ಬ್ರೇಕಿಂಗ್ ನ್ಯೂಸ್
10-01-21 02:13 pm Source: FILMIBEAT Manjunatha C ಸಿನಿಮಾ
ಕನ್ನಡ ಚಿತ್ರರಂಗದ ಅತ್ಯಂತ ಹಿರಿಯ ಸಂಗೀತ ನಿರ್ದೇಶಕ ಆರ್.ರತ್ನ ನಿನ್ನೆ (ಜನವರಿ 09) ರಂದು ಚೆನ್ನೈನಲ್ಲಿ ನಿಧನಹೊಂದಿದ್ದಾರೆ. ಆರ್.ರತ್ನ ಅವರಿಗೆ 97 ವರ್ಷ ವಯಸ್ಸಾಗಿತ್ತು. ಆರ್.ರತ್ನ ನಿಜವಾದ ಹೆಸರು ಜೀವನರತ್ನ.
ಮೊದಲಿಗೆ ನಟನಾಗಿ ವೃತ್ತಿ ಆರಂಭಿಸಿದ ರತ್ನ, ತಮಿಳಿನ 'ದಾನಶೂರ ಕರ್ಣ' ಸಿನಿಮಾದಲ್ಲಿ ಋಷಿ ಕೇತು ಪಾತ್ರದಲ್ಲಿ ನಟಿಸಿದ್ದರು. ನಂತರ 1961ರಲ್ಲಿ ಬಿಡುಗಡೆ ಆದ 'ಚಕ್ರವರ್ತಿ ತಿರುಮಗಲ' ಮೂಲಕ ಸ್ವತಂತ್ರ್ಯ ಸಂಗೀತ ನಿರ್ದೇಶಕರಾದ ಜೀವರತ್ನ. 1963 'ಮನೆ ಕಟ್ಟಿ ನೋಡು' ಸಿನಿಮಾ ಮೂಲಕ ಕನ್ನಡ ಸಿನಿಮಾ ರಂಗ ಪ್ರವೇಶಿಸಿದರು.
ಕನ್ನಡದಲ್ಲಿ ನಮ್ಮ ಊರು, ಬಾಂಧವ್ಯ, ಕಪ್ಪು-ಬಿಳುಪು, ಭಲೇ ಜೋಡಿ, ಪೂರ್ಣಿಮಾ ಮೊದಲಾದ ಸಿನಿಮಾಗಳಿಗೆ ಸಂಗೀತ ಸಂಯೋಜನೆ ಮಾಡಿದ್ದರು ಜೀವರತ್ನ ಅಲಿಯಾಸ್ ಆರ್.ರತ್ನ.
ವಯಸ್ಸಾದ ಅವರನ್ನು ಅವರ ಅಭಿಮಾನಿಯೇ ಬಹುವರ್ಷಗಳಿಂದ ಸಾಕುತ್ತಿದ್ದರು ಎಂಬುದು ವಿಶೇಷ. ಜೀವರತ್ನ ಅವರ ಅಭಿಮಾನಿಯಾದ ವೆಂಕಟರಾಮಯ್ಯ, ಜೀವರತ್ನರನ್ನು ಮಗುವಿನಂತೆ ನೋಡಿಕೊಂಡಿದ್ದರು. ಅಷ್ಟೇ ಅಲ್ಲದೆ, ಜೀವರತ್ನ ಹೆಸರಲ್ಲಿ ಸಂಗೀತ ಶಾಲೆಯೊಂದನ್ನು ಸಹ ಸ್ಥಾಪಿಸಿದ್ದರು.
ಇಳಿಯ ವಯಸ್ಸಿನಲ್ಲೂ ಹಾರ್ಮೊನಿಯಂ ನುಡಿಸುವುದು ಬಿಟ್ಟಿರಲಿಲ್ಲ ಎಂದು ಅವರ ಪರಿಚಯದವರು ಸಾಮಾಜಿಕ ಜಾಲತಾಣದಲ್ಲಿ ನೆನಪಿಸಿಕೊಂಡಿದ್ದು, ಹಾರ್ಮೊನಿಯಂ ನುಡಿಸುತ್ತಾ ತಮ್ಮದೇ ಸಂಯೋಜನೆಯ ಹಾಡುಗಳನ್ನು ಹಾಡುತ್ತಿರುತ್ತಿದ್ದರಂತೆ ಜೀವರತ್ನ.
97 ವಯಸ್ಸಿನ ಜೀವರತ್ನ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದು, ಚೆನ್ನೈನಲ್ಲಿ ಅವರು ವಿಧಿವಶರಾಗಿದ್ದಾರೆ.
This News Article is a Copy of FILMIBEAT
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 05:57 pm
HK News Staffer
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm