ಬ್ರೇಕಿಂಗ್ ನ್ಯೂಸ್
07-01-21 04:14 pm Source: FILMIBEAT Bharath Kumar K ಸಿನಿಮಾ
ಕೊರೊನಾದಿಂದ ಚಿತ್ರರಂಗಕ್ಕೆ ಬಹಳ ದೊಡ್ಡ ಸಮಸ್ಯೆ ಎದುರಾಗಿತ್ತು. ತಿಂಗಳುಗಳ ಕಾಲ ಚಿತ್ರಮಂದಿರ ಮುಚ್ಚಿದ್ದವು. ಶೇಕಡಾ 50 ರಷ್ಟು ಆಸನ ಭರ್ತಿಯೊಂದಿಗೆ ಸಿನಿಮಾ ಥಿಯೇಟರ್ ತೆರೆಯಲು ಅನುಮತಿ ಸಿಕ್ಕಿದ್ದರೂ ಚಿತ್ರಮಂದಿರಕ್ಕೆ ಜನ ಬರ್ತಿಲ್ಲ. ಇಂತಹ ಸಂದರ್ಭದಲ್ಲಿ ದೊಡ್ಡ ಚಿತ್ರಗಳು ರಿಲೀಸ್ ಮಾಡಿದ್ರೆ ಹಾಕಿದ ಬಂಡವಾಳ ಹೇಗೆ ವಾಪಸ್ ಪಡೆಯುವುದು ಎಂಬ ಗೊಂದಲದಲ್ಲಿ ನಿರ್ಮಾಪಕರಿದ್ದಾರೆ. ಈ ನಡುವೆ ಥಿಯೇಟರ್ಗಿಂತ ಒಟಿಟಿಯಲ್ಲಿ ಸಿನಿಮಾ ಬಿಡುಗಡೆ ಮಾಡುವುದು ಸೂಕ್ತವೇ ಎಂಬ ಅಭಿಪ್ರಾಯವೂ ಇದೆ. ತಮಿಳುನಾಡಿನಲ್ಲಿ ಶೇಕಡಾ 100ರಷ್ಟು ಆಸನ ಭರ್ತಿ ಮಾಡಿ ಪ್ರದರ್ಶನ ಆರಂಭಿಸಲು ಸರ್ಕಾರ ಸಮ್ಮತಿ ಸೂಚಿಸಿದೆ. ಬಹುಶಃ ಕರ್ನಾಟಕದಲ್ಲೂ ಈ ಆದೇಶ ಜಾರಿಯಾಗಬಹುದು ಎಂಬ ಲೆಕ್ಕಾಚಾರದಲ್ಲಿದ್ದ ನಿರ್ಮಾಪಕರಿಗೆ ಕೇಂದ್ರ ಸರ್ಕಾರ ನಿರಾಸೆ ಮಾಡಿದೆ. ಹಾಗಾದ್ರೆ, ಈ ಸಭೆಯಲ್ಲಿ ಯಾವೆಲ್ಲ ವಿಷಯಗಳು ಚರ್ಚೆಯಾದವು? ಯಾರೆಲ್ಲಾ ನಿರ್ಮಾಪಕರು ಸೇರಿದ್ದರು?
ಸಿನಿಮಾಗಳು ಕ್ಲಾಶ್ ಆಗಬಾರದು!
ದರ್ಶನ್, ಸುದೀಪ್, ಪುನೀತ್ ರಾಜ್ ಕುಮಾರ್, ದುನಿಯಾ ವಿಜಯ್, ಯಶ್, ಶಿವರಾಜ್ ಕುಮಾರ್, ಧ್ರುವ ಸರ್ಜಾ ಹೀಗೆ ಸ್ಟಾರ್ ನಟರ ಚಿತ್ರಗಳು ಬಿಡುಗಡೆಗೆ ಸಾಲುಗಟ್ಟಿ ನಿಂತಿವೆ. ಕೆಲವು ಚಿತ್ರಗಳು ರಿಲೀಸ್ಗೆ ದಿನಾಂಕವನ್ನು ಲಾಕ್ ಮಾಡಿಕೊಂಡಿದೆ. ಹಿಂದೆಂದೆಯೇ ಸಿನಿಮಾ ಬಿಡುಗಡೆ ಮಾಡಿದ್ರೆ ಥಿಯೇಟರ್ ಸಮಸ್ಯೆ, ಕಲೆಕ್ಷನ್ ಸಮಸ್ಯೆ ಎದುರಾಗಬಹುದು ಎಂಬ ಆತಂಕ ಇದೆ. ಹಾಗಾಗಿ, ಚಿತ್ರಗಳ ನಡುವೆ ಕ್ಲಾಶ್ ಆಗಬಾರದು ಎಂಬ ಚರ್ಚೆ ಈ ಸಭೆಯ ಪ್ರಮುಖ ಅಂಶಗಳಲ್ಲಿ ಒಂದಾಗಿದೆ.

ಒಟಿಟಿಗೆ ಹೋದ್ರೆ ಏನಾಗುತ್ತದೆ?
ಚಿತ್ರಮಂದಿರಕ್ಕೆ ಜನ ಬರ್ತಿಲ್ಲ ಎಂಬ ಕಾರಣಕ್ಕೆ ಒಟಿಟಿಗೆ ಹೋದ್ರೆ ಅಲ್ಲಿ ಹಾಕಿದ ಬಂಡವಾಳ ಪಾಪಸ್ ಬರುತ್ತಾ? ಇದರಿಂದ ಸ್ಟಾರ್ ನಟರ ಚಿತ್ರಗಳನ್ನೇ ನಂಬಿಕೊಂಡಿರುವ ಥಿಯೇಟರ್ ಮಾಲೀಕರ ಪರಿಸ್ಥಿತಿ ಏನು? ಕೊರೊನಾದಿಂದ ಸಂಕಷ್ಟದಲ್ಲಿರುವ ಎಲ್ಲರ ಹಿತಾದೃಷ್ಟಿ ಕಾಯುವುದು ಹೇಗೆ ಎಂಬ ಪ್ರಮುಖ ವಿಚಾರಗಳು ಚರ್ಚೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಥಿಯೇಟರ್ ಪೂರ್ಣ ಪ್ರಮಾಣದಲ್ಲಿ ಓಪನ್ ಆಗೋದು ಕಷ್ಟ!
ತಮಿಳು ನಟ ವಿಜಯ್ ಮನವಿ ನಂತರ ತಮಿಳು ಸರ್ಕಾರ ಥಿಯೇಟರ್ಗೆ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲು ಅನುಮತಿ ನೀಡಿದೆ. ಆದ್ರೆ, ತಮಿಳುನಾಡಿನ ಆದೇಶ ಹಿಂಪಡೆಯುವಂತೆ ಕೇಂದ್ರ ಗೃಹ ಇಲಾಖೆ ಆಕ್ಷೇಪ ವ್ಯಕ್ತಪಡಿಸಿದೆ. ವಿಪತ್ತು ನಿರ್ವಹಣಾ ಕಾಯ್ದೆಯ ಉಲ್ಲಂಘನೆಯಾಗುತ್ತಿದೆ, ಕೂಡಲೇ ಆದೇಶ ಹಿಂದಕ್ಕೆ ತೆಗೆದುಕೊಳ್ಳಬೇಕು ಎಂದು ಪತ್ರ ಬರೆದಿದೆ. ಈ ಬೆಳವಣಿಗೆ ಗಮನಿಸಿದರೆ ಸದ್ಯಕ್ಕೆ ಥಿಯೇಟರ್ಗಳ ಪರಿಸ್ಥಿತಿ ಸುಧಾರಿಸುವುದು ಬಹಳ ಕಷ್ಟ. ಇದು ಸಹ ನಿರ್ಮಾಪಕರಿಗೆ ತಲೆ ಬಿಸಿ ಉಂಟು ಮಾಡಿದೆ.

ಯಾರೆಲ್ಲ ಸಭೆಯಲ್ಲಿ ಹಾಜರಿದ್ದರು?
ನಿರ್ಮಾಪಕರ ಸಭೆಯಲ್ಲಿ ಕನ್ನಡದ ಪ್ರಮುಖ ಪ್ರೊಡ್ಯೂಸರ್ಗಳು ಭಾಗಿಯಾಗಿದ್ದರು. ಕೆಜಿಎಫ್, ಯುವರತ್ನ ನಿರ್ಮಾಪಕ ವಿಜಯ್ ಕಿರಗಂದೂರ್, ಕಾರ್ಯಕಾರಿ ನಿರ್ಮಾಪಕ ಕಾರ್ತಿಕ್ ಗೌಡ, ಸಲಗ ನಿರ್ಮಾಪಕ ಕೆಪಿ ಶ್ರೀಕಾಂತ್, ಕೋಟಿಗೊಬ್ಬ 3 ನಿರ್ಮಾಪಕ ಸೂರಪ್ಪ ಬಾಬು, ರಾಬರ್ಟ್ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ, ಫ್ಯಾಂಟಮ್ ನಿರ್ಮಾಪಕ ಜಾಕ್ ಮಂಜು, ನಿರ್ಮಾಪಕ ಜಯಣ್ಣ, ಪೊಗರು ನಿರ್ಮಾಪಕ ಪಾಲ್ಗೊಂಡಿದ್ದರು.
This News Article is a Copy of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm