ಬ್ರೇಕಿಂಗ್ ನ್ಯೂಸ್
14-01-21 04:28 pm Source: FILMIBEAT Bharath Kumar K ಸಿನಿಮಾ
ಭಾರತೀಯ ಚಿತ್ರರಂಗದಲ್ಲಿ 25 ವರ್ಷಗಳನ್ನು ಪೂರೈಸಿದ ವಿಶೇಷವಾಗಿ ಅವರ ಅಭಿಮಾನಿಗಳು ಕೈಗೊಂಡ ಮಹತ್ವದ ಕೆಲಸಕ್ಕಾಗಿ ಲೋಕಸಭೆ ಸದಸ್ಯೆ ಮೇನಕಾ ಗಾಂಧಿ ಅವರು ದೂರವಾಣಿ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಿಚ್ಚ ಸುದೀಪ್ ಅವರಿಗೆ ಕರೆ ಮಾಡಿ ಮೂಕಪ್ರಾಣಿ ವಿಚಾರದಲ್ಲಿ ತಾವು ಮತ್ತು ತಮ್ಮ ಅಭಿಮಾನಿಗಳು ಮಾಡಿದ ಕೆಲಸ ನಿಜಕ್ಕೂ ಸ್ವಾಗತಾರ್ಹ, ನಿಮ್ಮಿಂದ ಇಂತಹ ಕೆಲಸಗಳು ಮತ್ತಷ್ಟು ಆಗಲಿ ಎಂದು ಶ್ಲಾಘಿಸಿದ್ದಾರೆ.
ಅಂದ್ಹಾಗೆ, ಕಿಚ್ಚ ಸುದೀಪ್ ಅವರು ಸಿನಿಮಾ ಇಂಡಸ್ಟ್ರಿಯಲ್ಲಿ 25 ವರ್ಷ ಪೂರೈಸಿದ ಹಿನ್ನೆಲೆ, ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ಕಡೆಯಿಂದ 25 ಒಳ್ಳೆಯ ಕೆಲಸ ಮಾಡಲು ತೀರ್ಮಾನಿಸಿದ್ದಾರೆ. ಸತತವಾಗಿ 25 ದಿನಗಳ ಕಾಲ ಮಾನವೀಯತೆ ಸಂದೇಶ ಸಾರುವ ಸಲುವಾಗಿ 25 ಕೆಲಸಗಳನ್ನು ಮಾಡುವ ಕಾರ್ಯ ಪ್ರಾರಂಭಿಸಲಾಗಿದೆ.

ಅದರಲ್ಲೂ ಮೂಕಪ್ರಾಣಿಗಳಿಗೆ (ವಿಶೇಷವಾಗಿ ಬೀದಿಶ್ವಾನಗಳಿಗೆ) ಆಶ್ರಯ ವ್ಯವಸ್ಥೆ ಮಾಡಿರುವುದಕ್ಕೆ ಎಲ್ಲರಿಂದಲೂ ಮೆಚ್ಚುಗೆ ವ್ಯಕ್ತವಾಗಿದೆ. ಅಂದ್ರೆ ಶ್ವಾನಗಳಿಗಾಗಿ ಶೆಟ್ಟರ್ ತೆರೆಯಲಾಗಿದೆ. ಇದೇ ವಿಚಾರವಾಗಿ ಸುದೀಪ್ ಅವರಿಗೆ ದೂರವಾಣಿ ಕರೆ ಮಾಡಿದ್ದ ಮೇನಕಾ ಗಾಂಧಿ (Founder of people for Animals) ''ಭಾರತದಾದ್ಯಂತ ಇಂತಹ 100 ಶೆಟ್ಟರ್ಗಳ ಅವಶ್ಯಕತೆಯಿದ್ದು, ನೀವು (ಸುದೀಪ್) ಮೊದಲನೇಯ ಶೆಟ್ಟರ್ಗೆ ಕಾರಣರಾಗಿದ್ದಿರಾ. ಹಾಗೂ ಮೊದಲನೇ ಅಡಿಪಾಯದ ಕಲ್ಲು ನೆಟ್ಟಿದ್ದಿರಾ...ನಿಮ್ಮ ಸೇವೆ ಹೀಗೆ ಮುಂದುವರೆಯುತ್ತಾ ಇರಲಿ'' ಎಂದಿದ್ದಾರೆ.
25 ಮಹತ್ವದ ಕೆಲಸಗಳಲ್ಲಿ ಇದೊಂದೆ ಅಲ್ಲ, ದೆಹಯಲ್ಲಿ ಮುಷ್ಕರ ನಿರತರಾಗಿರುವ ಅನ್ನದಾತರಿಗೆ 500 ಬ್ಲ್ಯಾಂಕೆಟ್ ಗಳನ್ನು ಕಳುಹಿಸಿಕೊಡಲಾಗಿದೆ. ಬದುಕುವ ಭರವಸೆ ಕಳೆದುಕೊಂಡಿದ್ದ ಸುಶ್ಮಾಂತ್ ಎಂಬ ವ್ಯಕ್ತಿಯ ಕುಟುಂಬಕ್ಕೆ ನೆರವು ನೀಡಲಾಗಿದೆ. ವಿಶೇಷಚೇತನರಿಗಾಗಿ ಕ್ರಿಕೆಟ್ ಟೂರ್ನಿ ಆಯೋಜಿಸಲಾಗಿದೆ. ಇತ್ತೀಚಿಗಷ್ಟೆ ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ನಿರ್ದೇಶಕ ಎಟಿ ರಘು ಅವರಿಗೆ ಫೋನ್ ಮಾಡಿದ್ದ ನಟ ಸುದೀಪ್ ಧೈರ್ಯ ತುಂಬಿದ್ದರು. ''ನಿಮ್ಮ ಜೊತೆ ನಾವು ಇದ್ದೇವೆ, ನಮ್ಮಿಂದ ಸಾಧ್ಯವಾದಷ್ಟು ಸಹಾಯ ಮಾಡುತ್ತೇವೆ, ಧೈರ್ಯವಾಗಿರಿ'' ಎಂದು ಭರವಸೆ ನೀಡಿದ್ದರು.
This News Article is a Copy of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm