ಬ್ರೇಕಿಂಗ್ ನ್ಯೂಸ್
29-12-20 12:18 pm Source: FILMIBEAT Shruthi Gk ಸಿನಿಮಾ
ಮುಂಗಾರು ಮಳೆ.. ಸ್ಯಾಂಡಲ್ ವುಡ್ ನಲ್ಲಿ ಹೊಸ ಅಲೆ ಸೃಷ್ಟಿಸಿದ ಸಿನಿಮಾ. ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ಯೋಗರಾಜ್ ಭಟ್ ಕಾಂಬಿನೇಷನ್ ನಲ್ಲಿ ಬಂದ ಮುಂಗಾರು ಮಳೆ ಸಿನಿಮಾಗೆ ಕನ್ನಡ ಸಿನಿಪ್ರಿಯರು ಮನ ಸೋತಿದ್ದರು. ಚಿತ್ರದ ಕಥೆ, ಡೈಲಾಗ್, ಗಣೇಶ್ ಅಭಿನಯ, ಲೊಕೇಶನ್, ಮಳೆ, ಅದ್ಭುತವಾದ ಸಂಗೀತಕ್ಕೆ ಪ್ರೇಕ್ಷಕರು ತಲೆಬಾಗಿದ್ದರು. 2006ರಲ್ಲಿ ರಿಲೀಸ್ ಆದ ಮುಂಗಾರು ಮಳೆ ಸಿನಿಮಾಗೆ ಈಗ 14 ವರ್ಷದ ಸಂಭ್ರಮ. ಹೌದು, ಇವತ್ತಿಗೆ ಸರಿಯಾಗಿ 14 ವರ್ಷಗಳ ಹಿಂದೆ ಮುಂಗಾರು ಮಳೆ ಸಿನಿಮಾ ರಿಲೀಸ್ ರಾಜ್ಯದಾದ್ಯಂತ ಬಿಡುಗೆಯಾಗಿತ್ತು.
ಗಣೇಶ್ ಗೆ ಸ್ಟಾರ್ ಗಿರಿ ತಂದುಕೊಟ್ಟ ಸಿನಿಮಾ
ಸ್ಯಾಂಡಲ್ ವುಡ್ ನಲ್ಲಿ ದೊಡ್ಡ ಮಟ್ಟಕ್ಕೆ ಯಶಸ್ಸು ಕಂಡ ಮುಂಗಾರು ಮಳೆ ಚಿತ್ರ, ಗಣೇಶ್ ಸಿನಿ ಬದುಕನ್ನೇ ಬದಲಾಯಿಸಿದ ಸಿನಿಮಾವಾಗಿದೆ. ಸಣ್ಣಪುಟ್ಟ ಪಾತ್ರಗಳನ್ನು ಮಾಡಿಕೊಂಡಿದ್ದ ಗೋಲ್ಡನ್ ಸ್ಟಾರ್ ಗಣೇಶ್ ಈ ಸಿನಿಮಾ ಮೂಲಕ ರಾತ್ರೋ ರಾತ್ರಿ ಸ್ಟಾರ್ ಆಗಿ ಹೊರಹೊಮ್ಮಿದರು. ನಿರ್ದೇಶಕ ಯೋಗರಾಜ್ ಭಟ್ ಅವರಿಗೂ ಸ್ಟಾರ್ ಗಿರಿ ತಂದುಕೊಟ್ಟ ಚಿತ್ರವಿದು.

ಪೂಜಾ ಗಾಂಧಿ ನಟನೆಯ ಚೊಚ್ಚಲ ಸಿನಿಮಾ
ಚಿತ್ರದಲ್ಲಿ ಗಣೇಶ್ ಗೆ ನಾಯಕಿಯಾಗಿ ಪೂಜಾ ಗಾಂಧಿ ಕಾಣಿಸಿಕೊಂಡಿದ್ದಾರೆ. ಪೂಜಾ ಗಾಂಧಿಗೆ ಇಂದು ಚೊಚ್ಚಲ ನಟನೆಯ ಸಿನಿಮಾ. ಮೊದಲ ಸಿನಿಮಾದಲ್ಲೇ ದೊಡ್ಡ ಯಶಸ್ಸು ಗಳಿಸಿ ಕನ್ನಡ ಪ್ರೇಕ್ಷಕರ ಹೃದಯ ಗೆದ್ದಿದ್ದರು. ಪ್ರೀತಮ್ ಮತ್ತು ನಂದಿನಿಯ ನವಿರಾದ ಪ್ರೇಮಕಥೆಗೆ ಚಿತ್ರಪ್ರೇಮಿಗಳು ಮನಸೂರೆಗೊಂಡಿದ್ದರು.

ಗಾಳಿಪಟ ಮೂಲಕ ಮತ್ತೆ ಒಂದಾದ ಗಣೇಶ್-ಭಟ್ರು
ಈ ಸಿನಿಮಾ ಬಳಿಕ ಗಣೇಶ್ ಸ್ಯಾಂಡಲ್ ವುಡ್ ನಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾದರು. ಸಾಲು ಸಾಲು ಸಿನಿಮಾಗಳಲ್ಲಿ ಕಾಣಿಸಿಕೊಂಡರು. ಮುಂಗಾರು ಮಳೆ ಬಳಿಕ ಗಣೇಶ್ ಮತ್ತು ಯೋಗರಾಜ್ ಭಟ್ ಜೋಡಿ ಗಾಳಿಪಟ ಸಿನಿಮಾ ಮೂಲಕ ಮತ್ತೆ ಒಂದಾದರು. ಆದರೆ ಈ ಸಿನಿಮಾ ಮುಂಗಾರು ಮಳೆಯಷ್ಟು ಯಶಸ್ಸು ಕಾಣಲಿಲ್ಲ.
This News Article is a Copy of FILMIBEAT
26-02-26 10:01 pm
HK News Staffer
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
27-02-26 06:14 am
HK News Staffer
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
26-02-26 01:21 pm
HK News Staffer
Mangalore: ಕುರ್ನಾಡಿನ ವೃದ್ಧ ದಂಪತಿಗೆ ನೂತನ ಮನೆ ಹ...
26-02-26 10:37 am
ಮಂಗಳೂರು ವಿವಿಯ ಯಕ್ಷಮಂಗಳ ಪ್ರಶಸ್ತಿ ಪ್ರಕಟ ; ಕಪ್ಪೆ...
25-02-26 05:41 pm
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
26-02-26 11:04 pm
mangalore
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm
Vexon fraud Company, Mangalore: ಮಂಗಳೂರಿನಲ್ಲಿ...
26-02-26 03:48 pm
Mangalore Blackmail, Crime: ಖಾಸಗಿ ವೀಡಿಯೋ ಮುಂದ...
24-02-26 10:07 pm
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm