ಬ್ರೇಕಿಂಗ್ ನ್ಯೂಸ್
31-07-20 11:42 am Cinema Correspondant ಸಿನಿಮಾ
ಸುಕುಮಾರ್ ನಿರ್ದೇಶನದಲ್ಲಿ ಅಲ್ಲು ಅರ್ಜುನ್ ನಟಿಸುತ್ತಿರುವ 'ಪುಷ್ಪ' ಚಿತ್ರ ಈಗಾಗಲೇ ಸಾಕಷ್ಟು ಸದ್ದು ಮಾಡಿದೆ. ಚಿತ್ರದಲ್ಲಿ ನಟಿರುವ ಕಲಾವಿದರ ಕುರಿತಾಗಿಯೇ ಎರಡು ಮೂರು ತಿಂಗಳಿನಿಂದ ಚರ್ಚೆ ನಡೆಯುತ್ತಿದೆ. ಈ ನಡುವೆ ಅಲ್ಲು ಅರ್ಜುನ್ ಮತ್ತೊಂದು ಸಿನಿಮಾದ ಘೋಷಣೆ ಮಾಡಿದ್ದಾರೆ. ನಿರ್ದೇಶಕ ಕೊರಟಾಲ ಶಿವ ಜತೆ ಸಿನಿಮಾ ಮಾಡುತ್ತಿರುವುದಾಗಿ ಅಲ್ಲು ಅರ್ಜುನ್ ಪ್ರಕಟಿಸಿದ್ದಾರೆ. ಈ ಚಿತ್ರಕ್ಕೆ ಇನ್ನೂ ಅಧಿಕೃತ ಹೆಸರು ಇರಿಸಿಲ್ಲ. ತಾತ್ಕಾಲಿಕವಾಗಿ 'ಎಎ21' ಎಂದು ಶೀರ್ಷಿಕೆ ಇರಿಸಲಾಗಿದೆ. ಈ ಚಿತ್ರದ ವಿಶೇಷ ಪೋಸ್ಟರ್ ಅನ್ನು ಶುಕ್ರವಾರ ಬಿಡುಗಡೆ ಮಾಡಲಾಗಿದೆ.
ಜುಲೈ 31ರಂದು ಅಲ್ಲು ಅರ್ಜುನ್ ಅಜ್ಜ ಅಲ್ಲು ರಾಮಲಿಂಗಯ್ಯ ಅವರ 16ನೇ ಪುಣ್ಯತಿಥಿ. ತಾತನನ್ನು ನೆನೆದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಅರ್ಜುನ್, ನಂತರ ತಮ್ಮ ಹೊಸ ಚಿತ್ರದ ಘೋಷಣೆ ಮಾಡಿದ್ದಾರೆ.
ಯುವಸುಧಾ ಆರ್ಟ್ಸ್ ಮತ್ತು ಜಿಎ2 ಪಿಕ್ಚರ್ಸ್ ಜಂಟಿಯಾಗಿ ನಿರ್ಮಿಸುತ್ತಿರುವ ಈ ಚಿತ್ರ 2022ರ ಆರಂಭದಲ್ಲಿ ಪ್ರಪಂಚದಾದ್ಯಂತ ಬಿಡುಗಡೆಯಾಗಲಿದೆ ಎಂದು ಮಾಹಿತಿ ನೀಡಲಾಗಿದೆ. ಅತಿ ದೊಡ್ಡ ಮನರಂಜನೆಯ ಚಿತ್ರ ಬಹುಭಾಷೆಗಳಲ್ಲಿ ತಯಾರಾಗಲಿದೆ ಎಂದು ಪ್ರಕಟಿಸಲಾಗಿದೆ.
ಹೀಗಾಗಿ ಇದು ಕನ್ನಡದಲ್ಲಿಯೂ ಡಬ್ ಆಗಿ ಬಿಡುಗಡೆಯಾಗಲಿದೆ ಎಂಬ ನಿರೀಕ್ಷೆ ಮೂಡಿಸಿದೆ. ಅಲ್ಲು ಅರ್ಜುನ್ ನಟನೆಯ 'ಪುಷ್ಪ' ಚಿತ್ರದ ಪೋಸ್ಟರ್ ಅನ್ನು ಕನ್ನಡದಲ್ಲಿಯೂ ಬಿಡುಗಡೆ ಮಾಡಲಾಗಿತ್ತು. ಕನ್ನಡದಲ್ಲಿ ಕೂಡ 'ಪುಷ್ಪ' ಬಿಡುಗಡೆ ಮಾಡಲಾಗುವುದು ಎಂದು ತಿಳಿಸಲಾಗಿತ್ತು. ಹಾಗೆಯೇ 'ಎಎ21' ಸಹ ಕನ್ನಡದಲ್ಲಿ ತೆರೆಕಾಣುವ ನಿರೀಕ್ಷೆಯಿದೆ.
ಎಎ21' ಚಿತ್ರದ ಪೋಸ್ಟರ್ ಗಮನ ಸೆಳೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನದಿಯೊಂದರ ತೀರದಲ್ಲಿ ನಿಂತಿರುವ ಯುವಕರಿಬ್ಬರು ಹಳ್ಳಿಯೊಂದರ ಕಡೆಗೆ ನೋಡುತ್ತಾ ನಿಂತಿರುವುದನ್ನು ಪೋಸ್ಟರ್ನಲ್ಲಿ ಚಿತ್ರಿಸಲಾಗಿದೆ. ಪಕ್ಕದಲ್ಲಿ ದೋಣಿಯೊಂದು ಇದೆ. ಈ ಪೋಸ್ಟರ್ ಚಿತ್ರದ ಕಥೆ ಏನಿರಬಹುದು ಎಂಬ ಸುಳಿವು ನೀಡದೆ ಇದ್ದರೂ ಕುತೂಹಲ ಮೂಡಿಸುವಂತಿದೆ.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm