ಬ್ರೇಕಿಂಗ್ ನ್ಯೂಸ್
29-12-20 12:18 pm Source: FILMIBEAT Shruthi Gk ಸಿನಿಮಾ
ಮುಂಗಾರು ಮಳೆ.. ಸ್ಯಾಂಡಲ್ ವುಡ್ ನಲ್ಲಿ ಹೊಸ ಅಲೆ ಸೃಷ್ಟಿಸಿದ ಸಿನಿಮಾ. ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ಯೋಗರಾಜ್ ಭಟ್ ಕಾಂಬಿನೇಷನ್ ನಲ್ಲಿ ಬಂದ ಮುಂಗಾರು ಮಳೆ ಸಿನಿಮಾಗೆ ಕನ್ನಡ ಸಿನಿಪ್ರಿಯರು ಮನ ಸೋತಿದ್ದರು. ಚಿತ್ರದ ಕಥೆ, ಡೈಲಾಗ್, ಗಣೇಶ್ ಅಭಿನಯ, ಲೊಕೇಶನ್, ಮಳೆ, ಅದ್ಭುತವಾದ ಸಂಗೀತಕ್ಕೆ ಪ್ರೇಕ್ಷಕರು ತಲೆಬಾಗಿದ್ದರು. 2006ರಲ್ಲಿ ರಿಲೀಸ್ ಆದ ಮುಂಗಾರು ಮಳೆ ಸಿನಿಮಾಗೆ ಈಗ 14 ವರ್ಷದ ಸಂಭ್ರಮ. ಹೌದು, ಇವತ್ತಿಗೆ ಸರಿಯಾಗಿ 14 ವರ್ಷಗಳ ಹಿಂದೆ ಮುಂಗಾರು ಮಳೆ ಸಿನಿಮಾ ರಿಲೀಸ್ ರಾಜ್ಯದಾದ್ಯಂತ ಬಿಡುಗೆಯಾಗಿತ್ತು.
ಗಣೇಶ್ ಗೆ ಸ್ಟಾರ್ ಗಿರಿ ತಂದುಕೊಟ್ಟ ಸಿನಿಮಾ
ಸ್ಯಾಂಡಲ್ ವುಡ್ ನಲ್ಲಿ ದೊಡ್ಡ ಮಟ್ಟಕ್ಕೆ ಯಶಸ್ಸು ಕಂಡ ಮುಂಗಾರು ಮಳೆ ಚಿತ್ರ, ಗಣೇಶ್ ಸಿನಿ ಬದುಕನ್ನೇ ಬದಲಾಯಿಸಿದ ಸಿನಿಮಾವಾಗಿದೆ. ಸಣ್ಣಪುಟ್ಟ ಪಾತ್ರಗಳನ್ನು ಮಾಡಿಕೊಂಡಿದ್ದ ಗೋಲ್ಡನ್ ಸ್ಟಾರ್ ಗಣೇಶ್ ಈ ಸಿನಿಮಾ ಮೂಲಕ ರಾತ್ರೋ ರಾತ್ರಿ ಸ್ಟಾರ್ ಆಗಿ ಹೊರಹೊಮ್ಮಿದರು. ನಿರ್ದೇಶಕ ಯೋಗರಾಜ್ ಭಟ್ ಅವರಿಗೂ ಸ್ಟಾರ್ ಗಿರಿ ತಂದುಕೊಟ್ಟ ಚಿತ್ರವಿದು.

ಪೂಜಾ ಗಾಂಧಿ ನಟನೆಯ ಚೊಚ್ಚಲ ಸಿನಿಮಾ
ಚಿತ್ರದಲ್ಲಿ ಗಣೇಶ್ ಗೆ ನಾಯಕಿಯಾಗಿ ಪೂಜಾ ಗಾಂಧಿ ಕಾಣಿಸಿಕೊಂಡಿದ್ದಾರೆ. ಪೂಜಾ ಗಾಂಧಿಗೆ ಇಂದು ಚೊಚ್ಚಲ ನಟನೆಯ ಸಿನಿಮಾ. ಮೊದಲ ಸಿನಿಮಾದಲ್ಲೇ ದೊಡ್ಡ ಯಶಸ್ಸು ಗಳಿಸಿ ಕನ್ನಡ ಪ್ರೇಕ್ಷಕರ ಹೃದಯ ಗೆದ್ದಿದ್ದರು. ಪ್ರೀತಮ್ ಮತ್ತು ನಂದಿನಿಯ ನವಿರಾದ ಪ್ರೇಮಕಥೆಗೆ ಚಿತ್ರಪ್ರೇಮಿಗಳು ಮನಸೂರೆಗೊಂಡಿದ್ದರು.

ಗಾಳಿಪಟ ಮೂಲಕ ಮತ್ತೆ ಒಂದಾದ ಗಣೇಶ್-ಭಟ್ರು
ಈ ಸಿನಿಮಾ ಬಳಿಕ ಗಣೇಶ್ ಸ್ಯಾಂಡಲ್ ವುಡ್ ನಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾದರು. ಸಾಲು ಸಾಲು ಸಿನಿಮಾಗಳಲ್ಲಿ ಕಾಣಿಸಿಕೊಂಡರು. ಮುಂಗಾರು ಮಳೆ ಬಳಿಕ ಗಣೇಶ್ ಮತ್ತು ಯೋಗರಾಜ್ ಭಟ್ ಜೋಡಿ ಗಾಳಿಪಟ ಸಿನಿಮಾ ಮೂಲಕ ಮತ್ತೆ ಒಂದಾದರು. ಆದರೆ ಈ ಸಿನಿಮಾ ಮುಂಗಾರು ಮಳೆಯಷ್ಟು ಯಶಸ್ಸು ಕಾಣಲಿಲ್ಲ.
This News Article is a Copy of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm