ಬ್ರೇಕಿಂಗ್ ನ್ಯೂಸ್
15-01-21 02:55 pm Source: FILMIBEAT Manjunatha C ಸಿನಿಮಾ
ಕನ್ನಡ ಸಿನಿಮಾ 'ರುದ್ರಿ'ಗೆ ವಿಂದ್ಯಾ ಅಂತರರಾಷ್ಟ್ರೀಯ ಸಿನಿಮೋತ್ಸವದಲ್ಲಿ ಎರಡು ಪ್ರಮುಖ ಪ್ರಶಸ್ತಿ ನೀಡಲಾಗಿದೆ. ಬೀರಬಲ್ಲ ಹುಟ್ಟಿದ ಮಧ್ಯಪ್ರದೇಶದ ಸಿಧಿಯಲ್ಲಿ ಜನವರಿ 8 ರಿಂದ ಜನವರಿ 10 ರ ವರೆಗೆ ವಿಂದ್ಯಾ ಅಂತರರಾಷ್ಟ್ರೀಯ ಸಿನಿಮೋತ್ಸವ ನಡೆಯಿತು.
ವಿಂದ್ಯಾ ಸಿನಿಮಾ ಉತ್ಸವದಲ್ಲಿ 'ರುದ್ರಿ'ನಲ್ಲಿ ನಟಿಸಿರುವ ಪಾವನಾ ಗೌಡ ಅವರಿಗೆ ಉತ್ತಮ ನಟಿ ಪ್ರಶಸ್ತಿ ದೊರೆತಿದೆ. ಜೊತೆಗೆ ಸಿನಿಮಾ ಉತ್ಸವದ ಎರಡನೇ ಅತ್ಯುತ್ತಮ ಫೀಚರ್ ಫಿಲಂ ಎಂಬ ಹೆಗ್ಗಳಿಕೆಗೆ ಸಹ 'ರುದ್ರಿ' ಭಾಜನವಾಗಿದೆ.

46 ದೇಶಗಳ ಸುಮಾರು 350 ಕ್ಕೂ ಹೆಚ್ಚು ಸಿನಿಮಾಗಳು ಸಿನಿಮಾ ಉತ್ಸವದಲ್ಲಿ ಭಾಗವಹಿಸಿದ್ದವು. ಅಂತಿಮ ಸುತ್ತಿನಲ್ಲಿ ರುದ್ರಿ ಜೊತೆಯಲ್ಲಿ ಇನ್ನೂ 14 ಸಿನಿಮಾಗಳು ಇದ್ದವು. ಕೊನೆಗೆ 'ರುದ್ರಿ' ಎರಡನೇ ಅತ್ಯುತ್ತಮ ಸಿನಿಮಾ ಎಂಬ ಪ್ರಶಸ್ತಿಗೆ ಭಾಜನವಾಯಿತು. ಪ್ರಶಸ್ತಿಯನ್ನು ನಿರ್ದೇಶಕ ಬಡಿಗೇರ್ ದೇವೇಂದ್ರ ಸ್ವೀಕರಿಸಿದರು. 'ರುದ್ರಿ' ಸಿನಿಮಾಕ್ಕೆ ಪ್ರಶಸ್ತಿ ಬಂದಿದ್ದಕ್ಕೆ ಚಿತ್ರತಂಡ ಅತೀವ ಸಂತಸ ವ್ಯಕ್ತಪಡಿಸಿದ್ದು, ಪ್ರಶಸ್ತಿಯು ಇಡೀಯ ಚಿತ್ರತಂಡದ ಶ್ರಮದ ಫಲ ಎಂದಿದೆ. ಅತ್ಯಾಚಾರಕ್ಕೆ ಒಳಗಾದ ಯುವತಿಯೊಬ್ಬಳು ತನ್ನ ಮೇಲೆ ಅತ್ಯಾಚಾರ ಎಸಗಿದವರ ವಿರುದ್ಧ ಸೇಡು ತೀರಿಸಿಕೊಳ್ಳುವ ಕತೆಯನ್ನು ಈ ಸಿನಿಮಾ ಹೊಂದಿದೆ. ಸಿನಿಮಾಕ್ಕೆ ಸಾಧುಕೋಕಿಲ ಸಂಗೀತ ನೀಡಿದ್ದು, ಸಿ.ಆರ್.ಮಂಜುನಾಥ ಸಿನಿಮಾ ನಿರ್ಮಿಸಿದ್ದಾರೆ.
This News Article is a Copy of FILMIBEAT
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm