ಬ್ರೇಕಿಂಗ್ ನ್ಯೂಸ್
03-01-21 02:21 pm Priya, Headline Karnataka ಸಿನಿಮಾ
ಬೆಂಗಳೂರು, ಜ.3: 2020ನೇ ಸಾಲಿನ 'ದಾದಾ ಸಾಹೇಬ್ ಫಾಲ್ಕೆ ಅವಾರ್ಡ್ಸ್ ಸೌತ್' ಪಟ್ಟಿ ಬಿಡುಗಡೆಯಾಗಿದ್ದು ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ, ನಟ ರಕ್ಷಿತ್ ಶೆಟ್ಟಿ, ಹಿರಿಯ ನಟ ಶಿವರಾಜ್ಕುಮಾರ್ ಪ್ರಶಸ್ತಿ ಘೋಷಣೆ ಆಗಿದೆ.
ಪಿ. ಶೇಷಾದ್ರಿ ನಿರ್ದೇಶನದ 'ಮೂಕಜ್ಜಿಯ ಕನಸುಗಳು' ಚಿತ್ರಕ್ಕೆ 'ಅತ್ಯುತ್ತಮ ಸಿನಿಮಾ' ಪ್ರಶಸ್ತಿ ಸಿಕ್ಕಿದೆ. 'ಅವನೇ ಶ್ರೀಮನ್ನಾರಾಯಣ' ಸಿನಿಮಾದಲ್ಲಿನ ಅಭಿನಯಕ್ಕಾಗಿ ರಕ್ಷಿತ್ ಶೆಟ್ಟಿಗೆ 'ಅತ್ಯುತ್ತಮ ನಟ' ಹಾಗೂ 'ಯಜಮಾನ' ಚಿತ್ರದಲ್ಲಿನ ಅಭಿನಯಕ್ಕಾಗಿ ತಾನ್ಯಾ ಹೋಪ್ 'ಅತ್ಯುತ್ತಮ ನಟಿ' ಎನಿಸಿಕೊಂಡಿದ್ದಾರೆ. ವಿ. ಹರಿಕೃಷ್ಣ ಅತ್ಯುತ್ತಮ ಸಂಗೀತ ನಿರ್ದೇಶಕ, ರಮೇಶ್ ಇಂದಿರಾ ಅತ್ಯುತ್ತಮ ನಿರ್ದೇಶಕ (ಪ್ರೀಮಿಯರ್ ಪದ್ಮಿನಿ), ಶಿವರಾಜ್ ಕುಮಾರ್ 'ಬಹುಮುಖ ಸಾಮರ್ಥ್ಯವುಳ್ಳ ನಟ' ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಕನ್ನಡ, ತಮಿಳು, ಮಲಯಾಳಂ ಮತ್ತು ತಮಿಳು ಚಿತ್ರರಂಗದ ಕಲಾವಿದರು ಮತ್ತು ತಂತ್ರಜ್ಞರಿಗೆ ಈ ಪ್ರಶಸ್ತಿ ನೀಡಲಾಗಿದೆ. 'ಡಿಯರ್ ಕಾಮ್ರೇಡ್' ತೆಲುಗು ಸಿನಿಮಾದ ನಟನೆಗಾಗಿ ರಶ್ಮಿಕಾ ಮಂದಣ್ಣ ಅವರಿಗೆ 'ಅತ್ಯುತ್ತಮ ನಟಿ' ಪ್ರಶಸ್ತಿ ನೀಡಲಾಗಿದೆ. ತೆಲುಗಿನಲ್ಲಿ ನಾನಿ ನಟನೆಯ 'ಜೆರ್ಸಿ'ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ ಸಿಕ್ಕಿದೆ. 'ಅತ್ಯುತ್ತಮ ನಿರ್ದೇಶಕ' ಪ್ರಶಸ್ತಿ ಸುಜೀತ್ (ಸಾಹೋ) ಪಾಲಾಗಿದೆ.
ತಮಿಳಿನಲ್ಲಿ ಅಜಿತ್ ಕುಮಾರ್, ತೆಲುಗಿನಲ್ಲಿ ಅಕ್ಕಿನೇನಿ ನಾಗಾರ್ಜುನ, ಮಲಯಾಳಂನಲ್ಲಿ ಮೋಹನ್ ಲಾಲ್ ಅವರಿಗೆ 'ಬಹುಮುಖ ಸಾಮರ್ಥ್ಯವುಳ್ಳ ನಟ' ಪ್ರಶಸ್ತಿ ನೀಡಲಾಗಿದೆ. ಅಂದಹಾಗೆ, ಇದು ಭಾರತ ಸರ್ಕಾರದಿಂದ ನೀಡಲಾಗುವ 'ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ' ಅಲ್ಲ. ಫಾಲ್ಕೆ ಸೌತ್ ಹೆಸರಲ್ಲಿ ದಕ್ಷಿಣ ಭಾರತದ ಭಾಷೆಗಳ ಚಿತ್ರಗಳ ನಟ- ನಟಿಯರನ್ನು ಮತ್ತು ಚಿತ್ರಗಳನ್ನು ಗುರುತಿಸಿ ಪ್ರತಿ ವರ್ಷ ಹೈದರಾಬಾದ್ ನಲ್ಲಿ ಪ್ರಶಸ್ತಿ ನೀಡಲಾಗುತ್ತಿದೆ.
The winners of the Dadasaheb Phalke Awards 2020 South have been announced. The award honoured the individuals from the Tamil, Malayalam, Telugu, and Kannada film industries for their outstanding contribution towards the growth and development of cinema.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
10-01-26 03:22 pm
HK News Desk
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
10-01-26 10:45 pm
Mangalore Correspondent
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
ಕರಾವಳಿ ಟೂರಿಸಂ ಅಭಿವೃದ್ಧಿಗೆ ಜನಪ್ರನಿಧಿಗಳು, ಉದ್ಯಮ...
10-01-26 06:23 pm
ಉದ್ಯೋಗ ಖಾತ್ರಿ ಯೋಜನೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ...
10-01-26 06:07 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm