ಬ್ರೇಕಿಂಗ್ ನ್ಯೂಸ್
05-01-21 12:26 pm Source: FILMIBEAT ಸಿನಿಮಾ
ಕಿರುತೆರೆ ನಟ ಮತ್ತು ಬಿಗ್ ಬಾಸ್ ಖ್ಯಾತಿಯ ನಿಶಾಂತ್ ಸಿಂಗ್ ಮಲ್ಖಾನಿ ಕಾರು ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ನಿಶಾಂತ್ ಮತ್ತು ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಜಸ್ಥಾನದಲ್ಲಿ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಾರನ್ನು ನಟ ನಿಶಾಂತ್ ಚಲಾಯಿಸುತ್ತಿದ್ದು, ಎದುರುಗಡೆಯಿಂದ ರಾಂಗ್ ಸೈಡ್ ನಲ್ಲಿ ಬಂದ ವಾಹನವನ್ನು ತಪ್ಪಿಸಲು ಹೋಗಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ರಸ್ತೆಯ ಪಕ್ಕದ ಪ್ರಪಾತಕ್ಕೆ ಬಿದ್ದ ಕಾರನ್ನು ಕ್ರೇನ್ ಬಳಸಿ ಮೇಲೆತ್ತಲಾಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ಕಾರಿನಲ್ಲಿ ನಿಶಾಂತ್ ಮತ್ತು ಸ್ನೇಹಿತರು ರಾಜಸ್ಥಾನಕ್ಕೆ ತೆರಳುತ್ತಿದ್ದರು ಎನ್ನುವ ಮಾಹಿತಿ ತಿಳಿದುಬಂದಿದೆ. ಈ ಘಟನೆ ಬಳಿಕ ಮಾಧ್ಯಮದವರ ಜೊತೆ ಮಾತನಾಡಿರುವ ನಿಶಾಂತ, ಯಾರು ಭಯಪಡುವ ಅವಶ್ಯಕತೆ ಇಲ್ಲ. ಸಣ್ಣ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ತಾಯಿಯ ಆಶೀರ್ವಾದ ಮತ್ತು ದೇವರ ದಯೆಯಿಂದ ಏನು ಆಗಿಲ್ಲ ಎಂದಿದ್ದಾರೆ.
ಕಾರು ನಾನೆ ಚಲಾಯಿಸುತ್ತಿದ್ದೆ. ಎದುರು ರಾಂಗ್ ಸೈಡ್ ನಿಂದ ವ್ಯಾನ್ ಬರ್ತಿರೊದನ್ನು ನೋಡಿ ಸೈಡ್ ತೆಗೆದುಕೊಳ್ಳಲು ಹೋಗಿ ಕೆಳಗೆ ಉರುಳಿದೆವು. ರಸ್ತೆ ತುಂಬಾ ಕಿರಿದಾಗಿತ್ತು. ನನ್ನ ಜೊತೆ ಇದ್ದ ಸ್ನೇಹಿತರು ಸುರಕ್ಷಿತರಾಗಿದ್ದಾರೆ. ಆದರೆ ನಮ್ಮ ಕಾರಿಗೆ ಹೊಡೆದ ಗಾಡಿ ತಕ್ಷಣ ಎಸ್ಕೇಪ್ ಆಗಿದೆ. ಕಾರಿನನಿಂದ ಹೊರಬಂದು ಬಳಿಕ ಪೊಲೀಸರಿಗೆ ಮಾಹಿತಿ ನೀಡಿದೆವು' ಎಂದು ನಿಶಾಂತ್ ಅಪಘಾತದ ಬಗ್ಗೆ ವಿವರಿಸಿದ್ದಾರೆ.
ನಿಶಾಂತ್ ಕಳೆದ ವರ್ಷ ಹಿಂದಿ ಬಿಗ್ ಬಾಸ್ ನಲ್ಲಿ ಕಾಣಿಸಿಕೊಂಡಿದ್ದರು. ಆದರೆ ಮನೆಯಿಂದ ಬೇಗ ಔಟ್ ಆಗಿ ಭಾರಿ ಬೇಸರ ಮಾಡಿಕೊಂಡಿದ್ದರು. ಬಿಗ್ ಮನೆಯಿಂದ ಹೊರಬಂದ ಬಳಿಕ ಬಿಗ್ ಬಾಸ್ ಸಹ ಸ್ಪರ್ಧಿಗಳ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಇದೀಗ ಅಪಘಾತದ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ.
This News Article is a Copy of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm