ಬ್ರೇಕಿಂಗ್ ನ್ಯೂಸ್
07-01-21 02:51 pm Headline Karnataka News Network ಸಿನಿಮಾ
ಮುಂಬೈ, ಜ.7 : ಲಾಕ್ಡೌನ್ ಸಮಯದಲ್ಲಿ ಸಂಕಷ್ಟದಲ್ಲಿದ್ದವರ ನೆರವಿಗೆ ನಿಂತು ಮನೆ ಮಾತಾಗಿರುವ ಬಾಲಿವುಡ್ ನಟ ಸೋನು ಸೂದ್ ವಿರುದ್ಧ ಪ್ರಕರಣ ದಾಖಲಾಗಿದೆ.
ಹೌದು. ಅನುಮತಿ ಪಡೆಯದೇ ಕಟ್ಟಡವನ್ನು ಹೋಟೆಲ್ ಆಗಿ ಮಾರ್ಪಡಿಸಿದ ಹಿನ್ನೆಲೆಯಲ್ಲಿ ಬಿಎಂಸಿ(ಬೃಹನ್ ಮುಂಬೈ ಮುನ್ಸಿಪಲ್ ಕಾಪೋರೇಶನ್) ಈ ಪ್ರಕರಣ ದಾಖಲಿಸಿದೆ. ಸೋನು ಸೂದ್ ಅವರಿಗೆ ಮುಂಬೈನ ಜುಹುವಿನಲ್ಲಿ 6 ಮಹಡಿಯ ಕಟ್ಟಡವಿದೆ. ಈ ಕಟ್ಟಡವನ್ನು ಇತ್ತೀಚೆಗಷ್ಟೇ ಹೋಟೆಲ್ ಆಗಿ ಮಾರ್ಪಡಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಬಿಎಂಸಿ ಇದೀಗ ನಟನ ವಿರುದ್ಧ ಜುಹು ಪೊಲೀಸ್ ಠಾಣೆಗೆ ಲಿಖಿತ ದೂರು ದಾಖಲಿಸಿದೆ.

ಅನುಮತಿ ಇಲ್ಲದೆಯೇ ಕಟ್ಟಡವನ್ನು ಹೋಟೆಲ್ ಆಗಿ ಮಾರ್ಪಡಿಸಲಾಗಿದೆ. 2020ರ ಅಕ್ಟೋಬರ್ 27ರಂದು ಸೋನು ಸೂದ್ ಅವರಿಗೆ ಮೊದಲ ಬಾರಿಗೆ ನೋಟಿಸ್ ನೀಡಲಾಗಿತ್ತು. ಆದರೆ ಅವರು ನವೆಂಬರ್ 27ರವರೆಗೂ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ನಟನಿಗೆ ಒಂದು ತಿಂಗಳ ಕಾಲ ಸಮಯ ನೀಡಿದ್ದರೂ ಉತ್ತರಿಸಲಿಲ್ಲ ಎಂದು ಬಿಎಂಸಿ ಅಧಿಕಾರಿಗಳು ದೂರಿನಲ್ಲಿ ವಿವರಿಸಿದ್ದಾರೆ.
2021ರ ಜನವರಿ 4 ರಂದು ನಟನ ಆಸ್ತಿ ಬಗ್ಗೆ ಮತ್ತೊಮ್ಮೆ ಪರಿಶೀಲನೆ ನಡೆಸಲಾಗಿದ್ದು, ಈ ವೇಳೆ ಅನಧಿಕೃತವಾಗು ಹೆಚ್ಚುವರಿ ಆಸ್ತಿ ಹೊಂದಿರುವುದು ಬೆಳಕಿಗೆ ಬಂದಿದೆ. ಆದರೂ ಇದೂವರೆಗೆ ಯಾವುದೇ ಸೂಚನೆಗಳಿಗೆ ನಟ ಪ್ರತಿಕ್ರಿಯಿಸಿಲ್ಲ ಎಂದು ಕೂಡ ಅಧಿಕಾರಿಗಳು ದೂರಿದ್ದಾರೆ.
ಸದ್ಯ ಅಧಿಕಾರಿಗಳ ದೂರು ಸ್ವೀಕರಿಸಿರುವ ಪೊಲೀಸರು ಇದೀಗ ನಟನ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಅಲ್ಲದೆ ಈ ಸಂಬಂಧ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ.
Actor Sonu Sood has been accused of illegally converting a residential building in Mumbai's upscale Juhu into a hotel by Mumbai's civic body BMC, which has also filed a police complaint.
26-02-26 10:01 pm
HK News Staffer
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
27-02-26 06:14 am
HK News Staffer
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
26-02-26 01:21 pm
HK News Staffer
Mangalore: ಕುರ್ನಾಡಿನ ವೃದ್ಧ ದಂಪತಿಗೆ ನೂತನ ಮನೆ ಹ...
26-02-26 10:37 am
ಮಂಗಳೂರು ವಿವಿಯ ಯಕ್ಷಮಂಗಳ ಪ್ರಶಸ್ತಿ ಪ್ರಕಟ ; ಕಪ್ಪೆ...
25-02-26 05:41 pm
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
26-02-26 11:04 pm
mangalore
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm
Vexon fraud Company, Mangalore: ಮಂಗಳೂರಿನಲ್ಲಿ...
26-02-26 03:48 pm
Mangalore Blackmail, Crime: ಖಾಸಗಿ ವೀಡಿಯೋ ಮುಂದ...
24-02-26 10:07 pm
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm