ಬ್ರೇಕಿಂಗ್ ನ್ಯೂಸ್
14-01-21 04:23 pm Source: FILMIBEAT Manjunatha C ಸಿನಿಮಾ
ಅರಣ್ಯ ಮತ್ತು ವನ್ಯಜೀವಿಗಳ ಬಗೆಗೆ ವಿಶೇಷ ಪ್ರೀತಿ ಇರಿಸಿಕೊಂಡಿದ್ದಾರೆ ನಟ ದರ್ಶನ್. ವನ್ಯಜೀವಿ ಛಾಯಾಗ್ರಹಣ ದರ್ಶನ್ ಅವರ ಮೆಚ್ಚಿನ ಹವ್ಯಾಸಗಳಲ್ಲಿ ಒಂದು. ಆಗಾಗ್ಗೆ ಕಾಡಿಗೆ ಹೋಗಿ ತದೇಕಚಿತ್ತದಿಂದ ಕೂತು ವನ್ಯಜೀವಿಗಳ ಛಾಯಾಗ್ರಹಣ ಮಾಡುತ್ತಾರೆ ನಟ ದರ್ಶನ್.
ಈಗ ಮತ್ತೆ ಕ್ಯಾಮೆರಾ ಬುಜಕ್ಕೆ ಏರಿಸಿ ನಾಗರಹೊಳೆ ಕಾಡಿಗೆ ಹೋಗಿದ್ದಾರೆ ದರ್ಶನ್. ನಾಗರಹೊಳೆ, ಕಬಿನಿ ಪ್ರದೇಶದಲ್ಲಿ ಸಫಾರಿ ಮಾಡಿ ವನ್ಯಜೀವಿಗಳ ಛಾಯಾಗ್ರಹಣ ಮಾಡಿದ್ದಾರೆ ನಟ ದರ್ಶನ್. ದರ್ಶನ್ ಅವರು ಕಬಿನಿಯಲ್ಲಿ ಸಫಾರಿ ಮಾಡಿದ ಚಿತ್ರಗಳು, ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
ಅಭಿಮಾನಿಗಳೊಂದಿಗೆ ಚಿತ್ರಗಳು
ಅಲ್ಲಿಯೂ ಅಭಿಮಾನಿಗಳು ದರ್ಶನ್ ಅವರನ್ನು ಮುತ್ತಿಕೊಂಡಿದ್ದಾರೆ. ಹಲವಾರು ಮಂದಿ ಅಭಿಮಾನಿಗಳು ತಮ್ಮ ಮೆಚ್ಚಿನ ನಟನೊಂದಿಗೆ ಚಿತ್ರಗಳನ್ನು ತೆಗೆಸಿಕೊಂಡಿದ್ದಾರೆ. ದರ್ಶನ್ ಸಹ ಎಂದಿನಿಂತೆ ತಾಳ್ಮೆಯಿಂದ ಅಭಿಮಾನಿಗಳೊಟ್ಟಿಗೆ ಚಿತ್ರಗಳಿಗೆ ಫೋಸ್ ನೀಡಿದ್ದಾರೆ.

ಹೊರ ರಾಜ್ಯದ ಕಾಡುಗಳಿಗೂ ಪ್ರವಾಸ
ದರ್ಶನ್ ಅವರು ಕರ್ನಾಟಕದ ಕಾಡುಗಳು ಮಾತ್ರವೇ ಅಲ್ಲದೆ ಹೊರ ರಾಜ್ಯಗಳ ಕಾಡುಗಳಿಗೂ ಆಗಾಗ್ಗೆ ಪ್ರವಾಸ ಹೋಗಿ ವನ್ಯಜೀವಿ ಫೊಟೊಗ್ರಫಿ ಮಾಡುತ್ತಿರುತ್ತಾರೆ. ಲಾಕ್ಡೌನ್ ಗೆ ಮುನ್ನಾ ಉತ್ತರಕಾಂಡಕ್ಕೆ ದರ್ಶನ್ ಭೇಟಿ ನೀಡಿದ್ದರು.

ಚಿತ್ರ ಮಾರಿದ ಹಣ ವನ್ಯಜೀವಿ ಸಂರಕ್ಷಣೆಗೆ ದೇಣಿಗೆ
ತಾವು ತೆಗೆದ ವನ್ಯಜೀವಿಗಳ ಚಿತ್ರಗಳನ್ನು ಮಾರಿ ಬಂದ ಹಣವನ್ನು ವನ್ಯಜೀವಿಗಳ ಕ್ಷೇಮಾಭಿವೃದ್ಧಿ, ಅರಣ್ಯಾಭಿವೃದ್ಧಿಗೆ ದೇಣಿಗೆ ನೀಡುತ್ತಾರೆ ದರ್ಶನ್. ಹಲವು ನಟ-ನಟಿಯರು, ದರ್ಶನ್ ಅವರ ಸ್ನೇಹಿತರು ದರ್ಶನ್ ತೆಗೆದ ಚಿತ್ರಗಳನ್ನು ಕೊಂಡುಕೊಂಡಿದ್ದಾರೆ. ಆ ಮೂಲಕ ವನ್ಯಜೀವಿ ಒಳಿತಿಗೆ ಸಹಕಾರಿಯಾಗಿದ್ದಾರೆ.

ಬೈಕ್ ರೈಡಿಂಗ್ ದರ್ಶನ್ ಹವ್ಯಾಸಗಳಲ್ಲಿ ಒಂದು
ಬೈಕ್ ರೈಡಿಂಗ್ ಸಹ ದರ್ಶನ್ ಅವರ ಮೆಚ್ಚಿನ ಹವ್ಯಾಸ. ಕೊರೊನಾ ಲಾಕ್ಡೌನ್ ಅಂತ್ಯವಾದ ಬಳಿಕ ಹಲವು ಬಾರಿ ದರ್ಶನ್ ತಮ್ಮ ದೊಡ್ಡ ಗೆಳೆಯರ ಗುಂಪಿನೊಂದಿಗೆ ಬೈಕ್ ರೈಡಿಂಗ್ ಹೋದರು. ಈ ವೇಳೆ ಹಲವು ಅಭಿಮಾನಿಗಳನ್ನು ದರ್ಶನ್ ಭೇಟಿ ಮಾಡಿದರು. ಕೆಲವು ಕಡೆಗೆ ಪ್ರವಾಸವನ್ನೂ ಮಾಡಿದರು ದರ್ಶನ್.
This News Article is a Copy of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm