ಬ್ರೇಕಿಂಗ್ ನ್ಯೂಸ್
28-12-20 12:44 pm Source: FILMIBEAT Shruthi Gk ಸಿನಿಮಾ
ದಕ್ಷಿಣ ಭಾರತದ ಸಿನಿಮಾರಂಗದಲ್ಲಿ ಮಿಂಚುತ್ತಿರುವ ನಟಿ ರಶ್ಮಿಕಾ ಮಂದಣ್ಣ ಸದ್ಯ ಬಾಲಿವುಡ್ ಕಡೆ ಹೊರಟಿದ್ದಾರೆ. ಕನ್ನಡ, ತೆಲುಗು ಮತ್ತು ತಮಿಳು ಸಿನಿಮಾರಂಗದಲ್ಲಿ ಬ್ಯುಸಿ ಇರುವ ರಶ್ಮಿಕಾ ಇತ್ತೀಚಿಗಷ್ಟೆ ಹಿಂದಿ ಸಿನಿಮಾ ಅನೌನ್ಸ್ ಮಾಡಿದ್ದಾರೆ. ಮಿಷನ್ ಮಜ್ನು ಮೂಲಕ ರಶ್ಮಿಕಾ ಬಾಲಿವುಡ್ ನಲ್ಲಿ ಅದೃಷ್ಟ ಪರೀಕ್ಷೆಗೆ ನಿಂತಿದ್ದಾರೆ. ಇದರ ಬೆನ್ನಲ್ಲೇ ಈಗ ಮತ್ತೊಂದು ಬಾಲಿವುಡ್ ಸಿನಿಮಾದಲ್ಲಿ ಕಿರಿಕ್ ಸುಂದರಿ ನಟಿಸುತ್ತಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ. ಬಾಲಿವುಡ್ ನ ಲೆಜೆಂಡ್ ಅಮಿತಾಬ್ ಬಚ್ಚನ್ ಜೊತೆ ನಟಿಸಲು ರಶ್ಮಿಕಾ ಸಜ್ಜಾಗಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ.

ಅಮಿತಾಬ್ ಮಗಳ ಪಾತ್ರದಲ್ಲಿ ರಶ್ಮಿಕಾ
ರಶ್ಮಿಕಾ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಜೊತೆ ನಟಿಸುತ್ತಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ. ಅಮಿತಾಬ್ ಬಚ್ಚನ್ ಮಗಳ ಪಾತ್ರದಲ್ಲಿ ರಶ್ಮಿಕಾ ಕಾಣಿಸಿಕೊಳ್ಳುತ್ತಿದ್ದಾರಂತೆ. ಈ ಬಗ್ಗೆ ರಶ್ಮಿಕಾ ಕಡೆಯಿಂದ ಆಗಲಿ ಅಥವಾ ಸಿನಿಮಾತಂಡದ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಬಹಿರಂಗವಾಗಿಲ್ಲ. ಆದರೆ ಅಮಿತಾಬ್ ಸಿನಿಮಾದಲ್ಲಿ ರಶ್ಮಿಕಾ ಎನ್ನುವ ಸುದ್ದಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ವಿಕಾಸ್ ಬಾಹ್ಲ್ ನಿರ್ದೇಶನ
ಅಮಿತಾಬ್ ಮತ್ತು ರಶ್ಮಿಕಾ ಸಿನಿಮಾಗೆ ನಿರ್ದೇಶಕ ವಿಕಾಸ್ ಬಹ್ಲ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈಗಾಗಲೇ ಬಾಲಿವುಡ್ ನಲ್ಲಿ ಕ್ವೀನ್, ಸೂಪರ್ 30 ಅಂತಹ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ವಿಕಾಶ್, ಇದೀಗ ರಶ್ಮಿಕಾ ಅವರ ಜೊತೆ ಸಿನಿಮಾ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ.

'ಡೆಡ್ಲಿ' ಎನ್ನುವ ತಾತ್ಕಾಲಿಕ ಟೈಟಲ್
ಚಿತ್ರಕ್ಕೆ ತಾತ್ಕಾಲಿಕವಾಗಿ ಡೆಡ್ಲಿ ಎಂದು ಹೆಸರಿಡಲಾಗಿದೆ. ಈ ಸಿನಿಮಾ ಅಪ್ಪ ಮತ್ತು ಮಗಳ ಸಂಬಂಧದ ಬಗ್ಗೆ ಇರುವ ಕಥೆಯಾಗಿದೆ. ಕಾಮಿಡಿ ಕಥಾಹಂದರ ಹೊಂದಿರುವ ಈ ಸಿನಿಮಾಗೆ ರಿಲಯನ್ಸ್ ಎಂಟರ್ ಟೈನ್ ಮೆಂಟ್ ನಿರ್ಮಾಣ ಮಾಡುತ್ತಿದೆ. ಸದ್ಯ ಸಿನಿಮಾ ಪ್ರಿ ಪ್ರೊಡಕ್ಷನ್ ಕೆಲಸ ಜೋರಾಗಿ ನಡೆಯುತ್ತಿದ್ದು, ಸಿನಿಮಾ ಮುಂದಿನ ವರ್ಷ 2021ರಲ್ಲಿ ಸೆಟ್ಟೇರಲಿದೆ.

ಮಿಷನ್ ಮಜ್ನು ಸಿನಿಮಾದಲ್ಲಿ ರಶ್ಮಿಕಾ
ರಶ್ಮಿಕಾ ಈಗಾಗಲೇ ಮಿಷನ್ ಮಜ್ನು ಸಿನಿಮಾ ಮೂಲಕ ಬಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ. ಈ ಸಿನಿಮಾದಲ್ಲಿ ಸಿದ್ಧಾರ್ಥ್ ಮಲ್ಹೋತ್ರ ಜೊತೆ ನಟಿಸುತ್ತಿದ್ದಾರೆ. 1970ರ ಕಾಲಘಟ್ಟದ ನೈಜ ಘಟನೆಯಿಂದ ಪ್ರೇರೇಪಿತ ಚಿತ್ರ ಇದಾಗಿದ್ದು, ಪಾಕಿಸ್ತಾನದಲ್ಲಿರುವ ಭಾರತದ ಅತ್ಯಂತ ಧೈರ್ಯಶಾಲಿ ರಾ ಕಾರ್ಯಚರಣೆ ಬಗ್ಗೆ ಇರುವ ಸಿನಿಮಾವಾಗಿದೆ. ಭಾರತದ ಅತ್ಯಂತ ಮಹತ್ವಾಕಾಂಕ್ಷೆಯ ರಹಸ್ಯ ಕಾರ್ಯಚರಣೆ ಬಗ್ಗೆ ಇರುವ ಸಿನಿಮಾ ಇದಾಗಿದೆ.
This News Article is a Copy of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm