ಬ್ರೇಕಿಂಗ್ ನ್ಯೂಸ್
06-01-21 11:14 am Source: FILMIBEAT ಸಿನಿಮಾ
'ಮನಸೆಲ್ಲಾ ನೀನೆ' ಸಿನಿಮಾವನ್ನು ಕನ್ನಡ ಸಿನಿಪ್ರೇಮಿಗಳು ಮರೆತಿರಲಿಕ್ಕಿಲ್ಲ. ತೆಲುಗಿನಲ್ಲಿ ಹಿಟ್ ಆಗಿದ್ದ 'ಮನಸಂತಾ ನೂವೆ' ಸಿನಿಮಾದ ಕನ್ನಡ ರೀಮೇಕ್ ಆದ ಈ ಸಿನಿಮಾ ಕನ್ನಡದಲ್ಲಿಯೂ ಸಖತ್ ಹಿಟ್ ಆಗಿತ್ತು. ಸಿನಿಮಾದ ನಾಯಕ ಪ್ರಸಾದ್ ಅಲಿಯಾಸ್ ನಾಗೇಂದ್ರ ಪ್ರಸಾದ್ ತಮ್ಮ ಅಮಾಯಕ ಭಾವದ ಅಭಿನಯ, ಅದ್ಭುತವಾದ ಡಾನ್ಸ್ ನಿಂದ ಎಲ್ಲರ ಗಮನ ಸೆಳೆದಿದ್ದರು. ಆದರೆ ಅದ್ಯಾಕೊ ಏನೊ ಕನ್ನಡದಲ್ಲಿ ಅದೇ ಅವರ ಕೊನೆಯ ಸಿನಿಮಾ ಆಗಿಬಿಟ್ಟಿತು. ಆದರೆ ಈಗ ಅದೇ ನಾಗೇಂದ್ರ ಪ್ರಸಾದ್ ಕನ್ನಡಕ್ಕೆ ವಾಪಸ್ ಬಂದಿದ್ದಾರೆ. ಆದರೆ ಈ ಬಾರಿ ನಟನಾಗಿ ಅಲ್ಲದೆ ನಿರ್ದೇಶಕನಾಗಿ ಬಂದಿದ್ದಾರೆ. ಕನ್ನಡದಲ್ಲಿ ಸಿನಿಮಾವೊಂದನ್ನು ನಿರ್ದೇಶಿಸಲಿದ್ದಾರೆ ನಾಗೇಂದ್ರ ಪ್ರಸಾದ್. ತಮಿಳಿನಲ್ಲಿ ಈಗಾಗಲೇ ಹಿಟ್ ಆಗಿರುವ ಕಾಮಿಡಿ-ಪ್ರೇಮಕತಾ ಸಿನಿಮಾ 'ಓಹ್ ಮೈ ಕಡವಲೆ' ಸಿನಿಮಾವನ್ನು ಕನ್ನಡಕ್ಕೆ ತರುತ್ತಿದ್ದಾರೆ ಪ್ರಸಾದ್. ನಟ-ನಟಿಯರು ಇನ್ನೂ ಅಂತಿಮವಾಗಿಲ್ಲ, ಆದರೆ ಕೆಲವು ಹೆಸರಾಂತ ನಟ-ನಟಿಯರ ಹೆಸರನ್ನು ಪಟ್ಟಿಮಾಡಿಕೊಂಡಿದ್ದಾರಂತೆ ನಾಗೇಂದ್ರಪ್ರಸಾದ್.

ತಮಿಳಿನಲ್ಲಿ ಹಿಟ್ ಸಿನಿಮಾ 'ಓಹ್ ಮೈ ಕಡವುಲೆ'
ತಮಿಳಿನಲ್ಲಿ ಓಹ್ ಮೈ ಕಡವುಲೆ ಸಿನಿಮಾದಲ್ಲಿ ಅಶೋಕ್ ಸೆಲ್ವನ್, ರಿತಿಕಾ ಸಿಂಗ್, ಶಾ ರಾ, ರಮೇಶ್ ತಾಯಿಕ್ ನಟಿಸಿದ್ದಾರೆ. ಸಿನಿಮಾದಲ್ಲಿ ವಿಜಯ್ ಸೇತುಪತಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾವನ್ನು ಅಶ್ವತ್ಥ ಮಾರಿಮುತ್ತು ನಿರ್ದೇಶಿಸಿದ್ದಾರೆ.
ನೃತ್ಯ ನಿರ್ದೇಶಕನಾಗಿ ಯಶಸ್ವಿಯಾಗಿರುವ ನಾಗೇಂದ್ರ ಪ್ರಸಾದ್
ಜೀನ್ಸ್, ಚಾಕಲೇಟ್, ಮಿನ್ನಲೆ, ಉದಯಂ ಎನ್ಎಚ್ 4 ಇನ್ನೂ ಹಲವು ಸಿನಿಮಾಗಳಿಗೆ ನೃತ್ಯ ನಿರ್ದೇಶಕನಾಗಿ ಕೆಲಸ ಮಾಡಿರುವ ನಾಗೇಂದ್ರ ಪ್ರಸಾದ್, ಪ್ರಸ್ತುತ ವಿಜಯ್ ಸೇತುಪತಿ ನಟನೆಯ 'ಲಾಭಂ' ಕಂಗನಾ ನಟನೆಯ 'ತಲೈವಿ' ಸಿನಿಮಾದಲ್ಲಿ ಕೆಲಸ ಮಾಡಿದ್ದಾರೆ.

'ಅನುಭವ ಗಳಿಸಿದ ಬಳಿಕವೇ ಸಿನಿಮಾ ನಿರ್ದೇಶನಕ್ಕೆ ಕೈ ಹಾಕಿದ್ದೇನೆ'
ಸಾಕಷ್ಟು ಸಿನಿಮಾಗಳಿಗೆ ನೃತ್ಯ ನಿರ್ದೇಶಕನಾಗಿ ಹಾಗೂ ಅಣ್ಣ ಪ್ರಭುದೇವಾ ನಿರ್ದೇಶಿಸುವ ಸಿನಿಮಾಗಳಿಗೆ ಸಹಾಯಕನಾಗಿ ಕೆಲಸ ಮಾಡಿದ್ದೇನೆ. ಸೂಕ್ತ ಅನುಭವ ಗಳಿಸಿದ ಬಳಿಕವೇ ನಿರ್ದೇಶನ ಆರಂಭಿಸಬೇಕು ಎಂದುಕೊಂಡಿದ್ದೆ ಈಗ ಅನುಭವ ದೊರೆತಿದ್ದು, ಮೊದಲ ಸಿನಿಮಾ ನಿರ್ದೇಶನ ಮಾಡಲು ತಯಾರಿ ಆರಂಭಿಸಿದ್ದೇನೆ ಎಂದಿದ್ದಾರೆ ನಾಗೇಂದ್ರಪ್ರಸಾದ್.

ಕನ್ನಡದಲ್ಲಿ ಕೆಲವು ಸಿನಿಮಾಗಳಲ್ಲಿ ನಟನೆ
ಕನ್ನಡಿಗ ಮೂಗೂರು ಸುಂದರಂ ಮಗನಾಗಿರುವ, ಡಾನ್ಸ್ ಮಾಸ್ಟರ್ಗಳಾದ ಪ್ರಭುದೇವಾ, ರಾಜಸುಂದರಂ ಅವರುಗಳ ಕಿರಿಯ ತಮ್ಮ ಪ್ರಸಾದ್ ಕನ್ನಡದಲ್ಲಿ ಚಿತ್ರ, 123, ಮನಸೆಲ್ಲಾ ನೀನೆ ಸಿನಿಮಾಗಳಲ್ಲಿ ನಟಿಸಿದ್ದಾರೆ. ತಮಿಳಿನಲ್ಲಿ ಸಹ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ ನಾಗೇಂದ್ರ ಪ್ರಸಾದ್.
This News Article is a Copy of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm