ಬ್ರೇಕಿಂಗ್ ನ್ಯೂಸ್
31-12-20 01:23 pm Source: FILMIBEAT Shruthi Gk ಸಿನಿಮಾ
ಬೆಂಗಳೂರು,ಡಿ.31: 2020ರ ಕೊನೆಯ ದಿನದಲ್ಲಿದ್ದೇವೆ. ಈ ವರ್ಷ ಸಿಹಿಗಿಂತ ಹೆಚ್ಚಾಗಿ ಕಹಿ ಅನುಭವಿಸಿದ್ದೆ ಜಾಸ್ತಿ. ಕೊರೊನಾ ವೈರಸ್ ಈ ವರ್ಷದ ಎಲ್ಲಾ ಸಂತೋಷ, ನೆಮ್ಮದಿಯನ್ನೆ ನುಂಗಿ ಹಾಕಿದೆ. ಅಂತೂ ಈ ವರ್ಷ ಕಳೆಯಿತು ಬರುವ ವರ್ಷವಾದರೂ ಅದ್ಭುತವಾಗಿರಲಿ, ಮೊದಲು ಕೊರೊನಾ ತೊಲಗಲಿ ಎಂದು ಎಲ್ಲರೂ ಪ್ರಾರ್ಥನೆ ಮಾಡಿಕೊಳ್ಳುತ್ತಿದ್ದಾರೆ. 2021ನ್ನು ಅದ್ದೂರಿಯಾಗಿ ಸ್ವಾಗತ ಮಾಡಲು ಇಡೀ ವಿಶ್ವ ಎದುರು ನೋಡುತ್ತಿದೆ. ಅನೇಕರು ಹೊಸ ವರ್ಷವನ್ನು ವಿಭಿನ್ನವಾಗಿ ಆಚರಣೆ ಮಾಡುತ್ತಾರೆ. ಹೊಸ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ಸ್ಯಾಂಡಲ್ ವುಡ್ ನಟ ವಸಿಷ್ಠ ಸಿಂಹ 2021ಅನ್ನು ವಿಭಿನ್ನವಾಗಿ ಆಚರಣೆ ಮಾಡಲು ಪ್ಲಾನ್ ಮಾಡಿದ್ದಾರೆ.
ಹೌದು, ವಸಿಷ್ಠ ನಾಳೆ ಅಂದರೆ 2021 ಮೊದಲ ದಿನ ಪ್ರಾಣಿಯನ್ನು ದತ್ತು ಪಡೆಯುತ್ತಿದ್ದಾರೆ. ಈ ಮೂಲಕ ಹೊಸ ವರ್ಷದ ಮೊದಲ ದಿನವನ್ನು ಹೊಸ ರೀತಿ ಆಚರಿಸಲು ನಿರ್ಧರಿಸಿದ್ದಾರೆ. ಬೆನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ವಸಿಷ್ಠ ಪ್ರಾಣಿಯನ್ನು ದತ್ತು ಪಡೆಯುತ್ತಿದ್ದಾರೆ. ಆದರೆ ಯಾವ ಪ್ರಾಣಿ ಎನ್ನುವುದು ಬಹಿರಂಗ ಪಡಿಸಿಲ್ಲ. ಆದರೆ ಪ್ರಾಣಿ ದತ್ತು ಪಡೆಯುವ ಮೂಲಕ 2021ನ್ನು ವಿಭಿನ್ನವಾಗಿ ಸದಾ ಕಾಲ ನೆನಪಿನಲ್ಲಿರುವ ಹಾಗೆ ಆಚರಣೆ ಮಾಡುತ್ತಿದ್ದಾರೆ.
ಅಂದಹಾಗೆ ಸ್ಯಾಂಡಲ್ ವುಡ್ ನಲ್ಲಿ ಅನೇಕ ಮಂದಿ ಪ್ರಾಣಿಗಳನ್ನು ದತ್ತು ಪಡೆದಿದ್ದಾರೆ. ಚಾಲೆಂಜ್ ಸ್ಟಾರ್ ದರ್ಶನ್, ಸೃಜನ್ ಲೋಕೇಶ್, ಶಿವರಾಜ್ ಕುಮಾರ್ ಸೇರಿದಂತೆ ಅನೇಕರು ಪ್ರಾಣಿಗಳನ್ನು ದತ್ತು ಪಡೆದಿದ್ದಾರೆ. ಇದೀಗ ಅದೇ ಸಾಲಿಗೆ ವಸಿಷ್ಠ್ ಸಹ ಸೇರುತ್ತಿದ್ದಾರೆ.
ನಟ ದರ್ಶನ್ ಅವರಿಗೆ ಇರುವ ಪ್ರಾಣಿ ಪ್ರೀತಿ ಬಗ್ಗೆ ಎಲ್ಲರಿಗೂ ಗೊತ್ತಿದೆ. ಆಗಾಗ ಮೈಸೂರು ಮೃಗಾಲಯದಲ್ಲಿ ಕಾಣಿಸಿಕೊಳ್ಳುತ್ತಿರುತ್ತಾರೆ. ಇನ್ನು ಇತ್ತೀಚಿಗೆ ನಟ ಶಿವರಾಜ್ ಕುಮಾರ್ ಮೈಸೂರು ಮೃಗಾಲಯ ನಲ್ಲಿ ಪಾರ್ವತಿ ಎನ್ನುವ ಆನೆಯನ್ನು ದತ್ತು ಪಡೆದಿದ್ದಾರೆ. ಇದೀಗ ವಸಿಷ್ಠ ಯಾವ ಪ್ರಾಣಿಯನ್ನು ದತ್ತು ಪಡೆಯುತ್ತಾರೆ ಎನ್ನುವುದನ್ನು ಕಾದುನೋಡಬೇಕು.
This News Article is a Copy of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm