ಬ್ರೇಕಿಂಗ್ ನ್ಯೂಸ್
04-01-21 02:52 pm Source: FILMIBEAT Bharath Kumar K ಸಿನಿಮಾ
ಬೆಂಗಳೂರು, ಜ.4 :ಸುಮಾರು ಐದು ದಶಕಗಳ ಕಾಲ ಕನ್ನಡ ಚಿತ್ರರಂಗದಲ್ಲಿ ತೊಡಗಿಕೊಂಡಿದ್ದ ಹಿರಿಯ ಕಲಾವಿದ ಹಿರಿಯ ನಟ ಶನಿಮಹದೇವಪ್ಪ (90 ವರ್ಷ) ಭಾನುವಾರ ಸಂಜೆ ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಕಳೆದೊಂದು ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟ ಕೊರೊನಾ ಸೋಂಕಿಗೆ ತುತ್ತಾಗಿ ಕೊನೆಯುಸಿರೆಳೆದರು ಎಂದು ಹೇಳಲಾಗಿದೆ. ವರನಟ ಡಾ ರಾಜ್ ಕುಮಾರ್ ಅವರ ಬಹುತೇಕ ಚಿತ್ರಗಳಲ್ಲಿ ಶನಿ ಮಹಾದೇವಪ್ಪ ಅವರು ಇರುತ್ತಿದ್ದರು. ನಾಟಕ, ಸಿನಿಮಾಗಳ ವೈವಿಧ್ಯಮಯ ಪಾತ್ರಗಳ ಮೂಲಕ ಜನರಿಗೆ ಚಿರಪರಿಚಿತರಾಗಿದ್ದ ಕಲಾವಿದ ಇನ್ನಿಲ್ಲ ಎಂಬ ಸುದ್ದಿ ಕೇಳಿ ಸಿನಿಪ್ರೇಮಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ಅವರ ಕಲಾಸೇವೆ ಚಿರಸ್ಥಾಯಿ ''ಇಂದು ನಮ್ಮನ್ನೆಲ್ಲ ಅಗಲಿದ ಹಿರಿಯ ಕಲಾವಿದರಾದ ಶನಿ ಮಹಾದೇವಪ್ಪನವರ (90 ವರ್ಷ) ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುವೆ. ಸರಿ ಸುಮಾರು 550 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಸಿರುವ ಅವರ ಕಲಾಸೇವೆ ಚಿರಸ್ಥಾಯಿ. ಅವರ ಕುಟುಂಬ ಹಾಗೂ ಪ್ರೀತಿಪಾತ್ರರಿಗೆ ಈ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ'' - ಸುಮಲತಾ ಅಂಬರೀಶ್

ಪುನೀತ್ ಸಂತಾಪ ''ಅಪ್ಪಾಜಿಯವರ ಜೊತೆ ಭಕ್ತ ಕುಂಬಾರ, ಶ್ರೀನಿವಾಸ ಕಲ್ಯಾಣ, ಕವಿರತ್ನ ಕಾಳಿದಾಸ, ಮೂರೂವರೆ ವಜ್ರಗಳು ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿದ ಹಿರಿಯ ನಟರಾದ ಶನಿ ಮಹದೇವಪ್ಪನವರು ನಮ್ಮನ್ನು ಅಗಲಿದ್ದಾರೆ'' - ಪುನೀತ್ ರಾಜ್ ಕುಮಾರ್

ಸುದೀಪ್ ಸಂತಾಪ ಹಿರಿಯ ಕಲಾವಿದ, ಅಣ್ಣಾವ್ರ ಚಿತ್ರಗಳಲ್ಲಿ ಹೆಚ್ಚು ನಟಿಸಿರುವ ಶನಿ ಮಹಾದೇವಪ್ಪ ಅವರ ನಿಧನಕ್ಕೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಹ ಸಂತಾಪ ಸೂಚಿಸಿದ್ದಾರೆ. ತಮ್ಮ ಟ್ವಿಟ್ಟರ್ನಲ್ಲಿ ಶನಿ ಮಹಾದೇವಪ್ಪ ಅವರ ಫೋಟೋ ಹಂಚಿಕೊಂಡು ಆತ್ಮಕ್ಕೆ ಶಾಂತಿ ಕೋರಿದ್ದಾರೆ.

ಮಾವ ಎಂದು ಕರೆಯುತ್ತಿದ್ದೆ- ಜಗ್ಗೇಶ್ ''1984 ರಿಂದ ಬಲ್ಲೆ ಈತನ ಮಾವ ಎಂದು ಕರೆಯುತ್ತಿದ್ದೆ. ಅಣ್ಣನ ಆತ್ಮೀಯ! ಸಕ್ಕರೆ ಖಾಯಿಲೆಯಿಂದ ಎರಡು ಕಣ್ಣು ಕಳೆದುಕೊಂಡಿದ್ದ. 10 ವರ್ಷ ಹಿಂದೆ ಮೇಯರ್ ಫಂಡ್ನಿಂದ ಈತನಿಗೆ ವಿಶೇಷ ಪ್ಯಾಕೇಜ್ 5 ಲಕ್ಷ ಬರುವಂತೆ ಶ್ರಮಿಸಿದ್ದೆ ಹಾಗು ವೈಯಕ್ತಿಕವಾಗಿ ನಾನು ಬ್ಯಾಂಕ್ ಜನಾರ್ದನ ಜೂತೆ ಹೋಗಿ ಕೈಲಾದ ಸಹಾಯ ಮಾಡಿದ್ದೆ. 80 ವರ್ಷ ವಯಸ್ಸು ದಾಟಿದೆ. ಇವರ ಆತ್ಮಕ್ಕೆ ಶಾಂತಿ'' - ಜಗ್ಗೇಶ್
This News Article is a Copy of FILMIBEAT
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
10-01-26 03:22 pm
HK News Desk
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
10-01-26 10:45 pm
Mangalore Correspondent
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
ಕರಾವಳಿ ಟೂರಿಸಂ ಅಭಿವೃದ್ಧಿಗೆ ಜನಪ್ರನಿಧಿಗಳು, ಉದ್ಯಮ...
10-01-26 06:23 pm
ಉದ್ಯೋಗ ಖಾತ್ರಿ ಯೋಜನೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ...
10-01-26 06:07 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm