ಬ್ರೇಕಿಂಗ್ ನ್ಯೂಸ್
28-12-20 12:54 pm Source: FILMIBEAT ಸಿನಿಮಾ
ಬೆಂಗಳೂರು, ಡಿ.28: ಮಾಗಡಿ ರಸ್ತೆಯ ಟೋಲ್ ಗೇಟ್ ಬಳಿಯಿರುವ ಬಾಲಗಂಗಾಧರ ಸ್ವಾಮೀಜಿ ವೃತ್ತದಲ್ಲಿ ಸ್ಥಾಪನೆ ಮಾಡಿದ್ದ ದಿವಂಗತ ನಟ ಡಾ ವಿಷ್ಣುವರ್ಧನ್ ಅವರ ಪುತ್ಥಳಿಯನ್ನು ಯಾರೋ ಕಿಡಿಗೇಡಿಗಳು ಧ್ವಂಸ ಮಾಡಿದ್ದರು. ಇದೀಗ, ಅದೇ ವೃತ್ತದಲ್ಲಿ ವಿಷ್ಣುದಾದಾನ ಪ್ರತಿಮೆ ಮತ್ತೆ ನಿರ್ಮಾಣವಾಗುತ್ತಿದೆ. ಸಾಹಸ ಸಿಂಹ ವಿಷ್ಣುವರ್ಧನ್ ಅವರ ಅಳಿಯ ಅನಿರುದ್ಧ್ ಸೋಮವಾರ ಬೆಳಗ್ಗೆ ಗುದ್ದಲಿ ಪೂಜೆ ನೆರವೇರಿಸಿದ್ದಾರೆ. ಬಾಲಗಂಗಾಧರ ಸ್ವಾಮೀಜಿ ವೃತ್ತದಲ್ಲೇ ವಿಷ್ಣು ಸ್ಮಾರಕ ನಿರ್ಮಿಸಬೇಕು ಎಂದು ಬೇಡಿಕೆಯಿಟ್ಟಿದ್ದ ಅಭಿಮಾನಿಗಳು ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಸ್ವಾಮೀಜಿಗಳಿಂದ ಸಮ್ಮತಿ ಸಹ ಪಡೆದುಕೊಂಡಿದ್ದಾರೆ.

ಅದೇ ವೃತ್ತ, ಬೇರೆ ಸ್ಥಳದಲ್ಲಿ ವಿಷ್ಣು ಪ್ರತಿಮೆ
ವಿಷ್ಣುವರ್ಧನ್ ಪ್ರತಿಮೆ ಧ್ವಂಸ ಆಗಿರುವ ಸ್ಥಳದಿಂದ 50 ಮೀಟರ್ ದೂರದಲ್ಲಿ ಮತ್ತೊಂದು ಸ್ಥಳವನ್ನು ಗುರುತಿಸಿ, ಅಲ್ಲಿ ವಿಷ್ಣು ಪುತ್ಥಳಿ ನಿರ್ಮಿಸಲು ಅಭಿಮಾನಿಗಳು ನಿರ್ಧರಿಸಿದ್ದಾರೆ. ಈ ಸಂಬಂಧ ಪುತ್ಥಳಿ ನಿರ್ಮಾಣ ಕಾರ್ಯ ಸಹ ಆರಂಭವಾಗಿದೆ. ನಟ ಹಾಗೂ ವಿಷ್ಣುವರ್ಧನ್ ಅಳಿಯ ಅನಿರುದ್ಧ್ ಅವರು ಸೋಮವಾರ ಬೆಳಗ್ಗೆ ವಿಷ್ಣು ಪ್ರತಿಮೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ಮಾಡಿದ್ದಾರೆ.

ಡಿಸೆಂಬರ್ 30ಕ್ಕೆ ಪ್ರತಿಮೆ ಅನಾವರಣ
ಡಿಸೆಂಬರ್ 28 ರಂದು ವಿಷ್ಣು ಪ್ರತಿಮೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನಿರ್ಮಾಣವಾಗಿದ್ದು, ಡಿಸೆಂಬರ್ 30 ರಂದು ಈ ಪುತ್ಥಳಿಯನ್ನು ಲೋಕಾರ್ಪಣೆ ಮಾಡಲು ರೂಪುರೇಷೆಗಳನ್ನು ಸಿದ್ಧಪಡಿಸಲಾಗಿದೆ. ಇನ್ನೊಂದೇ ದಿನದಲ್ಲಿ ಮಾಗಡಿ ರಸ್ತೆಯ ಟೋಲ್ ಗೇಟ್ ಬಳಿಯಿರುವ ಬಾಲಗಂಗಾಧರ ಸ್ವಾಮೀಜಿ ವೃತ್ತದಲ್ಲಿ ಮತ್ತೆ ವಿಷ್ಣು ಪ್ರತಿಮೆ ತಲೆ ಎತ್ತಲಿದೆ.
ಸಚಿವರ ಒಪ್ಪಿಗೆ ಸಿಕ್ಕಿದೆ
ಸುಮಾರು ಆರು ಅಡಿ ಎತ್ತರದಲ್ಲಿ ವಿಷ್ಣುವರ್ಧನ್ ಅವರ ಪುತ್ಥಳಿ ಸ್ಥಾಪಿಸಲಾಗುತ್ತದೆ ಎಂದು ವಿಷ್ಣು ಅಭಿಮಾನಿಗಳು ಮಾಹಿತಿ ನೀಡಿದ್ದಾರೆ. ಅದೇ ವೃತ್ತದಲ್ಲಿ ಪ್ರತಿಮೆ ನಿರ್ಮಿಸಲು ಸಚಿವ ವಿ ಸೋಮಣ್ಣ ಅವರು ಸಹ ಒಪ್ಪಿಗೆ ನೀಡಿದ್ದು, ಪುತ್ಥಳಿ ನಿರ್ಮಾಣಕ್ಕೆ ಎಲ್ಲ ರೀತಿಯ ಸಹಾಯ ಮಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ ಎಂಬ ಮಾಹಿತಿಯೂ ಲಭ್ಯವಾಗಿದೆ.

ಆರೋಪಿಗಳನ್ನು ಬಂಧಿಸಿ
ಈ ಹಿಂದೆ ವಿಷ್ಣು ಪ್ರತಿಮೆ ಧ್ವಂಸ ಮಾಡಿದ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಬಂಧಿಸಬೇಕಾಗಿ ವಿಷ್ಣು ಸೇನೆ ಅಭಿಮಾನಿಗಳು ಒತ್ತಾಯಿಸುತ್ತಿದ್ದಾರೆ. ನಟ ಸುದೀಪ್, ಜಗ್ಗೇಶ್, ದರ್ಶನ್ ಸೇರಿದಂತೆ ಹಲವು ಸ್ಟಾರ್ ನಟರು ಸಹ ಈ ಘಟನೆಯನ್ನು ಖಂಡಿಸಿದ್ದು, ಆರೋಪಿಗಳಿಗೆ ತಕ್ಕ ಶಿಕ್ಷೆ ಕೊಡಿ ಎಂದು ಆಗ್ರಹಿಸಿದ್ದಾರೆ.
This News Article is a Copy of FILMIBEAT
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 02:25 pm
HK News Staffer
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm