ಬ್ರೇಕಿಂಗ್ ನ್ಯೂಸ್
11-01-21 11:57 am Source: FILMIBEAT Manjunatha C ಸಿನಿಮಾ
ಚೆನ್ನೈ, ಜ.11: ರಾಜಕೀಯ ಪ್ರವೇಶಿಸುತ್ತೇನೆ ಎಂದು ಘೋಷಿಸಿದ್ದ ನಟ ರಜನೀಕಾಂತ್ ಆ ನಂತರ ಅನಾರೋಗ್ಯ ಕಾರಣ ನೀಡಿ ತಮ್ಮ ನಿರ್ಧಾರದಿಂದ ಹಿಂದೆ ಸರಿದರು. ಆದರೆ ರಜನೀಕಾಂತ್ ರಾಜಕೀಯ ಪ್ರವೇಶ ಮಾಡಲೇಬೇಕು, ಪಕ್ಷವೊಂದನ್ನು ಕಟ್ಟಲೇ ಬೇಕು ಎಂದು ಒತ್ತಾಯಿಸಿ ಇಂದು (ಜನವರಿ 10) ರಜನೀಕಾಂತ್ ಅಭಿಮಾನಿಗಳು, ಬೆಂಬಲಿಗರು ಬೃಹತ್ ಒತ್ತಾಯ ಜಾಥಾವನ್ನು ಚೆನ್ನೈನಲ್ಲಿ ನಡೆಸಿದರು.
ಪೊಲೀಸರು 200 ಮಂದಿಗೆ ಮಾತ್ರವೇ ಸ್ಥಳದಲ್ಲಿ ಸೇರಲು ಅವಕಾಶಕೊಟ್ಟಿದ್ದರು, ಆದರೆ 2000 ಕ್ಕೂ ಹೆಚ್ಚು ಮಂದಿ ಅಭಿಮಾನಿಗಳು ಸ್ಥಳದಲ್ಲಿ ಹಾಜರಿದ್ದು, ರಜನೀಕಾಂತ್ ಪರವಾಗಿ ಘೋಷಣೆಗಳನ್ನು ಕೂಗಿದರು. 'ಈಗ ಅಲ್ಲದಿದ್ದರೆ ಇನ್ನೆಂದಲೂ ಇಲ್ಲ', 'ಬಾ ತಲೈವಾ ಬಾ' ಎಂಬಿತ್ಯಾದಿ ಘೋಷಣೆಗಳನ್ನು ಕೂಗಿದ ರಜನೀಕಾಂತ್ ಅಭಿಮಾನಿಗಳು ರಜನೀಕಾಂತ್ ಪೋಸ್ಟರ್ಗಳನ್ನು ಪ್ರದರ್ಶಿಸಿ, ರಜನೀಕಾಂತ್ ಮತ್ತೆ ರಾಜಕೀಯ ಪ್ರವೇಶಿಸಬೇಕು ಎಂದು ಒತ್ತಾಯಿಸಿದರು.
'ರಜನೀ ಮಕ್ಕಳ್ ಮಂಡ್ರಮ್' ನೀಡಿದ್ದ ಎಚ್ಚರಿಕೆಯ ಹೊರತಾಗಿಯೂ ಸಾಕಷ್ಟು ಮಂದಿ ಜಾಥಾದಲ್ಲಿ ಭಾಗವಹಿಸಿದ್ದರು. 'ಈ ರೀತಿಯ ಒತ್ತಾಯಗಳನ್ನು, ಪ್ರತಿಭಟನೆಗಳನ್ನು ಮಾಡುವುದರಿಂದ ರಜನೀಕಾಂತ್ ಮನಸ್ಸಿಗೆ ಬೇಸರವಾಗುತ್ತದೆ. ಜನರು ಯಾರೂ ಈ ಪ್ರತಿಭಟನೆಯಲ್ಲಿ ಭಾಗವಹಿಸಬೇಡಿ' ಎಂದು ರಜನಿಕಾಂತ್ ಮಕ್ಕಳ್ ಮಂಡ್ರನ್ ಎಚ್ಚರಿಕೆ ನೀಡಿತ್ತು.

ಬೆಳಿಗ್ಗೆ 10 ಗಂಟೆಗೆ ಪ್ರಾರಂಭವಾದ ಒತ್ತಾಯ ಜಾಥಾದಲ್ಲಿ ರಜನೀಕಾಂತ್ ಹಾಡುಗಳು, ಡೈಲಾಗ್ಗಳನ್ನು ಪ್ರಸಾರ ಮಾಡಲಾಯಿತು. ನಟ ರಜನೀಕಾಂತ್ ಅವರು ರಾಜಕೀಯ ಪ್ರವೇಶ ಮಾಡುವುದಾಗಿ ಡಿಸೆಂಬರ್ ತಿಂಗಳ ಆರಂಭದಲ್ಲಿ ಹೇಳಿದ್ದರು.
ಡಿಸೆಂಬರ್ 31 ರಂದು ಪಕ್ಷದ ಹೆಸರು, ಲಾಂಛನ ಬಿಡುಗಡೆ ಮಾಡಿ, ಜನವರಿ ತಿಂಗಳಲ್ಲಿ ದೊಡ್ಡದಾಗಿ ಪಕ್ಷದ ಉದ್ಘಾಟನಾ ಸಮಾರಂಭ ಮಾಡಲಾಗುವುದು ಎಂದಿದ್ದರು. ಆದರೆ ಡಿಸೆಂಬರ್ 25 ರಂದು ಬೆಳಿಗ್ಗೆ ರಜನೀಕಾಂತ್ ಅವರ ಆರೋಗ್ಯದಲ್ಲಿ ಏರು-ಪೇರಾದ ಕಾರಣ ಅವರನ್ನು ಹೈದರಾಬಾದ್ನ ಅಪೊಲೋ ಆಸ್ಪತ್ರೆಗೆ ದಾಖಲಿಸಲಾಯಿತು. ಆ ನಂತರ ಡಿಸೆಂಬರ್ 29 ರಂದು ತಮ್ಮ ರಾಜಕೀಯ ಪ್ರವೇಶದ ನಿರ್ಧಾರವನ್ನು ರಜನೀಕಾಂತ್ ಹಿಂಪಡೆದರು.
This News Article is a Copy of FILMIBEAT
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 05:57 pm
HK News Staffer
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm