ಬ್ರೇಕಿಂಗ್ ನ್ಯೂಸ್
04-01-21 02:59 pm Source: FILMIBEAT ಸಿನಿಮಾ
ಸ್ಯಾಂಡಲ್ ವುಡ್ ನ ಡಾಲಿ ಧನಂಜಯ ಸದ್ಯ ಕಾಶ್ಮೀರದಲ್ಲಿ ಬೀಡುಬಿಟ್ಟಿದ್ದಾರೆ. ಧನಂಜಯ ನಟಿ ರೆಬಾ ಮೋನಿಕಾ ಜೊತೆ ಕಶ್ಮೀರದಲ್ಲಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಂದಹಾಗೆ ಧನಂಜಯ್ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ. ಈ ನಡುವೆ ಧನಂಜಯ ಕಾಶ್ಮೀರ ಪ್ರವಾಸದಲ್ಲಿದ್ದಾರಾ ಅಂತ ಯೋಚಿಸುತ್ತೀರಾ?
ರೆಬಾ ಮೋನಿಕಾ, ಡಾಲಿ ಕಾಶ್ಮೀರದ ಫೋಟೊ ವೈರಲ್
ಧನಂಜಯ ಕಾಶ್ಮೀರ ಪ್ರವಾಸಕ್ಕೆ ಹೋಗಿರುವುದು ನಿಜ. ಆದರೆ ಚಿತ್ರೀಕರಣಕ್ಕಾಗಿ. ಹೌದು, ಡಾಲಿ ಸದ್ಯ ರತ್ನನ್ ಪ್ರಪಂಚ ಚಿತ್ರದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಸದ್ಯ ಹಿಮ ಪ್ರದೇಶದಲ್ಲಿ ನಡೆಯುತ್ತಿದೆ. ಚಿತ್ರದ ನಾಯಕಿ ರೆಬಾ ಮೋನಿಕಾ ಜೊತೆ ಧನಂಜಯ ಕ್ಲಿಕ್ಕಿಸಿಕೊಂಡಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಅಂದಹಾಗೆ 'ರತ್ನನ್ ಪ್ರಪಂಚ' ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಭರದಿಂದ ನಡೆಯುತ್ತಿದೆ. ಈಗಾಗಲೇ ಮೊದಲ ಹಂತದ ಚಿತ್ರೀಕರಣವನ್ನು ಮೈಸೂರಿನಲ್ಲಿ ಯಶಸ್ವಿಯಾಗಿ ಮಾಡಿ ಮುಗಿಸಿದ್ದಾರೆ. ರತ್ನನ್ ಪ್ರಪಂಚ ಸಿನಿಮಾ ನಿರ್ದೇಶಕ ರೋಹಿತ್ ಪದಕಿ ಸಾರಥ್ಯದಲ್ಲಿ ಮೂಡಿಬರುತ್ತಿದೆ.
ಮಲಯಾಳಂ ಮತ್ತು ತಮಿಳು ಸಿನಿಮಾರಂಗದಲ್ಲಿ ಮಿಂಚುತ್ತಿದ್ದ ನಟಿ ರೆಬಾ ಮೋನಿಕಾ ಇದೀಗ ಕನ್ನಡ ಸಿನಿಮಾರಂಗದಲ್ಲಿ ಮಿಂಚುತ್ತಿದ್ದಾರೆ. ಮೊದಲ ಬಾರಿಗೆ ನಟ ಧನಂಜಯಗೆ ಜೋಡಿಯಾಗಿದ್ದು, ಕನ್ನಡ ಪ್ರೇಕ್ಷಕರ ಮುಂದೆ ಬರಲು ಉತ್ಸುಕರಾಗಿದ್ದಾರೆ. ಅಂದಹಾಗೆ ಧನಂಜಯ ಚಿತ್ರದಲ್ಲಿ ಮಧ್ಯಮ ವರ್ಗದ ಸಾಮಾನ್ಯ ವ್ಯಕ್ತಿ ರತ್ನಾಕರ ಎನ್ನುವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹೆಚ್ಚು ಕೆಲಸ ಮಾಡುವ ಇನ್ಶೂರೆನ್ಸ್ ಏಜೆಂಟ್ ಆಗಿ ತನ್ನ ಕುಟುಂಬ ಸಾಗಿಸುವ ಪಾತ್ರದಲ್ಲಿ ಧನಂಜಯ ಮಿಂಚಿದ್ದಾರೆ. ವಿಶೇಷ ಎಂದರೆ ಸಿನಿಮಾದಲ್ಲಿ ಹಿರಿಯ ನಟಿ ಉಮಾಶ್ರೀ ಧನಂಜಯ ತಾಯಿ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಗ್ಯಾಪ್ ನ ಬಳಿಕ ಉಮಾಶ್ರೀ ರತ್ನನ್ ಪ್ರಪಂಚ ಸಿನಿಮಾ ಮೂಲಕ ನಟಿ ಉಮಾಶ್ರೀ ವಾಪಸ್ ಆಗಿದ್ದಾರೆ.

ಧನಂಜಯ ನಾಯಕ ಮತ್ತು ವಿಲನ್ ಎರಡು ಪಾತ್ರಗಳನ್ನು ಸರಿದೂಗಿಸಿಕೊಂಡು ಹೋಗುತ್ತಿದ್ದಾರೆ. ಸದ್ಯ ಧನಂಜಯ್ ಸಲಗ, ಪೊಗರು, ಯುವರತ್ನ, ಡಾಲಿ, ತೋತಾಪುರಿ, ಬಡವ ರಾಸ್ಕಲ್, ಹೆಡ್ ಬುಷ್, ಶಿವಪ್ಪ ಮತ್ತು ತೆಲುಗಿನ 'ಪುಷ್ಪ' ಸಿನಿಮಾದಲ್ಲಿ ಮಿಂಚುತ್ತಿದ್ದಾರೆ. ಅಲ್ಲದೆ ಇನ್ನೂ ಹೆಸರಿಡದ ಸಾಕಷ್ಟು ಸಿನಿಮಾಗಳು ಧನಂಜಯ್ ಬಳಿ ಇವೆ.
This News Article is a Copy of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm