ಬ್ರೇಕಿಂಗ್ ನ್ಯೂಸ್
31-07-20 11:42 am Cinema Correspondant ಸಿನಿಮಾ
ಸುಕುಮಾರ್ ನಿರ್ದೇಶನದಲ್ಲಿ ಅಲ್ಲು ಅರ್ಜುನ್ ನಟಿಸುತ್ತಿರುವ 'ಪುಷ್ಪ' ಚಿತ್ರ ಈಗಾಗಲೇ ಸಾಕಷ್ಟು ಸದ್ದು ಮಾಡಿದೆ. ಚಿತ್ರದಲ್ಲಿ ನಟಿರುವ ಕಲಾವಿದರ ಕುರಿತಾಗಿಯೇ ಎರಡು ಮೂರು ತಿಂಗಳಿನಿಂದ ಚರ್ಚೆ ನಡೆಯುತ್ತಿದೆ. ಈ ನಡುವೆ ಅಲ್ಲು ಅರ್ಜುನ್ ಮತ್ತೊಂದು ಸಿನಿಮಾದ ಘೋಷಣೆ ಮಾಡಿದ್ದಾರೆ. ನಿರ್ದೇಶಕ ಕೊರಟಾಲ ಶಿವ ಜತೆ ಸಿನಿಮಾ ಮಾಡುತ್ತಿರುವುದಾಗಿ ಅಲ್ಲು ಅರ್ಜುನ್ ಪ್ರಕಟಿಸಿದ್ದಾರೆ. ಈ ಚಿತ್ರಕ್ಕೆ ಇನ್ನೂ ಅಧಿಕೃತ ಹೆಸರು ಇರಿಸಿಲ್ಲ. ತಾತ್ಕಾಲಿಕವಾಗಿ 'ಎಎ21' ಎಂದು ಶೀರ್ಷಿಕೆ ಇರಿಸಲಾಗಿದೆ. ಈ ಚಿತ್ರದ ವಿಶೇಷ ಪೋಸ್ಟರ್ ಅನ್ನು ಶುಕ್ರವಾರ ಬಿಡುಗಡೆ ಮಾಡಲಾಗಿದೆ.
ಜುಲೈ 31ರಂದು ಅಲ್ಲು ಅರ್ಜುನ್ ಅಜ್ಜ ಅಲ್ಲು ರಾಮಲಿಂಗಯ್ಯ ಅವರ 16ನೇ ಪುಣ್ಯತಿಥಿ. ತಾತನನ್ನು ನೆನೆದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಅರ್ಜುನ್, ನಂತರ ತಮ್ಮ ಹೊಸ ಚಿತ್ರದ ಘೋಷಣೆ ಮಾಡಿದ್ದಾರೆ.
ಯುವಸುಧಾ ಆರ್ಟ್ಸ್ ಮತ್ತು ಜಿಎ2 ಪಿಕ್ಚರ್ಸ್ ಜಂಟಿಯಾಗಿ ನಿರ್ಮಿಸುತ್ತಿರುವ ಈ ಚಿತ್ರ 2022ರ ಆರಂಭದಲ್ಲಿ ಪ್ರಪಂಚದಾದ್ಯಂತ ಬಿಡುಗಡೆಯಾಗಲಿದೆ ಎಂದು ಮಾಹಿತಿ ನೀಡಲಾಗಿದೆ. ಅತಿ ದೊಡ್ಡ ಮನರಂಜನೆಯ ಚಿತ್ರ ಬಹುಭಾಷೆಗಳಲ್ಲಿ ತಯಾರಾಗಲಿದೆ ಎಂದು ಪ್ರಕಟಿಸಲಾಗಿದೆ.
ಹೀಗಾಗಿ ಇದು ಕನ್ನಡದಲ್ಲಿಯೂ ಡಬ್ ಆಗಿ ಬಿಡುಗಡೆಯಾಗಲಿದೆ ಎಂಬ ನಿರೀಕ್ಷೆ ಮೂಡಿಸಿದೆ. ಅಲ್ಲು ಅರ್ಜುನ್ ನಟನೆಯ 'ಪುಷ್ಪ' ಚಿತ್ರದ ಪೋಸ್ಟರ್ ಅನ್ನು ಕನ್ನಡದಲ್ಲಿಯೂ ಬಿಡುಗಡೆ ಮಾಡಲಾಗಿತ್ತು. ಕನ್ನಡದಲ್ಲಿ ಕೂಡ 'ಪುಷ್ಪ' ಬಿಡುಗಡೆ ಮಾಡಲಾಗುವುದು ಎಂದು ತಿಳಿಸಲಾಗಿತ್ತು. ಹಾಗೆಯೇ 'ಎಎ21' ಸಹ ಕನ್ನಡದಲ್ಲಿ ತೆರೆಕಾಣುವ ನಿರೀಕ್ಷೆಯಿದೆ.
ಎಎ21' ಚಿತ್ರದ ಪೋಸ್ಟರ್ ಗಮನ ಸೆಳೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನದಿಯೊಂದರ ತೀರದಲ್ಲಿ ನಿಂತಿರುವ ಯುವಕರಿಬ್ಬರು ಹಳ್ಳಿಯೊಂದರ ಕಡೆಗೆ ನೋಡುತ್ತಾ ನಿಂತಿರುವುದನ್ನು ಪೋಸ್ಟರ್ನಲ್ಲಿ ಚಿತ್ರಿಸಲಾಗಿದೆ. ಪಕ್ಕದಲ್ಲಿ ದೋಣಿಯೊಂದು ಇದೆ. ಈ ಪೋಸ್ಟರ್ ಚಿತ್ರದ ಕಥೆ ಏನಿರಬಹುದು ಎಂಬ ಸುಳಿವು ನೀಡದೆ ಇದ್ದರೂ ಕುತೂಹಲ ಮೂಡಿಸುವಂತಿದೆ.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm