ಬ್ರೇಕಿಂಗ್ ನ್ಯೂಸ್
11-01-21 11:57 am Source: FILMIBEAT Manjunatha C ಸಿನಿಮಾ
ಚೆನ್ನೈ, ಜ.11: ರಾಜಕೀಯ ಪ್ರವೇಶಿಸುತ್ತೇನೆ ಎಂದು ಘೋಷಿಸಿದ್ದ ನಟ ರಜನೀಕಾಂತ್ ಆ ನಂತರ ಅನಾರೋಗ್ಯ ಕಾರಣ ನೀಡಿ ತಮ್ಮ ನಿರ್ಧಾರದಿಂದ ಹಿಂದೆ ಸರಿದರು. ಆದರೆ ರಜನೀಕಾಂತ್ ರಾಜಕೀಯ ಪ್ರವೇಶ ಮಾಡಲೇಬೇಕು, ಪಕ್ಷವೊಂದನ್ನು ಕಟ್ಟಲೇ ಬೇಕು ಎಂದು ಒತ್ತಾಯಿಸಿ ಇಂದು (ಜನವರಿ 10) ರಜನೀಕಾಂತ್ ಅಭಿಮಾನಿಗಳು, ಬೆಂಬಲಿಗರು ಬೃಹತ್ ಒತ್ತಾಯ ಜಾಥಾವನ್ನು ಚೆನ್ನೈನಲ್ಲಿ ನಡೆಸಿದರು.
ಪೊಲೀಸರು 200 ಮಂದಿಗೆ ಮಾತ್ರವೇ ಸ್ಥಳದಲ್ಲಿ ಸೇರಲು ಅವಕಾಶಕೊಟ್ಟಿದ್ದರು, ಆದರೆ 2000 ಕ್ಕೂ ಹೆಚ್ಚು ಮಂದಿ ಅಭಿಮಾನಿಗಳು ಸ್ಥಳದಲ್ಲಿ ಹಾಜರಿದ್ದು, ರಜನೀಕಾಂತ್ ಪರವಾಗಿ ಘೋಷಣೆಗಳನ್ನು ಕೂಗಿದರು. 'ಈಗ ಅಲ್ಲದಿದ್ದರೆ ಇನ್ನೆಂದಲೂ ಇಲ್ಲ', 'ಬಾ ತಲೈವಾ ಬಾ' ಎಂಬಿತ್ಯಾದಿ ಘೋಷಣೆಗಳನ್ನು ಕೂಗಿದ ರಜನೀಕಾಂತ್ ಅಭಿಮಾನಿಗಳು ರಜನೀಕಾಂತ್ ಪೋಸ್ಟರ್ಗಳನ್ನು ಪ್ರದರ್ಶಿಸಿ, ರಜನೀಕಾಂತ್ ಮತ್ತೆ ರಾಜಕೀಯ ಪ್ರವೇಶಿಸಬೇಕು ಎಂದು ಒತ್ತಾಯಿಸಿದರು.
'ರಜನೀ ಮಕ್ಕಳ್ ಮಂಡ್ರಮ್' ನೀಡಿದ್ದ ಎಚ್ಚರಿಕೆಯ ಹೊರತಾಗಿಯೂ ಸಾಕಷ್ಟು ಮಂದಿ ಜಾಥಾದಲ್ಲಿ ಭಾಗವಹಿಸಿದ್ದರು. 'ಈ ರೀತಿಯ ಒತ್ತಾಯಗಳನ್ನು, ಪ್ರತಿಭಟನೆಗಳನ್ನು ಮಾಡುವುದರಿಂದ ರಜನೀಕಾಂತ್ ಮನಸ್ಸಿಗೆ ಬೇಸರವಾಗುತ್ತದೆ. ಜನರು ಯಾರೂ ಈ ಪ್ರತಿಭಟನೆಯಲ್ಲಿ ಭಾಗವಹಿಸಬೇಡಿ' ಎಂದು ರಜನಿಕಾಂತ್ ಮಕ್ಕಳ್ ಮಂಡ್ರನ್ ಎಚ್ಚರಿಕೆ ನೀಡಿತ್ತು.

ಬೆಳಿಗ್ಗೆ 10 ಗಂಟೆಗೆ ಪ್ರಾರಂಭವಾದ ಒತ್ತಾಯ ಜಾಥಾದಲ್ಲಿ ರಜನೀಕಾಂತ್ ಹಾಡುಗಳು, ಡೈಲಾಗ್ಗಳನ್ನು ಪ್ರಸಾರ ಮಾಡಲಾಯಿತು. ನಟ ರಜನೀಕಾಂತ್ ಅವರು ರಾಜಕೀಯ ಪ್ರವೇಶ ಮಾಡುವುದಾಗಿ ಡಿಸೆಂಬರ್ ತಿಂಗಳ ಆರಂಭದಲ್ಲಿ ಹೇಳಿದ್ದರು.
ಡಿಸೆಂಬರ್ 31 ರಂದು ಪಕ್ಷದ ಹೆಸರು, ಲಾಂಛನ ಬಿಡುಗಡೆ ಮಾಡಿ, ಜನವರಿ ತಿಂಗಳಲ್ಲಿ ದೊಡ್ಡದಾಗಿ ಪಕ್ಷದ ಉದ್ಘಾಟನಾ ಸಮಾರಂಭ ಮಾಡಲಾಗುವುದು ಎಂದಿದ್ದರು. ಆದರೆ ಡಿಸೆಂಬರ್ 25 ರಂದು ಬೆಳಿಗ್ಗೆ ರಜನೀಕಾಂತ್ ಅವರ ಆರೋಗ್ಯದಲ್ಲಿ ಏರು-ಪೇರಾದ ಕಾರಣ ಅವರನ್ನು ಹೈದರಾಬಾದ್ನ ಅಪೊಲೋ ಆಸ್ಪತ್ರೆಗೆ ದಾಖಲಿಸಲಾಯಿತು. ಆ ನಂತರ ಡಿಸೆಂಬರ್ 29 ರಂದು ತಮ್ಮ ರಾಜಕೀಯ ಪ್ರವೇಶದ ನಿರ್ಧಾರವನ್ನು ರಜನೀಕಾಂತ್ ಹಿಂಪಡೆದರು.
This News Article is a Copy of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm