ಬ್ರೇಕಿಂಗ್ ನ್ಯೂಸ್
15-05-26 12:03 pm HK News Staffer ಸಿನಿಮಾ
ಬೆಂಗಳೂರು, ಮೇ 15: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರಿಗೆ ಸುಪ್ರೀಂ ಕೋರ್ಟ್ನಲ್ಲಿ ಮಹತ್ವದ ಹಿನ್ನಡೆ ಎದುರಾಗಿದೆ. ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಕ್ಷಣ ಪರಿಗಣಿಸಲು ನ್ಯಾಯಾಲಯ ನಿರಾಕರಿಸಿದ್ದು, ಪ್ರಕರಣದ ಸಾಕ್ಷ್ಯ ವಿಚಾರಣೆಯನ್ನು ಒಂದು ವರ್ಷದೊಳಗೆ ಪೂರ್ಣಗೊಳಿಸಲು ಸೂಚನೆ ನೀಡಿದೆ. ಅಲ್ಲದೆ, ಆ ಅವಧಿಯ ಬಳಿಕವೇ ಜಾಮೀನಿನ ವಿಚಾರವನ್ನು ಪರಿಗಣಿಸಬಹುದೆಂದು ಸ್ಪಷ್ಟಪಡಿಸಿದೆ.
ಈ ಮೂಲಕ ನಟ ದರ್ಶನ್ ಅವರಿಗೆ ಕನಿಷ್ಠ ಇನ್ನೂ ಒಂದು ವರ್ಷ ಜೈಲುವಾಸ ಮುಂದುವರಿಯುವ ಸಾಧ್ಯತೆ ಹೆಚ್ಚಾಗಿದೆ.
ಜೈಲಿನಲ್ಲಿರುವ ಸೌಲಭ್ಯಗಳ ಕೊರತೆ, ಆರೋಗ್ಯ ಸಮಸ್ಯೆ, ಕುಟುಂಬ ಸದಸ್ಯರನ್ನು ಭೇಟಿಯಾಗಲು ಅವಕಾಶ ನಿರಾಕರಣೆ, ಸಹ ಕೈದಿಗಳಿಂದ ಕಿರುಕುಳ ಹಾಗೂ ಇನ್ನೂ ಕ್ವಾರಂಟೈನ್ ಸೆಲ್ನಲ್ಲೇ ಇರಿಸಲಾಗಿದೆ ಎಂಬ ಅಂಶಗಳನ್ನು ಉಲ್ಲೇಖಿಸಿ ದರ್ಶನ್ ಪರ ವಕೀಲರು ಸುಪ್ರೀಂ ಕೋರ್ಟ್ಗೆ ಜಾಮೀನು ಅರ್ಜಿ ಸಲ್ಲಿಸಿದ್ದರು.
ಇಂದು ನಡೆದ ವಿಚಾರಣೆಯಲ್ಲಿ ದರ್ಶನ್ ಪರ ಖ್ಯಾತ ವಕೀಲ ಮುಕುಲ್ ರೋಹ್ಟಗಿ ವಾದ ಮಂಡಿಸಿ, “ಪ್ರಕರಣದಲ್ಲಿ 272ಕ್ಕೂ ಹೆಚ್ಚು ಸಾಕ್ಷಿಗಳಿದ್ದು, ಈವರೆಗೆ ಕೇವಲ 10 ಮಂದಿಯ ಸಾಕ್ಷ್ಯ ವಿಚಾರಣೆ ಮಾತ್ರ ನಡೆದಿದೆ. ವಿಚಾರಣೆ ವಿಳಂಬವಾಗುತ್ತಿರುವುದರಿಂದ ಆರೋಪಿಯ ಮೂಲಭೂತ ಹಕ್ಕುಗಳಿಗೆ ಧಕ್ಕೆ ಉಂಟಾಗಿದೆ” ಎಂದು ನ್ಯಾಯಾಲಯದ ಗಮನಕ್ಕೆ ತಂದರು.
ಇದಕ್ಕೆ ಪ್ರತಿಯಾಗಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಸಿದ್ಧಾರ್ಥ್ ಲೂತ್ರಾ ತೀವ್ರ ಆಕ್ಷೇಪ ವ್ಯಕ್ತಪಡಿಸಿ, “ಸಾಕ್ಷಿಗಳ ಮೇಲೆ ಯಾವ ರೀತಿಯ ಒತ್ತಡ ಮತ್ತು ಪ್ರಭಾವ ಬೀರಲಾಗಿದೆ ಎಂಬುದನ್ನು ಸಂಪೂರ್ಣವಾಗಿ ಹೇಳಿದರೆ ಜಾಮೀನು ಅರ್ಜಿಯೇ ತಿರಸ್ಕೃತವಾಗುತ್ತದೆ” ಎಂದು ವಾದಿಸಿದರು.
ಎರಡೂ ಕಡೆಯ ವಾದ ಆಲಿಸಿದ ನ್ಯಾಯಮೂರ್ತಿಗಳು, “ಒಂದು ವರ್ಷದೊಳಗೆ ಕನಿಷ್ಠ 60 ಸಾಕ್ಷಿಗಳ ವಿಚಾರಣೆ ಪೂರ್ಣಗೊಳಿಸಬೇಕು. ಬಳಿಕ ಆರೋಪಿಯು ವಿಚಾರಣಾ ನ್ಯಾಯಾಲಯದಲ್ಲೇ ಜಾಮೀನಿಗೆ ಅರ್ಜಿ ಸಲ್ಲಿಸಬಹುದು” ಎಂದು ಸೂಚಿಸಿದರು.
ಇದೇ ವೇಳೆ, ಜೈಲಿನಲ್ಲಿ ಇತರ ಕೈದಿಗಳಿಗೆ ನೀಡಲಾಗುವ ಸೌಲಭ್ಯಗಳನ್ನು ದರ್ಶನ್ಗೂ ನೀಡಬೇಕು ಎಂದು ನ್ಯಾಯಾಲಯ ಸೂಚಿಸಿದೆ. ಆದರೆ, ಕ್ವಾರಂಟೈನ್ ಸೆಲ್ನಲ್ಲಿರಿಸುವ ವಿಚಾರದಲ್ಲಿ ಯಾವುದೇ ವಿಶೇಷ ಆದೇಶ ನೀಡಲು ನ್ಯಾಯಾಲಯ ನಿರಾಕರಿಸಿದೆ.
ರೆಣುಕಾಸ್ವಾಮಿ ಕೊಲೆ ಪ್ರಕರಣ ರಾಜ್ಯದಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ದರ್ಶನ್ ಬಂಧನದ ಬಳಿಕ ಅಭಿಮಾನಿಗಳಲ್ಲೂ ತೀವ್ರ ಆತಂಕ ಮತ್ತು ಕುತೂಹಲ ಮುಂದುವರಿದಿದೆ. ಇದೀಗ ಸುಪ್ರೀಂ ಕೋರ್ಟ್ನ ಈ ತೀರ್ಮಾನ ಪ್ರಕರಣಕ್ಕೆ ಹೊಸ ತಿರುವು ನೀಡಿದೆ.
ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಖ್ಯಾತಿ, ಹಣ ಅಥವಾ ಪ್ರಭಾವಕ್ಕಿಂತ ನ್ಯಾಯ ಮತ್ತು ಸತ್ಯವೇ ಅಂತಿಮವಾಗಿ ಮೇಲುಗೈ ಸಾಧಿಸುತ್ತದೆ. ಸಮಾಜದಲ್ಲಿ ಹಿಂಸೆ ಮತ್ತು ಕಾನೂನುಬಾಹಿರ ಕೃತ್ಯಗಳಿಗೆ ಅವಕಾಶ ನೀಡದೆ, ನ್ಯಾಯಾಂಗ ವ್ಯವಸ್ಥೆಯನ್ನು ಗೌರವಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm