ಬ್ರೇಕಿಂಗ್ ನ್ಯೂಸ್
26-12-20 02:09 pm Source: FILMIBEAT Manjunatha C ಸಿನಿಮಾ
ಆಘಾತಕಾರಿ ಘಟನೆಯಲ್ಲಿ ಮಲಯಾಳಂ ನ ಜನಪ್ರಿಯ ನಟ ಅನಿಲ್ ನೆಡುಮಂಗದ್, ಚಿತ್ರೀಕರಣದ ವೇಳೆ ನೀರಲ್ಲಿ ಮುಳುಗಿ ಪ್ರಾಣ ಬಿಟ್ಟಿದ್ದಾರೆ. 'ಅಯ್ಯಪ್ಪನುಂ ಕೋಶಿಯುಂ' ಸೇರಿ ಹಲವಾರು ಜನಪ್ರಿಯ ಮಲಯಾಳಂ ಸಿನಿಮಾಗಳಲ್ಲಿ ಪೋಷಕ ನಟನಾಗಿ ನಟಿಸಿದ್ದ ಅನಿಲ್ ನೆಡುಮಂಗದ್, ಇಂದು (ಡಿಸೆಂಬರ್ 25) ಮಲನ್ಕರ ಡ್ಯಾಂನಲ್ಲಿ ನೀರಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ. ಮಲನ್ಕರ್ ಡ್ಯಾಂ ಬಳಿ ಮಲಯಾಳಂ ಸಿನಿಮಾ 'ಪೀಸ್' ನ ಚಿತ್ರೀಕರಣ ನಡೆಯುತ್ತಿತ್ತು. ಅನಿಲ್ ನೆಡುಮಂಗದ್ ಸಿನಿಮಾದಲ್ಲಿ ಪಾತ್ರವಹಿಸಿದ್ದು, ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ಚಿತ್ರೀಕರಣದ ಬಿಡುವಿನ ವೇಳೆ ಅನಿಲ್ ಹಾಗೂ ಕೆಲವರು ಸ್ನಾನ ಮಾಡಲೆಂದು ಮಲನ್ಕರ ಡ್ಯಾಂ ಗೆ ಹೋಗಿದ್ದರು, ಈ ವೇಳೆ ಅನಿಲ್ ನೀರಲ್ಲಿ ಮುಳುಗಿದ್ದಾರೆ.

ಸಂಜೆ ಆರು ಗಂಟೆಗೆ ದೊರೆತಿದೆ ಮೃತದೇಹ
'ಅನಿಲ್ ಗೆಳೆಯರು ಹೇಳಿರುವಂತೆ, ಮಧ್ಯಾಹ್ನದ ವೇಳೆಗೆ ಎಲ್ಲರೂ ಸ್ನಾನ ಮಾಡಲು ಹೋದೆವು, ಕೆಲವು ಹೊತ್ತಿನ ಬಳಿಕ ಅನಿಲ್ ಅಲ್ಲೆಲ್ಲೂ ನಮಗೆ ಕಾಣಲಿಲ್ಲ, ಅನಿಲ್ ನೀರಲ್ಲಿ ಮುಳುಗಿರಬಹುದು ಎಂದು ಕೊಂಡು ಎಲ್ಲರೂ ಸೇರಿ ಹುಡುಕಾಡಲು ಆರಂಭಿಸಿದೆವು, ಕೊನೆಗೆ ರಕ್ಷಣಾ ತಂಡದ ನೆರವು ಪಡೆದು ಹುಡುಕಿದಾಗ, ಸಂಜೆ 6 ಗಂಟೆ ವೇಳೆಗೆ ಅನಿಲ್ ಮೃತದೇಹ ಸಿಕ್ಕಿತು' ಎಂದಿದ್ದಾರೆ.

ತೀವ್ರ ಸಂತಾಪ ವ್ಯಕ್ತಪಡಿಸಿದ ಪೃಥ್ವಿರಾಜ್ ಸುಕುಮಾರ್
ಪ್ರತಿಭಾವಂತ ನಟ ಅನಿಲ್ ಸಾವಿಗೆ ಮಲಯಾಳಂ ಸಿನಿಮಾರಂಗ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಅಯ್ಯಪ್ಪನುಂ ಕೋಶಿಯುಂ ನಲ್ಲಿ ಅನಿಲ್ ಜೊತೆ ನಟಿಸಿದ್ದ ಪೃಥ್ವಿರಾಜ್ ಟ್ವೀಟ್ ಮಾಡಿದ್ದು, 'ನನ್ನ ಬಳಿ ಹೇಳಲು ಏನೂ ಮಾತುಗಳಿಲ್ಲ. ನನಗೆ ಏನೂ ಹೇಳಲು ಆಗುತ್ತಿಲ್ಲ. ನೀನು ಶಾಂತಿಯಿಂದ ಇದ್ದೀಯ ಎಂದು ಭಾವಿಸಿದ್ದೇನೆ ಅನಿಲ್ ಅಣ್ಣ' ಎಂದಿದ್ದಾರೆ.

ಕಮ್ಮಾಟಿಪದಂ' ಸಿನಿಮಾದಲ್ಲಿ ಜೊತೆಗೆ ನಟನೆ
'ಕಮ್ಮಾಟಿಪದಂ' ಸಿನಿಮಾದಲ್ಲಿ ಅನಿಲ್ ಜೊತೆ ನಟಿಸಿದ್ದ ಸ್ಟಾರ್ ನಟ ದುಲ್ಕರ್ ಸಲ್ಮಾನ್, 'ಹೃದಯ ಹಿಂಡಿದಂತಾಗಿದೆ. ಇದನ್ನು ನಂಬಲು ಸಾಧ್ಯವಾಗುತ್ತಿಲ್ಲ. ಅನಿಲ್ ಆತ್ಮಕ್ಕೆ ಶಾಂತಿ ಸಿಗಲಿ. ಆತನ ಕುಟುಂಬದ ಪರವಾಗಿ ನನ್ನ ಪ್ರಾರ್ಥನೆಗಳಿವೆ' ಎಂದಿದ್ದಾರೆ.
This News Article is a Copy of FILMIBEAT
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 02:25 pm
HK News Staffer
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm