ಬ್ರೇಕಿಂಗ್ ನ್ಯೂಸ್
31-07-20 11:42 am Cinema Correspondant ಸಿನಿಮಾ
ಸುಕುಮಾರ್ ನಿರ್ದೇಶನದಲ್ಲಿ ಅಲ್ಲು ಅರ್ಜುನ್ ನಟಿಸುತ್ತಿರುವ 'ಪುಷ್ಪ' ಚಿತ್ರ ಈಗಾಗಲೇ ಸಾಕಷ್ಟು ಸದ್ದು ಮಾಡಿದೆ. ಚಿತ್ರದಲ್ಲಿ ನಟಿರುವ ಕಲಾವಿದರ ಕುರಿತಾಗಿಯೇ ಎರಡು ಮೂರು ತಿಂಗಳಿನಿಂದ ಚರ್ಚೆ ನಡೆಯುತ್ತಿದೆ. ಈ ನಡುವೆ ಅಲ್ಲು ಅರ್ಜುನ್ ಮತ್ತೊಂದು ಸಿನಿಮಾದ ಘೋಷಣೆ ಮಾಡಿದ್ದಾರೆ. ನಿರ್ದೇಶಕ ಕೊರಟಾಲ ಶಿವ ಜತೆ ಸಿನಿಮಾ ಮಾಡುತ್ತಿರುವುದಾಗಿ ಅಲ್ಲು ಅರ್ಜುನ್ ಪ್ರಕಟಿಸಿದ್ದಾರೆ. ಈ ಚಿತ್ರಕ್ಕೆ ಇನ್ನೂ ಅಧಿಕೃತ ಹೆಸರು ಇರಿಸಿಲ್ಲ. ತಾತ್ಕಾಲಿಕವಾಗಿ 'ಎಎ21' ಎಂದು ಶೀರ್ಷಿಕೆ ಇರಿಸಲಾಗಿದೆ. ಈ ಚಿತ್ರದ ವಿಶೇಷ ಪೋಸ್ಟರ್ ಅನ್ನು ಶುಕ್ರವಾರ ಬಿಡುಗಡೆ ಮಾಡಲಾಗಿದೆ.
ಜುಲೈ 31ರಂದು ಅಲ್ಲು ಅರ್ಜುನ್ ಅಜ್ಜ ಅಲ್ಲು ರಾಮಲಿಂಗಯ್ಯ ಅವರ 16ನೇ ಪುಣ್ಯತಿಥಿ. ತಾತನನ್ನು ನೆನೆದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಅರ್ಜುನ್, ನಂತರ ತಮ್ಮ ಹೊಸ ಚಿತ್ರದ ಘೋಷಣೆ ಮಾಡಿದ್ದಾರೆ.
ಯುವಸುಧಾ ಆರ್ಟ್ಸ್ ಮತ್ತು ಜಿಎ2 ಪಿಕ್ಚರ್ಸ್ ಜಂಟಿಯಾಗಿ ನಿರ್ಮಿಸುತ್ತಿರುವ ಈ ಚಿತ್ರ 2022ರ ಆರಂಭದಲ್ಲಿ ಪ್ರಪಂಚದಾದ್ಯಂತ ಬಿಡುಗಡೆಯಾಗಲಿದೆ ಎಂದು ಮಾಹಿತಿ ನೀಡಲಾಗಿದೆ. ಅತಿ ದೊಡ್ಡ ಮನರಂಜನೆಯ ಚಿತ್ರ ಬಹುಭಾಷೆಗಳಲ್ಲಿ ತಯಾರಾಗಲಿದೆ ಎಂದು ಪ್ರಕಟಿಸಲಾಗಿದೆ.
ಹೀಗಾಗಿ ಇದು ಕನ್ನಡದಲ್ಲಿಯೂ ಡಬ್ ಆಗಿ ಬಿಡುಗಡೆಯಾಗಲಿದೆ ಎಂಬ ನಿರೀಕ್ಷೆ ಮೂಡಿಸಿದೆ. ಅಲ್ಲು ಅರ್ಜುನ್ ನಟನೆಯ 'ಪುಷ್ಪ' ಚಿತ್ರದ ಪೋಸ್ಟರ್ ಅನ್ನು ಕನ್ನಡದಲ್ಲಿಯೂ ಬಿಡುಗಡೆ ಮಾಡಲಾಗಿತ್ತು. ಕನ್ನಡದಲ್ಲಿ ಕೂಡ 'ಪುಷ್ಪ' ಬಿಡುಗಡೆ ಮಾಡಲಾಗುವುದು ಎಂದು ತಿಳಿಸಲಾಗಿತ್ತು. ಹಾಗೆಯೇ 'ಎಎ21' ಸಹ ಕನ್ನಡದಲ್ಲಿ ತೆರೆಕಾಣುವ ನಿರೀಕ್ಷೆಯಿದೆ.
ಎಎ21' ಚಿತ್ರದ ಪೋಸ್ಟರ್ ಗಮನ ಸೆಳೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನದಿಯೊಂದರ ತೀರದಲ್ಲಿ ನಿಂತಿರುವ ಯುವಕರಿಬ್ಬರು ಹಳ್ಳಿಯೊಂದರ ಕಡೆಗೆ ನೋಡುತ್ತಾ ನಿಂತಿರುವುದನ್ನು ಪೋಸ್ಟರ್ನಲ್ಲಿ ಚಿತ್ರಿಸಲಾಗಿದೆ. ಪಕ್ಕದಲ್ಲಿ ದೋಣಿಯೊಂದು ಇದೆ. ಈ ಪೋಸ್ಟರ್ ಚಿತ್ರದ ಕಥೆ ಏನಿರಬಹುದು ಎಂಬ ಸುಳಿವು ನೀಡದೆ ಇದ್ದರೂ ಕುತೂಹಲ ಮೂಡಿಸುವಂತಿದೆ.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
08-08-26 06:04 pm
HK News Staffer
ಧರ್ಮಸ್ಥಳಕ್ಕೆ ತೆರಳುತ್ತಿದ್ದ ಪ್ರವಾಸಿಗರ ಕಾರು ರಸ್ತ...
08-08-26 12:10 pm
Udupi David Dsouza Murder, Arrest: ಉಡುಪಿ ಡೇವಿ...
08-08-26 11:39 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಎನ್ ಟಿಎ ಸಂಸ್ಥೆಯ...
07-08-26 10:37 pm
ಮುಡಿಪು ಬಳಿ ಹಾಡಹಗಲೇ ಒಂಟಿ ವೃದ್ಧೆಯ ಮೇಲೆ ಹಲ್ಲೆ ನಡ...
07-08-26 09:23 pm