ಬ್ರೇಕಿಂಗ್ ನ್ಯೂಸ್
 
            
                        11-01-21 11:45 am Source: FILMIBEAT ಸಿನಿಮಾ
 
            ಸ್ಯಾಂಡಲ್ ವುಡ್ ನ ಸ್ಟಾರ್ ನಟಿ ರಚಿತಾ ರಾಮ್ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕನ್ನಡ ಮಾತ್ರ ವಲ್ಲದೇ ತೆಲುಗು ಚಿತ್ರರಂಗದಲ್ಲೂ ಮಿಂಚಲು ಸಜ್ಜಾಗಿದ್ದಾರೆ. ಈ ನಡುವೆ ರಚಿತಾ ಮತ್ತೊಂದು ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಲವ್ ಮಾಕ್ ಟೇಲ್ ಖ್ಯಾತಿಯ ನಟ ಡಾರ್ಲಿಂಗ್ ಕೃಷ್ಣಗೆ ಜೋಡಿಯಾಗಿ ರಚಿತಾ ನಟಿಸುತ್ತಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ. ಲವ್ ಮಾಕ್ ಟೇಲ್ ಬಳಿಕ ಕೃಷ್ಣಗೆ ಬೇಡಿಕೆ ಜಾಸ್ತಿ ಆಗಿದ್ದು, ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ನಾಯಕನಾಗಿ ನಟಿಸುವ ಜೊತೆಗೆ ಲವ್ ಮಾಕ್ ಟೇಲ್-2 ಸಿನಿಮಾದ ನಿರ್ದೇಶನದಲ್ಲೂ ಕೃಷ್ಣ ನಿರತರಾಗಿದ್ದಾರೆ.
ಈ ನಡುವೆ ರಚಿತಾ ರಾಮ್ ಜೊತೆ ಹೊಸ ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿ ಅಚ್ಚರಿ ಮೂಡಿಸಿದೆ. ಮೊದಲ ಬಾರಿಗೆ ರಚಿತಾ ಮತ್ತು ಡಾರ್ಲಿಂಗ್ ಕೃಷ್ಣ ಒಟ್ಟಿಗೆ ಸಿನಿಮಾ ಮಾಡುತ್ತಿದ್ದಾರೆ. ಅಂದಹಾಗೆ ಇಬ್ಬರನ್ನು ಒಟ್ಟಿಗೆ ಕರೆತರುತ್ತಿದ್ದಾರೆ. ನಿರ್ದೇಶಕ ದೀಪಕ್ ಗಂಗಾಧರ್. ದೀಪಕ್ ಗೆ ಇದು ಚೊಚ್ಚಲ ಸಿನಿಮಾ. ಪಕ್ಕ ಲವ್ ಸ್ಟೋರಿ ಸಿನಿಮಾ ಇದಾಗಿದ್ದು, ಇನ್ನು ಟೈಟಲ್ ಬಹಿರಂಗ ಪಡಿಸಿಲ್ಲ.

ರೊಮ್ಯಾಂಟಿಕ್ ಸಿನಿಮಾಗೆ ಸಂಗೀತ ನೀಡುತ್ತಿದ್ದಾರೆ ಶ್ರೀಧರ್ ವಿ ಸಂಭ್ರಮ್. ಉಳಿದಂತೆ ಪಾತ್ರವರ್ಗ ಮತ್ತು ತಂತ್ರಜ್ಞರ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ. ಈ ಸಿನಿಮಾ ಏಪ್ರಿಲ್ ಅಥವಾ ಮಾರ್ಚ್ ತಿಂಗಳಿಂದ ಚಿತ್ರೀಕರಣ ಪ್ರಾರಂಭ ಮಾಡಲು ಸಿನಿಮಾತಂಡ ಪ್ಲಾನ್ ಮಾಡಿದೆ. ಡಾರ್ಲಿಂಗ್ ಕೃಷ್ಣ ಸದ್ಯ ಶ್ರೀಕೃಷ್ಣ@ಜಿಮೇಲ್.ಕಾಮ್, MR.ಬ್ಯಾಚುಲರ್, ಶುಗರ್ ಫ್ಯಾಕ್ಟರಿ ಮತ್ತು ಲವ್ ಮಾಕ್ ಟೇಲ್-2ನಲ್ಲಿ ನಿರತರಾಗಿದ್ದಾರೆ. ಜನವರಿ 22ರಿಂದ ಶುಗರ್ ಫ್ಯಾಕ್ಟರಿ ಚಿತ್ರೀಕರಣ ಪ್ರಾರಂಭ ಮಾಡಲಿದ್ದಾರೆ. ಸಿನಿಮಾಗಳ ಜೊತೆಗೆ ಕೃಷ್ಣ ಮದುವೆ ತಯಾರಿಯಲ್ಲಿದ್ದಾರೆ. ಫೆಬ್ರವರಿ 14ರಂದು ಡಾರ್ಲಿಂಗ್ ಕೃಷ್ಣ ಬಹುಕಾಲದ ಗೆಳತಿ, ನಟಿ ಮಿಲನಾ ನಾಗರಾಜ್ ಜೊತೆ ಹಸೆಮಣೆ ಏರುತ್ತಿದ್ದಾರೆ.
ಇನ್ನು ನಟಿ ರಚಿತಾ ರಾಮ್ ಬಳಿಯೂ ಸಾಲು ಸಾಲು ಸಿನಿಮಾಗಳಿವೆ. ಸದ್ಯ ರಚಿತಾ, ಪ್ರಜ್ವಲ್ ದೇವರಾಜ್ ಜೊತೆ ವೀರಂ ಸಿನಿಮಾದಲ್ಲಿ ನಿರತರಾಗಿದ್ದಾರೆ. ಮೊದಲ ಬಾರಿಗೆ ಪ್ರಜ್ವಲ್ ಗೆ ಜೋಡಿಯಾಗಿ ರಚಿತಾ ನಟಿಸುತ್ತಿದ್ದಾರೆ. ಖಾದರು ಕುಮಾರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ.
This News Article is a Copy of FILMIBEAT
 
            
            
             
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 09:00 pm
                        
            
                  
                Mangalore Correspondent    
            
                    
 
    78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    
            
             31-10-25 12:55 pm
                        
            
                  
                HK News Desk    
            
                    
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm