ಬ್ರೇಕಿಂಗ್ ನ್ಯೂಸ್
01-01-21 11:20 am Source: FILMIBEAT ಸಿನಿಮಾ
ತೆಲುಗು ಸಿನಿಮಾರಂಗದ ಖ್ಯಾತ ಕಲಾವಿದ ನರ್ರಿಂಗ್ ಯಾದವ್ ನಿಧನ ಹೊಂದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ನಟ ನರ್ಸಿಂಗ್ ಯಾದವ್ ನಿನ್ನೆ ಸಂಜೆ ಹೈದರಾಬಾದ್ ನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ನರ್ಸಿಂಗ್ ಯಾದವ್ ಅವರಿಗೆ 52 ವರ್ಷವಾಗಿತ್ತು. ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ನರ್ಸಿಂಗ್ ಯಾದವ್ ಅವರನ್ನು ಹೈದರಾಬಾದ್ ನ ಸೋಮಾಜಿಗೊಡದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನರ್ಸಿಂಗ್ ಯಾದವ್ ಕೊನೆಯುಸಿರೆಳೆದಿದ್ದಾರೆ.
ನರ್ಸಿಂಗ್ ಯಾದವ್ ಅನೇಕ ಸಿನಿಮಾಗಳಲ್ಲಿ ಹಾಸ್ಯ ಮತ್ತು ಖಳನಟನಾಗಿ ಮಿಂಚಿದ್ದಾರೆ. ತೆಲುಗು, ತಮಿಳು ಮತ್ತು ಹಿಂದಿ ಸೇರಿದಂತೆ ಸುಮಾರು 30ಕ್ಕು ಹೆಚ್ಚು ಸಿನಿಮಾಗಳಲ್ಲಿ ಬಣ್ಣಹಚ್ಚುವ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. 1968ರಲ್ಲಿ ಜನಿಸಿದ ನರ್ಸಿಂಗ್ ಯಾದವ್, ಹೇಮಹೆಮಿಲು ಚಿತ್ರದ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು. ಬಳಿಕ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮ ಅವರ ಮೊಮೆಂಟ್ ಸಿನಿಮಾದಲ್ಲಿ ನಟಿಸಿದ್ದ ನರ್ಸಿಂಗ್ ಯಾದವ್ ಅವರಿಗೆ ದೊಡ್ಡ ಮಟ್ಟದ ಖ್ಯಾತಿ ತಂದುಕೊಟ್ಟಿತು.
ಸಂದರ್ಶನವೊಂದರಲ್ಲಿ ರಾಮ್ ಗೋಪಾಲ್ ವರ್ಮ ಬಗ್ಗೆ ಮಾತನಾಡಿದ್ದ ನರ್ಸಿಂಗ್ ಯಾದವ್, 'ನಾನು ನಟನೆ ಹೇಗೆ ಮಾಡಬೇಕು ಎಂಬುದನ್ನು ಅವರಿಂದ ಕಲಿತುಕೊಂಡೆ' ಎಂದು ಹೇಳಿದ್ದರು. ಯಾದವ್ ಮಾಯಲೋಡು, ಅಲ್ಲರಿ ಪ್ರೇಮಿಕುಡು, ಮುಠಾಮೇಸ್ತ್ರಿ, ಮಾಸ್ಟರ್ , ನವೋಸ್ತಾನಂತೆ ನೆನೋದ್ದಂಟಾನಾ, ಈಡಿಯಟ್, ಪೋಕಿರಿ, ಜಾನಿ ಸೇರಿದಂತೆ ಪ್ರಮುಖ ಸಿನಿಮಾಗಳಲ್ಲಿ ನಟಿಸಿದ್ದಾರೆ. ನರ್ಸಿಂಗ್ ಯಾದವ್ ಕೊನೆಯ ಬಾರಿಗೆ ನರ್ಸಿಂಗ್ ಯಾದವ್ ಚಿರಂಜೀವಿ ಅಭಿನಯದ 150ನೇ ಸಿನಿಮಾ ಖೈದಿ ನಂಬರ್ 150 ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ನರ್ಸಿಂಗ್ ಯಾದವ್ ಪತ್ನಿ ಚಿತ್ರ ರುತ್ವಿಕ್ ಮತ್ತು ಮಗನನ್ನು ಅಗಲಿದ್ದಾರೆ.
This News Article is a Copy of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm