ಬ್ರೇಕಿಂಗ್ ನ್ಯೂಸ್
 
            
                        07-01-21 02:51 pm Headline Karnataka News Network ಸಿನಿಮಾ
 
            ಮುಂಬೈ, ಜ.7 : ಲಾಕ್ಡೌನ್ ಸಮಯದಲ್ಲಿ ಸಂಕಷ್ಟದಲ್ಲಿದ್ದವರ ನೆರವಿಗೆ ನಿಂತು ಮನೆ ಮಾತಾಗಿರುವ ಬಾಲಿವುಡ್ ನಟ ಸೋನು ಸೂದ್ ವಿರುದ್ಧ ಪ್ರಕರಣ ದಾಖಲಾಗಿದೆ.
ಹೌದು. ಅನುಮತಿ ಪಡೆಯದೇ ಕಟ್ಟಡವನ್ನು ಹೋಟೆಲ್ ಆಗಿ ಮಾರ್ಪಡಿಸಿದ ಹಿನ್ನೆಲೆಯಲ್ಲಿ ಬಿಎಂಸಿ(ಬೃಹನ್ ಮುಂಬೈ ಮುನ್ಸಿಪಲ್ ಕಾಪೋರೇಶನ್) ಈ ಪ್ರಕರಣ ದಾಖಲಿಸಿದೆ. ಸೋನು ಸೂದ್ ಅವರಿಗೆ ಮುಂಬೈನ ಜುಹುವಿನಲ್ಲಿ 6 ಮಹಡಿಯ ಕಟ್ಟಡವಿದೆ. ಈ ಕಟ್ಟಡವನ್ನು ಇತ್ತೀಚೆಗಷ್ಟೇ ಹೋಟೆಲ್ ಆಗಿ ಮಾರ್ಪಡಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಬಿಎಂಸಿ ಇದೀಗ ನಟನ ವಿರುದ್ಧ ಜುಹು ಪೊಲೀಸ್ ಠಾಣೆಗೆ ಲಿಖಿತ ದೂರು ದಾಖಲಿಸಿದೆ.

ಅನುಮತಿ ಇಲ್ಲದೆಯೇ ಕಟ್ಟಡವನ್ನು ಹೋಟೆಲ್ ಆಗಿ ಮಾರ್ಪಡಿಸಲಾಗಿದೆ. 2020ರ ಅಕ್ಟೋಬರ್ 27ರಂದು ಸೋನು ಸೂದ್ ಅವರಿಗೆ ಮೊದಲ ಬಾರಿಗೆ ನೋಟಿಸ್ ನೀಡಲಾಗಿತ್ತು. ಆದರೆ ಅವರು ನವೆಂಬರ್ 27ರವರೆಗೂ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ನಟನಿಗೆ ಒಂದು ತಿಂಗಳ ಕಾಲ ಸಮಯ ನೀಡಿದ್ದರೂ ಉತ್ತರಿಸಲಿಲ್ಲ ಎಂದು ಬಿಎಂಸಿ ಅಧಿಕಾರಿಗಳು ದೂರಿನಲ್ಲಿ ವಿವರಿಸಿದ್ದಾರೆ.
2021ರ ಜನವರಿ 4 ರಂದು ನಟನ ಆಸ್ತಿ ಬಗ್ಗೆ ಮತ್ತೊಮ್ಮೆ ಪರಿಶೀಲನೆ ನಡೆಸಲಾಗಿದ್ದು, ಈ ವೇಳೆ ಅನಧಿಕೃತವಾಗು ಹೆಚ್ಚುವರಿ ಆಸ್ತಿ ಹೊಂದಿರುವುದು ಬೆಳಕಿಗೆ ಬಂದಿದೆ. ಆದರೂ ಇದೂವರೆಗೆ ಯಾವುದೇ ಸೂಚನೆಗಳಿಗೆ ನಟ ಪ್ರತಿಕ್ರಿಯಿಸಿಲ್ಲ ಎಂದು ಕೂಡ ಅಧಿಕಾರಿಗಳು ದೂರಿದ್ದಾರೆ.
ಸದ್ಯ ಅಧಿಕಾರಿಗಳ ದೂರು ಸ್ವೀಕರಿಸಿರುವ ಪೊಲೀಸರು ಇದೀಗ ನಟನ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಅಲ್ಲದೆ ಈ ಸಂಬಂಧ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ.
 
            
            
            Actor Sonu Sood has been accused of illegally converting a residential building in Mumbai's upscale Juhu into a hotel by Mumbai's civic body BMC, which has also filed a police complaint.
 
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 09:00 pm
                        
            
                  
                Mangalore Correspondent    
            
                    
 
    78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    
            
             31-10-25 12:55 pm
                        
            
                  
                HK News Desk    
            
                    
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm