ಬ್ರೇಕಿಂಗ್ ನ್ಯೂಸ್
26-12-20 02:09 pm Source: FILMIBEAT Manjunatha C ಸಿನಿಮಾ
ಆಘಾತಕಾರಿ ಘಟನೆಯಲ್ಲಿ ಮಲಯಾಳಂ ನ ಜನಪ್ರಿಯ ನಟ ಅನಿಲ್ ನೆಡುಮಂಗದ್, ಚಿತ್ರೀಕರಣದ ವೇಳೆ ನೀರಲ್ಲಿ ಮುಳುಗಿ ಪ್ರಾಣ ಬಿಟ್ಟಿದ್ದಾರೆ. 'ಅಯ್ಯಪ್ಪನುಂ ಕೋಶಿಯುಂ' ಸೇರಿ ಹಲವಾರು ಜನಪ್ರಿಯ ಮಲಯಾಳಂ ಸಿನಿಮಾಗಳಲ್ಲಿ ಪೋಷಕ ನಟನಾಗಿ ನಟಿಸಿದ್ದ ಅನಿಲ್ ನೆಡುಮಂಗದ್, ಇಂದು (ಡಿಸೆಂಬರ್ 25) ಮಲನ್ಕರ ಡ್ಯಾಂನಲ್ಲಿ ನೀರಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ. ಮಲನ್ಕರ್ ಡ್ಯಾಂ ಬಳಿ ಮಲಯಾಳಂ ಸಿನಿಮಾ 'ಪೀಸ್' ನ ಚಿತ್ರೀಕರಣ ನಡೆಯುತ್ತಿತ್ತು. ಅನಿಲ್ ನೆಡುಮಂಗದ್ ಸಿನಿಮಾದಲ್ಲಿ ಪಾತ್ರವಹಿಸಿದ್ದು, ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ಚಿತ್ರೀಕರಣದ ಬಿಡುವಿನ ವೇಳೆ ಅನಿಲ್ ಹಾಗೂ ಕೆಲವರು ಸ್ನಾನ ಮಾಡಲೆಂದು ಮಲನ್ಕರ ಡ್ಯಾಂ ಗೆ ಹೋಗಿದ್ದರು, ಈ ವೇಳೆ ಅನಿಲ್ ನೀರಲ್ಲಿ ಮುಳುಗಿದ್ದಾರೆ.

ಸಂಜೆ ಆರು ಗಂಟೆಗೆ ದೊರೆತಿದೆ ಮೃತದೇಹ
'ಅನಿಲ್ ಗೆಳೆಯರು ಹೇಳಿರುವಂತೆ, ಮಧ್ಯಾಹ್ನದ ವೇಳೆಗೆ ಎಲ್ಲರೂ ಸ್ನಾನ ಮಾಡಲು ಹೋದೆವು, ಕೆಲವು ಹೊತ್ತಿನ ಬಳಿಕ ಅನಿಲ್ ಅಲ್ಲೆಲ್ಲೂ ನಮಗೆ ಕಾಣಲಿಲ್ಲ, ಅನಿಲ್ ನೀರಲ್ಲಿ ಮುಳುಗಿರಬಹುದು ಎಂದು ಕೊಂಡು ಎಲ್ಲರೂ ಸೇರಿ ಹುಡುಕಾಡಲು ಆರಂಭಿಸಿದೆವು, ಕೊನೆಗೆ ರಕ್ಷಣಾ ತಂಡದ ನೆರವು ಪಡೆದು ಹುಡುಕಿದಾಗ, ಸಂಜೆ 6 ಗಂಟೆ ವೇಳೆಗೆ ಅನಿಲ್ ಮೃತದೇಹ ಸಿಕ್ಕಿತು' ಎಂದಿದ್ದಾರೆ.

ತೀವ್ರ ಸಂತಾಪ ವ್ಯಕ್ತಪಡಿಸಿದ ಪೃಥ್ವಿರಾಜ್ ಸುಕುಮಾರ್
ಪ್ರತಿಭಾವಂತ ನಟ ಅನಿಲ್ ಸಾವಿಗೆ ಮಲಯಾಳಂ ಸಿನಿಮಾರಂಗ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಅಯ್ಯಪ್ಪನುಂ ಕೋಶಿಯುಂ ನಲ್ಲಿ ಅನಿಲ್ ಜೊತೆ ನಟಿಸಿದ್ದ ಪೃಥ್ವಿರಾಜ್ ಟ್ವೀಟ್ ಮಾಡಿದ್ದು, 'ನನ್ನ ಬಳಿ ಹೇಳಲು ಏನೂ ಮಾತುಗಳಿಲ್ಲ. ನನಗೆ ಏನೂ ಹೇಳಲು ಆಗುತ್ತಿಲ್ಲ. ನೀನು ಶಾಂತಿಯಿಂದ ಇದ್ದೀಯ ಎಂದು ಭಾವಿಸಿದ್ದೇನೆ ಅನಿಲ್ ಅಣ್ಣ' ಎಂದಿದ್ದಾರೆ.

ಕಮ್ಮಾಟಿಪದಂ' ಸಿನಿಮಾದಲ್ಲಿ ಜೊತೆಗೆ ನಟನೆ
'ಕಮ್ಮಾಟಿಪದಂ' ಸಿನಿಮಾದಲ್ಲಿ ಅನಿಲ್ ಜೊತೆ ನಟಿಸಿದ್ದ ಸ್ಟಾರ್ ನಟ ದುಲ್ಕರ್ ಸಲ್ಮಾನ್, 'ಹೃದಯ ಹಿಂಡಿದಂತಾಗಿದೆ. ಇದನ್ನು ನಂಬಲು ಸಾಧ್ಯವಾಗುತ್ತಿಲ್ಲ. ಅನಿಲ್ ಆತ್ಮಕ್ಕೆ ಶಾಂತಿ ಸಿಗಲಿ. ಆತನ ಕುಟುಂಬದ ಪರವಾಗಿ ನನ್ನ ಪ್ರಾರ್ಥನೆಗಳಿವೆ' ಎಂದಿದ್ದಾರೆ.
This News Article is a Copy of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm