ಬ್ರೇಕಿಂಗ್ ನ್ಯೂಸ್
31-12-20 01:23 pm Source: FILMIBEAT Shruthi Gk ಸಿನಿಮಾ
ಬೆಂಗಳೂರು,ಡಿ.31: 2020ರ ಕೊನೆಯ ದಿನದಲ್ಲಿದ್ದೇವೆ. ಈ ವರ್ಷ ಸಿಹಿಗಿಂತ ಹೆಚ್ಚಾಗಿ ಕಹಿ ಅನುಭವಿಸಿದ್ದೆ ಜಾಸ್ತಿ. ಕೊರೊನಾ ವೈರಸ್ ಈ ವರ್ಷದ ಎಲ್ಲಾ ಸಂತೋಷ, ನೆಮ್ಮದಿಯನ್ನೆ ನುಂಗಿ ಹಾಕಿದೆ. ಅಂತೂ ಈ ವರ್ಷ ಕಳೆಯಿತು ಬರುವ ವರ್ಷವಾದರೂ ಅದ್ಭುತವಾಗಿರಲಿ, ಮೊದಲು ಕೊರೊನಾ ತೊಲಗಲಿ ಎಂದು ಎಲ್ಲರೂ ಪ್ರಾರ್ಥನೆ ಮಾಡಿಕೊಳ್ಳುತ್ತಿದ್ದಾರೆ. 2021ನ್ನು ಅದ್ದೂರಿಯಾಗಿ ಸ್ವಾಗತ ಮಾಡಲು ಇಡೀ ವಿಶ್ವ ಎದುರು ನೋಡುತ್ತಿದೆ. ಅನೇಕರು ಹೊಸ ವರ್ಷವನ್ನು ವಿಭಿನ್ನವಾಗಿ ಆಚರಣೆ ಮಾಡುತ್ತಾರೆ. ಹೊಸ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ಸ್ಯಾಂಡಲ್ ವುಡ್ ನಟ ವಸಿಷ್ಠ ಸಿಂಹ 2021ಅನ್ನು ವಿಭಿನ್ನವಾಗಿ ಆಚರಣೆ ಮಾಡಲು ಪ್ಲಾನ್ ಮಾಡಿದ್ದಾರೆ.
ಹೌದು, ವಸಿಷ್ಠ ನಾಳೆ ಅಂದರೆ 2021 ಮೊದಲ ದಿನ ಪ್ರಾಣಿಯನ್ನು ದತ್ತು ಪಡೆಯುತ್ತಿದ್ದಾರೆ. ಈ ಮೂಲಕ ಹೊಸ ವರ್ಷದ ಮೊದಲ ದಿನವನ್ನು ಹೊಸ ರೀತಿ ಆಚರಿಸಲು ನಿರ್ಧರಿಸಿದ್ದಾರೆ. ಬೆನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ವಸಿಷ್ಠ ಪ್ರಾಣಿಯನ್ನು ದತ್ತು ಪಡೆಯುತ್ತಿದ್ದಾರೆ. ಆದರೆ ಯಾವ ಪ್ರಾಣಿ ಎನ್ನುವುದು ಬಹಿರಂಗ ಪಡಿಸಿಲ್ಲ. ಆದರೆ ಪ್ರಾಣಿ ದತ್ತು ಪಡೆಯುವ ಮೂಲಕ 2021ನ್ನು ವಿಭಿನ್ನವಾಗಿ ಸದಾ ಕಾಲ ನೆನಪಿನಲ್ಲಿರುವ ಹಾಗೆ ಆಚರಣೆ ಮಾಡುತ್ತಿದ್ದಾರೆ.
ಅಂದಹಾಗೆ ಸ್ಯಾಂಡಲ್ ವುಡ್ ನಲ್ಲಿ ಅನೇಕ ಮಂದಿ ಪ್ರಾಣಿಗಳನ್ನು ದತ್ತು ಪಡೆದಿದ್ದಾರೆ. ಚಾಲೆಂಜ್ ಸ್ಟಾರ್ ದರ್ಶನ್, ಸೃಜನ್ ಲೋಕೇಶ್, ಶಿವರಾಜ್ ಕುಮಾರ್ ಸೇರಿದಂತೆ ಅನೇಕರು ಪ್ರಾಣಿಗಳನ್ನು ದತ್ತು ಪಡೆದಿದ್ದಾರೆ. ಇದೀಗ ಅದೇ ಸಾಲಿಗೆ ವಸಿಷ್ಠ್ ಸಹ ಸೇರುತ್ತಿದ್ದಾರೆ.
ನಟ ದರ್ಶನ್ ಅವರಿಗೆ ಇರುವ ಪ್ರಾಣಿ ಪ್ರೀತಿ ಬಗ್ಗೆ ಎಲ್ಲರಿಗೂ ಗೊತ್ತಿದೆ. ಆಗಾಗ ಮೈಸೂರು ಮೃಗಾಲಯದಲ್ಲಿ ಕಾಣಿಸಿಕೊಳ್ಳುತ್ತಿರುತ್ತಾರೆ. ಇನ್ನು ಇತ್ತೀಚಿಗೆ ನಟ ಶಿವರಾಜ್ ಕುಮಾರ್ ಮೈಸೂರು ಮೃಗಾಲಯ ನಲ್ಲಿ ಪಾರ್ವತಿ ಎನ್ನುವ ಆನೆಯನ್ನು ದತ್ತು ಪಡೆದಿದ್ದಾರೆ. ಇದೀಗ ವಸಿಷ್ಠ ಯಾವ ಪ್ರಾಣಿಯನ್ನು ದತ್ತು ಪಡೆಯುತ್ತಾರೆ ಎನ್ನುವುದನ್ನು ಕಾದುನೋಡಬೇಕು.
This News Article is a Copy of FILMIBEAT
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm