮೋದಿ ಕೊಂದಾಕಿದ್ದಾರೆ,...
09-01-26 05:47 pm
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm