ಬ್ರೇಕಿಂಗ್ ನ್ಯೂಸ್
25-12-20 03:09 pm Source: vijaykarnataka ಸಿನಿಮಾ
ಹೈದರಾಬಾದ್, ಡಿ.25: ಕಳೆದ ಕೆಲವು ದಿನಗಳಿಂದ 'ಅಣ್ಣಾಥೆ' ಸಿನಿಮಾದ ಶೂಟಿಂಗ್ನಲ್ಲಿ ತೊಡಗಿಕೊಂಡಿದ್ದ ನಟ ರಜನಿಕಾಂತ್ ಅವರಿಗೆ ತೀವ್ರ ರಕ್ತದೊತ್ತಡದ (ಬಿ.ಪಿ.) ಸಮಸ್ಯೆ ಎದುರಾಗಿದೆ. ಹಾಗಾಗಿ ಅವರನ್ನು ಹೈದರಾಬಾದ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ 'ತಲೈವಾ' ಆರೋಗ್ಯ ಹೇಗಿದೆ ಎಂಬ ಬಗ್ಗೆ ಆಸ್ಪತ್ರೆಯು ಹೇಳಿಕೆ ಬಿಡುಗಡೆ ಮಾಡಿದೆ.
ಬಹುನಿರೀಕ್ಷಿತ 'ಅಣ್ಣಾಥೆ' ಸಿನಿಮಾದ ಶೂಟಿಂಗ್ನಲ್ಲಿ ಭಾಗವಹಿಸಿದ್ದ ಕೆಲವರಿಗೆ ಇತ್ತೀಚೆಗಷ್ಟೇ ಕೊರೊನಾ ವೈರಸ್ ತಗುಲಿತ್ತು. ನಾಲ್ಕು ಜನರಿಗೆ ಪಾಸಿಟಿವ್ ವರದಿ ಬಂದ ಬಳಿಕ ರಜನಿಕಾಂತ್ ಅವರನ್ನೂ ಪರೀಕ್ಷೆಗೆ ಒಳಪಡಿಸಲಾಯಿತು. ಅದೃಷ್ಟವಶಾತ್ ಅವರಿಗೆ ನೆಗೆಟಿವ್ ವರದಿ ಬಂದಿದೆ. ಹಾಗಿದ್ದರೂ ಅವರು ಸದ್ಯ ಐಸೊಲೇಟ್ ಆಗಿದ್ದಾರೆ. ಈ ವೇಳೆ ಅವರಿಗೆ ರಕ್ತದೊತ್ತಡ ಸಮಸ್ಯೆ ಕಾಣಿಸಿಕೊಂಡಿದೆ.
ಶುಕ್ರವಾರ (ಡಿ.25) ಬೆಳಗ್ಗೆ ಹೈದರಾಬಾದ್ನ ಖಾಸಗಿ ಆಸ್ಪತ್ರೆಗೆ ರಜನಿಕಾಂತ್ ದಾಖಲಾಗಿದ್ದಾರೆ. 'ಅವರಿಗೆ ಕೋವಿಡ್-19ನ ಯಾವುದೇ ಲಕ್ಷಣಗಳು ಕಾಣಿಸಿಲ್ಲ. ಆದರೂ ಅವರ ಆರೋಗ್ಯದ ಮೇಲೆ ಹೆಚ್ಚಿನ ನಿಗಾ ವಹಿಸಲಾಗುತ್ತಿದೆ. ರಕ್ತದೊತ್ತಡ ಸಹಜ ಸ್ಥಿತಿಗೆ ಬರುವವರೆಗೂ ಅವರನ್ನು ಡಿಸ್ಚಾರ್ಜ್ ಮಾಡಲು ಸಾಧ್ಯವಿಲ್ಲ' ಎಂದು ಆಸ್ಪತ್ರೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಶುಕ್ರವಾರ ಅವರಿಗೆ ಮತ್ತೊಮ್ಮೆ ಕೊರೊನಾ ಪರೀಕ್ಷೆ ಮಾಡಲಾಗಿದೆ.
'ಅಣ್ಣಾಥೆ' ಚಿತ್ರವನ್ನು 'ಸನ್ ಪಿಕ್ಚರ್ಸ್' ಸಂಸ್ಥೆ ನಿರ್ಮಾಣ ಮಾಡುತ್ತಿದೆ. 'ಚಿತ್ರತಂಡದ ನಾಲ್ಕು ಜನರಿಗೆ ಕೊರೊನಾ ಪಾಸಿಟಿವ್ ಆಗಿದೆ. ರಜನಿಕಾಂತ್ ಮತ್ತು ಇತರೆ ತಂತ್ರಜ್ಞರಿಗೆ ನೆಗೆಟಿವ್ ವರದಿ ಬಂದಿದೆ. ಎಲ್ಲರ ಆರೋಗ್ಯದ ಸುರಕ್ಷತೆಯ ದೃಷ್ಟಿಯಿಂದ ಚಿತ್ರೀಕರಣವನ್ನು ಮುಂದೂಡಲಾಗಿದೆ' ಎಂದು ಸನ್ ಪಿಕ್ಚರ್ಸ್ ಗುರುವಾರ ಟ್ವೀಟ್ ಮೂಲಕ ತಿಳಿಸಿದೆ.
This News Article is a Copy of vijaykarnataka
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm