ಬ್ರೇಕಿಂಗ್ ನ್ಯೂಸ್
26-12-20 02:09 pm Source: FILMIBEAT Manjunatha C ಸಿನಿಮಾ
ಆಘಾತಕಾರಿ ಘಟನೆಯಲ್ಲಿ ಮಲಯಾಳಂ ನ ಜನಪ್ರಿಯ ನಟ ಅನಿಲ್ ನೆಡುಮಂಗದ್, ಚಿತ್ರೀಕರಣದ ವೇಳೆ ನೀರಲ್ಲಿ ಮುಳುಗಿ ಪ್ರಾಣ ಬಿಟ್ಟಿದ್ದಾರೆ. 'ಅಯ್ಯಪ್ಪನುಂ ಕೋಶಿಯುಂ' ಸೇರಿ ಹಲವಾರು ಜನಪ್ರಿಯ ಮಲಯಾಳಂ ಸಿನಿಮಾಗಳಲ್ಲಿ ಪೋಷಕ ನಟನಾಗಿ ನಟಿಸಿದ್ದ ಅನಿಲ್ ನೆಡುಮಂಗದ್, ಇಂದು (ಡಿಸೆಂಬರ್ 25) ಮಲನ್ಕರ ಡ್ಯಾಂನಲ್ಲಿ ನೀರಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ. ಮಲನ್ಕರ್ ಡ್ಯಾಂ ಬಳಿ ಮಲಯಾಳಂ ಸಿನಿಮಾ 'ಪೀಸ್' ನ ಚಿತ್ರೀಕರಣ ನಡೆಯುತ್ತಿತ್ತು. ಅನಿಲ್ ನೆಡುಮಂಗದ್ ಸಿನಿಮಾದಲ್ಲಿ ಪಾತ್ರವಹಿಸಿದ್ದು, ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ಚಿತ್ರೀಕರಣದ ಬಿಡುವಿನ ವೇಳೆ ಅನಿಲ್ ಹಾಗೂ ಕೆಲವರು ಸ್ನಾನ ಮಾಡಲೆಂದು ಮಲನ್ಕರ ಡ್ಯಾಂ ಗೆ ಹೋಗಿದ್ದರು, ಈ ವೇಳೆ ಅನಿಲ್ ನೀರಲ್ಲಿ ಮುಳುಗಿದ್ದಾರೆ.

ಸಂಜೆ ಆರು ಗಂಟೆಗೆ ದೊರೆತಿದೆ ಮೃತದೇಹ
'ಅನಿಲ್ ಗೆಳೆಯರು ಹೇಳಿರುವಂತೆ, ಮಧ್ಯಾಹ್ನದ ವೇಳೆಗೆ ಎಲ್ಲರೂ ಸ್ನಾನ ಮಾಡಲು ಹೋದೆವು, ಕೆಲವು ಹೊತ್ತಿನ ಬಳಿಕ ಅನಿಲ್ ಅಲ್ಲೆಲ್ಲೂ ನಮಗೆ ಕಾಣಲಿಲ್ಲ, ಅನಿಲ್ ನೀರಲ್ಲಿ ಮುಳುಗಿರಬಹುದು ಎಂದು ಕೊಂಡು ಎಲ್ಲರೂ ಸೇರಿ ಹುಡುಕಾಡಲು ಆರಂಭಿಸಿದೆವು, ಕೊನೆಗೆ ರಕ್ಷಣಾ ತಂಡದ ನೆರವು ಪಡೆದು ಹುಡುಕಿದಾಗ, ಸಂಜೆ 6 ಗಂಟೆ ವೇಳೆಗೆ ಅನಿಲ್ ಮೃತದೇಹ ಸಿಕ್ಕಿತು' ಎಂದಿದ್ದಾರೆ.

ತೀವ್ರ ಸಂತಾಪ ವ್ಯಕ್ತಪಡಿಸಿದ ಪೃಥ್ವಿರಾಜ್ ಸುಕುಮಾರ್
ಪ್ರತಿಭಾವಂತ ನಟ ಅನಿಲ್ ಸಾವಿಗೆ ಮಲಯಾಳಂ ಸಿನಿಮಾರಂಗ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಅಯ್ಯಪ್ಪನುಂ ಕೋಶಿಯುಂ ನಲ್ಲಿ ಅನಿಲ್ ಜೊತೆ ನಟಿಸಿದ್ದ ಪೃಥ್ವಿರಾಜ್ ಟ್ವೀಟ್ ಮಾಡಿದ್ದು, 'ನನ್ನ ಬಳಿ ಹೇಳಲು ಏನೂ ಮಾತುಗಳಿಲ್ಲ. ನನಗೆ ಏನೂ ಹೇಳಲು ಆಗುತ್ತಿಲ್ಲ. ನೀನು ಶಾಂತಿಯಿಂದ ಇದ್ದೀಯ ಎಂದು ಭಾವಿಸಿದ್ದೇನೆ ಅನಿಲ್ ಅಣ್ಣ' ಎಂದಿದ್ದಾರೆ.

ಕಮ್ಮಾಟಿಪದಂ' ಸಿನಿಮಾದಲ್ಲಿ ಜೊತೆಗೆ ನಟನೆ
'ಕಮ್ಮಾಟಿಪದಂ' ಸಿನಿಮಾದಲ್ಲಿ ಅನಿಲ್ ಜೊತೆ ನಟಿಸಿದ್ದ ಸ್ಟಾರ್ ನಟ ದುಲ್ಕರ್ ಸಲ್ಮಾನ್, 'ಹೃದಯ ಹಿಂಡಿದಂತಾಗಿದೆ. ಇದನ್ನು ನಂಬಲು ಸಾಧ್ಯವಾಗುತ್ತಿಲ್ಲ. ಅನಿಲ್ ಆತ್ಮಕ್ಕೆ ಶಾಂತಿ ಸಿಗಲಿ. ಆತನ ಕುಟುಂಬದ ಪರವಾಗಿ ನನ್ನ ಪ್ರಾರ್ಥನೆಗಳಿವೆ' ಎಂದಿದ್ದಾರೆ.
This News Article is a Copy of FILMIBEAT
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm