ಬ್ರೇಕಿಂಗ್ ನ್ಯೂಸ್
10-01-21 02:01 pm Source: FILMIBEAT Manjunatha C ಸಿನಿಮಾ
ಅಪರೂಪಕ್ಕೆ ಇಂದು ನಟ ದರ್ಶನ್ ಫೇಸ್ಬುಕ್ ನಲ್ಲಿ ಲೈವ್ ಬಂದಿದ್ದರು. ಅವರು ಸಾಮಾಜಿಕ ಜಾಲತಾಣ ಬಳಸುವುದೇ ಕಡಿಮೆ ಅಂಥಹುದರಲ್ಲಿ ದರ್ಶನ್ ಫೇಸ್ಬುಕ್ ಲೈವ್ ಬರುತ್ತಿರುವುದು ಅಭಿಮಾನಿಗಳಿಗೆ ಆಶ್ಚರ್ಯವುಂಟು ಮಾಡಿತ್ತು.
ಅಂತೆಯೇ ದರ್ಶನ್ ಅವರ ಫೇಸ್ಬುಕ್ ಲೈವ್ ಅನ್ನು ಸಾವಿರಾರು ಮಂದಿ ಫೇಸ್ಬುಕ್ನಲ್ಲಿ ನೋಡಿದರು. ಅಪರೂಪಕ್ಕೆ ಲೈವ್ ಬಂದ ದರ್ಶನ್, ಮಹತ್ವವಾದ ಸಂದೇಶವನ್ನು ತಮ್ಮ ಅಭಿಮಾನಿಗಳಿಗೆ ನೀಡಿದರು.
ಫೆಬ್ರವರಿ 16 ರಂದು ದರ್ಶನ್ ಹುಟ್ಟುಹಬ್ಬವಿದ್ದು, ಆ ದಿನ ಯಾವ ಅಭಿಮಾನಿಗಳೂ ಸಹ ಮನೆಯ ಬಳಿ ಬರಬೇಡಿರೆಂದು ನಟ ದರ್ಶನ್ ಫೇಸ್ಬುಕ್ ಲೈವ್ ನಲ್ಲಿ ಮನವಿ ಮಾಡಿದರು. ಇದೇ ವಿಷಯವನ್ನು ತಿಳಿಸಲೆಂದೇ ತಾವು ಫೇಸ್ಬುಕ್ ಲೈವ್ ಬಂದಿರುವುದಾಗಿ ಹೇಳಿದರು ನಟ ದರ್ಶನ್.

ಕೊರೊನಾ ಕಾರಣದಿಂದಾಗಿ ಯಾರ ಪರಿಸ್ಥಿತಿಯೂ ಚೆನ್ನಾಗಿಲ್ಲ. ಯಾರ ಜೇಬಿನಲ್ಲೂ ಹಣವಿಲ್ಲ. ಅಭಿಮಾನಿಗಳು ನೀವು ಕರ್ನಾಟಕದ ಮೂಲೆ-ಮೂಲೆಗಳಿಂದ ಹಣ, ಸಮಯ ಖರ್ಚು ಮಾಡಿಕೊಂಡು ಹುಟ್ಟುಹಬ್ಬಕ್ಕೆ ಬರುತ್ತೀರ. ಆದರೆ ಈ ವರ್ಷ ಅದು ಬೇಡ ಎಂದರು ದರ್ಶನ್.

ಎಲ್ಲರೂ ಸಂಕಷ್ಟದಲ್ಲಿದ್ದಾರೆ. ನಿಮ್ಮ ಕುಟುಂಬವನ್ನು ಮೊದಲು ನೋಡಿಕೊಳ್ಳಿ, ಅದರ ಮುಂದೆ ಬೇರೆ ಇನ್ನಾವ ಜವಾಬ್ದಾರಿಗಳೂ ಇಲ್ಲ. ನೀವು ಸೆಟ್ಲ್ ಆಗಿ. ಈ ಬಾರಿ ನನ್ನ ಹುಟ್ಟುಹಬ್ಬಕ್ಕೆ ಯಾರೂ ಏನೂ ಆಚರಣೆ ಮಾಡುವುದು ಬೇಡ ಎಲ್ಲಿದ್ದೀರೊ ಅಲ್ಲಿಂದಲೇ ಹಾರೈಸಿ ಸಾಕು ಎಂದು ಮನವಿ ಮಾಡಿದರು ನಟ ದರ್ಶನ್.

ನಾನು ಸಹ ಫೆಬ್ರವರಿ 15 ರಿಂದ 18 ರ ವರೆಗೆ ಊರಿನಲ್ಲಿ ಇರುವುದಿಲ್ಲ. ಅಷ್ಟೇ ಅಲ್ಲದೆ ಮನೆಯ ಬಳಿ ಹುಟ್ಟುಹಬ್ಬ ಆಚರಿಸಲು ಪೊಲೀಸರು ಅನುಮತಿ ಕೊಡುವುದಿಲ್ಲ. ಸಿಸಿಟಿವಿ ಗಳನ್ನು ಹಾಕಿಸಬೇಕಾಗುತ್ತದೆ, ಬ್ಯಾರಿಕೇಡ್ಗಳನ್ನು ಹಾಕಿಸಬೇಕಾಗುತ್ತದೆ. ಈ ಬಾರಿ ಅದೆಲ್ಲ ಯಾವುದು ಬೇಡ, ಮುಂದಿನ ವರ್ಷ ಅದ್ಧೂರಿಯಾಗಿ ಆಚರಿಸೋಣ ಎಂದರು ದರ್ಶನ್
ಪ್ರತಿ ಊರಿಗೆ ನಾನೇ ಹೋಗಿ ಅಭಿಮಾನಿ ಸಂಘಗಳನ್ನು ಭೇಟಿ ಮಾಡುವ ಯೋಚನೆ ಇದೆ. ಆದರೆ ಅದೆಲ್ಲವೂ ಮಾರ್ಚ್ ನಂತರವೇ. ಈ ನಡುವೆ ಭಾನುವಾರಗಳಂದು ನಾನೇ ಕೆಲವು ಸಂಘಗಳಿಗೆ ತಿಳಿಸುತ್ತೇನೆ ಅವರು ಬಂದು ಭೇಟಿ ಮಾಡಬಹುದು ಎಂದು ಮಾಹಿತಿ ನೀಡಿದರು ದರ್ಶನ್.
This News Article is a Copy of FILMIBEAT
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
10-01-26 03:22 pm
HK News Desk
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
11-01-26 12:56 pm
Mangaluru Staffer
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
ಕರಾವಳಿ ಟೂರಿಸಂ ಅಭಿವೃದ್ಧಿಗೆ ಜನಪ್ರನಿಧಿಗಳು, ಉದ್ಯಮ...
10-01-26 06:23 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm