ಬ್ರೇಕಿಂಗ್ ನ್ಯೂಸ್
26-12-20 02:20 pm Source: FILMIBEAT Manjunatha C ಸಿನಿಮಾ
ಬೆಂಗಳೂರು, ಡಿ.26: ಡ್ರಗ್ಸ್ ಪ್ರಕರಣದ ಆರೋಪಿ ನಟಿ ಸಂಜನಾ ಗಲ್ರಾನಿ ಇಂದು ಸಿಸಿಬಿ ಪೊಲೀಸರ ಮುಂದೆ ಹಾಜರಾದರು. ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ಸಂಜನಾ ಗಲ್ರಾನಿ, ಕೆಲವು ದಿನಗಳ ಹಿಂದಷ್ಟೆ ಆರೋಗ್ಯ ಕಾರಣ ನೀಡಿ ಹೈಕೋರ್ಟ್ನಿಂದ ಜಾಮೀನು ಪಡೆದಿದ್ದಾರೆ. ಜಾಮೀನು ನೀಡಿದ್ದ ನ್ಯಾಯಾಲಯವು, ಸಂಜನಾ ಗೆ ಕೆಲವು ಷರತ್ತುಗಳನ್ನು ವಿಧಿಸಿತ್ತು, ಜಾಮೀನು ಅವಧಿಯಲ್ಲಿ ಪ್ರತಿ ಹದಿನೈದು ದಿನಗಳಿಗೊಮ್ಮೆ ಸಿಸಿಬಿ ಪೊಲೀಸರ ಮುಂದೆ ಹಾಜರಾಗಬೇಕು ಎಂದು ಸಹ ಷರತ್ತು ವಿಧಿಸಲಾಗಿತ್ತು. ಆ ಷರತ್ತಿನ ಅನ್ವಯ ಇಂದು ಸಂಜನಾ ಗಲ್ರಾನಿ ಸಿಸಿಬಿ ಪೊಲೀಸರ ಮುಂದೆ ಹಾಜರಾಗಿದ್ದರು.

ಸೆಪ್ಟೆಂಬರ್ 8 ರಂದು ನಟಿ ಸಂಜನಾ ಗಲ್ರಾನಿಯನ್ನು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀರು ಬಂಧಿಸಿದ್ದರು. ಅವರನ್ನು ಪರಪ್ಪರ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿ ಇಡಲಾಗಿತ್ತು. ಡಿಸೆಂಬರ್ 11 ರಂದು ಕರ್ನಾಟಕ ರಾಜ್ಯ ಹೈಕೋರ್ಟ್ ಸಂಜನಾ ಗೆ ಜಾಮೀನು ಮಂಜೂರು ಮಾಡಿದೆ. ಕೆಲವು ಷರತ್ತುಗಳನ್ನು ಸಹ ಸಂಜನಾ ಗೆ ವಿಧಿಸಲಾಗಿದೆ. ಮೂರು ಲಕ್ಷ ಮೊತ್ತದ ವೈಯಕ್ತಿಕ ಬಾಂಡ್ ಇಬ್ಬರ ಶ್ಯೂರಿಟಿ ನೀಡುವುದರ ಜೊತೆಗೆ. ಪ್ರತಿ ತಿಂಗಳು ಎರಡು ಬಾರಿ ಪೊಲೀಸ್ ಠಾಣೆಗೆ ಹಾಜರಾಗಬೇಕು ಹಾಗೂ ಸಾಕ್ಷ್ಯಗಳ ಮೇಲೆ ಪ್ರಭಾವ ಬೀರುವ ಕಾರ್ಯ ಮಾಡದೆ ವಿಚಾರಣೆಗೆ ಸಹಕರಿಸಬೇಕು ಎಂಬ ಷರತ್ತು ವಿಧಿಸಿ ಸಂಜನಾಗೆ ಜಾಮೀನು ಮಂಜೂರು ಮಾಡಲಾಗಿದೆ.
ಸಂಜನಾ ಗಲ್ರಾನಿಗಿಂತಲೂ ಮೊದಲು ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಟಿ ರಾಗಿಣಿ ದ್ವಿವೇದಿಗೆ ಈ ವರೆಗೆ ಜಾಮೀನು ದೊರೆತಿಲ್ಲ. ರಾಗಿಣಿ ಗೆ ಇತ್ತೀಚೆಗೆ ಆರೋಗ್ಯದಲ್ಲಿ ವ್ಯತ್ಯಯವಾದ ಕಾರಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
This News Article is a Copy of FILMIBEAT
26-02-26 10:01 pm
HK News Staffer
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
27-02-26 06:14 am
HK News Staffer
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
26-02-26 01:21 pm
HK News Staffer
Mangalore: ಕುರ್ನಾಡಿನ ವೃದ್ಧ ದಂಪತಿಗೆ ನೂತನ ಮನೆ ಹ...
26-02-26 10:37 am
ಮಂಗಳೂರು ವಿವಿಯ ಯಕ್ಷಮಂಗಳ ಪ್ರಶಸ್ತಿ ಪ್ರಕಟ ; ಕಪ್ಪೆ...
25-02-26 05:41 pm
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
26-02-26 11:04 pm
mangalore
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm
Vexon fraud Company, Mangalore: ಮಂಗಳೂರಿನಲ್ಲಿ...
26-02-26 03:48 pm
Mangalore Blackmail, Crime: ಖಾಸಗಿ ವೀಡಿಯೋ ಮುಂದ...
24-02-26 10:07 pm
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm