ಬ್ರೇಕಿಂಗ್ ನ್ಯೂಸ್
 
            
                        10-01-21 02:08 pm Source: FILMIBEAT Manjunatha C ಸಿನಿಮಾ
 
            ಖ್ಯಾತ ಗಾಯಕಿ ಸುನಿತಾ ಮದುವೆಯಾಗಿದ್ದಾರೆ. ಮಕ್ಕಳೇ ಮುಂದೆ ನಿಂತು ಅಮ್ಮನ ಮದುವೆಯನ್ನು ನೆರವೇರಿಸಿದ್ದಾರೆ.
43 ವರ್ಷದ ತೆಲುಗಿನ ಖ್ಯಾತ ಗಾಯಕಿ ಸುನಿತಾ ಜನವರಿ 09 ರಂದು ರಾಮ್ ವೀರಪನೇನಿ ಎಂಬುವರನ್ನು ವಿವಾಹವಾಗಿದ್ದಾರೆ. ಗಾಯಕಿ ಸುನಿತಾ ಗೆ ಇದು ಎರಡನೇ ವಿವಾಹ. ಮಕ್ಕಳೇ ಮುಂದೆ ನಿಂತು ಈ ವಿವಾಹ ಕಾರ್ಯ ನೆರವೇರಿಸಿದ್ದಾರೆ.
ಗಾಯಕಿ ಸುನಿತಾ ಹಾಗೂ ರಾಮ್ ವೀರಪನೇನಿ ಅವರ ಮದುವೆಯ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿವೆ. ಅದ್ಧೂರಿಯಾಗಿಯೇ ನಡೆದ ಈ ಮದುವೆಗೆ ಹಲವು ಅತಿಥಿಗಳು ಭಾಗವಹಿಸಿ, ನವ ವಧು-ವರರಿಗೆ ಶುಭಾಶಯ ತಿಳಿಸಿದ್ದಾರೆ.
19 ವರ್ಷಕ್ಕೆ ಸುನೀತಾಗೆ ಮದುವೆಯಾಗಿತ್ತು 
ಸುನಿತಾ ಅವರಿಗೆ 19 ನೇ ವರ್ಷಕ್ಕೆ ಮದುವೆ ಮಾಡಲಾಗಿತ್ತು. ಮೊದಲ ಪತಿ, ಪತ್ರಕರ್ತ ಕಿರಣ್ ಗೋಪುರಾಜು ಇಂದು ವಿಚ್ಛೇಧನ ಪಡೆದು ಹಲವು ವರ್ಷಗಳಾಗಿದ್ದವು ಸುನಿತಾ. ಇದೀಗ ಕೆಲವು ತಿಂಗಳ ಹಿಂದೆ ಮಕ್ಕಳ ಸಮ್ಮುಖದಲ್ಲಿಯೇ ಸುನೀತಾ ಹಾಗೂ ರಾಮ್ ನಿಶ್ಚಿತಾರ್ಥ ಮಾಡಿಕೊಂಡು ಈಗ ಮದುವೆ ಆಗಿದ್ದಾರೆ.

ಡಿಜಿಟಲ್ ಮಿಡಿಯಾ ಸಂಸ್ಥೆಯೊಂದರ ಸಿಇಒ
ರಾಮ್ ವೀರಪನೇನಿ ಡಿಜಿಟಲ್ ಮೀಡಿಯಾ ಸಂಸ್ಥೆಯ ಸಿಇಒ ಆಗಿದ್ದು, 'ನನ್ನ ಬಾಳಿಗೆ ಸ್ನೇಹಿತನಾಗಿ ಬಂದು ಈಗ ನನ್ನ ಜೀವನದ ಭಾಗವೇ ಆಗುತ್ತಿದ್ದಾರೆ ರಾಮ್' ಎಂದು ಹೇಳಿದ್ದಾರೆ ಸುನೀತಾ. ಸುನೀತಾ ಅವರ ಮರು ಮದುವೆ ನಿರ್ಧಾರಕ್ಕೆ ಹಲವಾರು ಮಂದಿ ಶುಭಾಶಯಗಳನ್ನು ತಿಳಿಸಿದ್ದಾರೆ.

ಸುನೀತಾ ಗೆ ಇಬ್ಬರು ಮಕ್ಕಳಿದ್ದಾರೆ 
ಸುನಿತಾಗೆ ಮತ್ತು ಮೊದಲ ಪತಿ ಕಿರಣ್ ದಾಂಪತ್ಯಕ್ಕೆ ಇಬ್ಬರು ಮಕ್ಕಳಿದ್ದಾರೆ. ಮಗ ಆಕಾಶ್ ಮತ್ತು ಮಗಳು ಶ್ರೇಯಾ ಎನ್ನುವ ಇಬ್ಬರು ಮಕ್ಕಳಿದ್ದಾರೆ. ಗಾಯಕಿ ಸುನಿತಾ ತೆಲುಗು ಮಾತ್ರವಲ್ಲದೇ ತಮಿಳು ಮತ್ತು ಕನ್ನಡದಲ್ಲೂ ಸಾಕಷ್ಟು ಹಾಡಿಗಳಿಗೆ ಧ್ವನಿ ನೀಡಿದ್ದಾರೆ.

ಮದುವೆ ಬಗ್ಗೆ ಟೀಕೆಗಳು ವ್ಯಕ್ತವಾಗಿದ್ದವು 
ಗಾಯಕಿ ಸುನಿತಾ ತಾವು ಮದುವೆ ಆಗುತ್ತಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಘೋಷಿಸಿದಾಗ ಸಾಕಷ್ಟು ಮಂದಿ ಟೀಕಿಸಿದ್ದರು. ಆದರೆ ಎಲ್ಲ ಟೀಕೆಯನ್ನು ನಿರ್ಲಕ್ಷಿಸಿ ಮದುವೆ ಆಗಿದ್ದಾರೆ ಸುನೀತಾ. 'ನನ್ನ ಮಕ್ಕಳು ಸೆಟಲ್ ಆಗಲಿ ಎಂದು ನಾನು ನಿರೀಕ್ಷಿಸುತ್ತೇನೆ. ಆದರೆ ನಾನೂ ಸಹ ಸೆಟಲ್ ಆಗಲಿ ಎಂದು ನನ್ನ ಮಕ್ಕಳು ಯೋಚಿಸಿದ್ದಾರೆ. ಅದ್ಭುತವಾದ ಮಕ್ಕಳನ್ನು ನಾನು ಪಡೆದಿದ್ದೇನೆ' ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು ಸುನೀತಾ.
This News Article is a Copy of FILMIBEAT
 
            
            
             
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 09:00 pm
                        
            
                  
                Mangalore Correspondent    
            
                    
 
    78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    
            
             31-10-25 12:55 pm
                        
            
                  
                HK News Desk    
            
                    
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm