ಬ್ರೇಕಿಂಗ್ ನ್ಯೂಸ್
26-12-20 02:20 pm Source: FILMIBEAT Manjunatha C ಸಿನಿಮಾ
ಬೆಂಗಳೂರು, ಡಿ.26: ಡ್ರಗ್ಸ್ ಪ್ರಕರಣದ ಆರೋಪಿ ನಟಿ ಸಂಜನಾ ಗಲ್ರಾನಿ ಇಂದು ಸಿಸಿಬಿ ಪೊಲೀಸರ ಮುಂದೆ ಹಾಜರಾದರು. ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ಸಂಜನಾ ಗಲ್ರಾನಿ, ಕೆಲವು ದಿನಗಳ ಹಿಂದಷ್ಟೆ ಆರೋಗ್ಯ ಕಾರಣ ನೀಡಿ ಹೈಕೋರ್ಟ್ನಿಂದ ಜಾಮೀನು ಪಡೆದಿದ್ದಾರೆ. ಜಾಮೀನು ನೀಡಿದ್ದ ನ್ಯಾಯಾಲಯವು, ಸಂಜನಾ ಗೆ ಕೆಲವು ಷರತ್ತುಗಳನ್ನು ವಿಧಿಸಿತ್ತು, ಜಾಮೀನು ಅವಧಿಯಲ್ಲಿ ಪ್ರತಿ ಹದಿನೈದು ದಿನಗಳಿಗೊಮ್ಮೆ ಸಿಸಿಬಿ ಪೊಲೀಸರ ಮುಂದೆ ಹಾಜರಾಗಬೇಕು ಎಂದು ಸಹ ಷರತ್ತು ವಿಧಿಸಲಾಗಿತ್ತು. ಆ ಷರತ್ತಿನ ಅನ್ವಯ ಇಂದು ಸಂಜನಾ ಗಲ್ರಾನಿ ಸಿಸಿಬಿ ಪೊಲೀಸರ ಮುಂದೆ ಹಾಜರಾಗಿದ್ದರು.

ಸೆಪ್ಟೆಂಬರ್ 8 ರಂದು ನಟಿ ಸಂಜನಾ ಗಲ್ರಾನಿಯನ್ನು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀರು ಬಂಧಿಸಿದ್ದರು. ಅವರನ್ನು ಪರಪ್ಪರ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿ ಇಡಲಾಗಿತ್ತು. ಡಿಸೆಂಬರ್ 11 ರಂದು ಕರ್ನಾಟಕ ರಾಜ್ಯ ಹೈಕೋರ್ಟ್ ಸಂಜನಾ ಗೆ ಜಾಮೀನು ಮಂಜೂರು ಮಾಡಿದೆ. ಕೆಲವು ಷರತ್ತುಗಳನ್ನು ಸಹ ಸಂಜನಾ ಗೆ ವಿಧಿಸಲಾಗಿದೆ. ಮೂರು ಲಕ್ಷ ಮೊತ್ತದ ವೈಯಕ್ತಿಕ ಬಾಂಡ್ ಇಬ್ಬರ ಶ್ಯೂರಿಟಿ ನೀಡುವುದರ ಜೊತೆಗೆ. ಪ್ರತಿ ತಿಂಗಳು ಎರಡು ಬಾರಿ ಪೊಲೀಸ್ ಠಾಣೆಗೆ ಹಾಜರಾಗಬೇಕು ಹಾಗೂ ಸಾಕ್ಷ್ಯಗಳ ಮೇಲೆ ಪ್ರಭಾವ ಬೀರುವ ಕಾರ್ಯ ಮಾಡದೆ ವಿಚಾರಣೆಗೆ ಸಹಕರಿಸಬೇಕು ಎಂಬ ಷರತ್ತು ವಿಧಿಸಿ ಸಂಜನಾಗೆ ಜಾಮೀನು ಮಂಜೂರು ಮಾಡಲಾಗಿದೆ.
ಸಂಜನಾ ಗಲ್ರಾನಿಗಿಂತಲೂ ಮೊದಲು ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಟಿ ರಾಗಿಣಿ ದ್ವಿವೇದಿಗೆ ಈ ವರೆಗೆ ಜಾಮೀನು ದೊರೆತಿಲ್ಲ. ರಾಗಿಣಿ ಗೆ ಇತ್ತೀಚೆಗೆ ಆರೋಗ್ಯದಲ್ಲಿ ವ್ಯತ್ಯಯವಾದ ಕಾರಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
This News Article is a Copy of FILMIBEAT
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 02:25 pm
HK News Staffer
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm