ಬ್ರೇಕಿಂಗ್ ನ್ಯೂಸ್
16-01-21 05:09 pm Source: FILMIBEAT ಸಿನಿಮಾ
ತಮಿಳು ನಟ ವಿಜಯ್ ಸೇತುಪತಿ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಬರ್ತಡೇ ಖುಷಿಯಲ್ಲಿದ್ದ ಸೇತುಪತಿ ಅಭಿಮಾನಿಗಳು ತಂದಿದ್ದ ಕೇಕ್ನ್ನು ತಲ್ವಾರ್ನಿಂದ ಕತ್ತರಿಸಿದ್ದರು. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಅಭಿಮಾನಿಗಳಿಗೆ ಮಾದರಿಯಾಗಬೇಕಿದ್ದ ನಟ ತಲ್ವಾರ್ನಿಂದ ಕೇಕ್ ಕತ್ತರಿಸಿ ಜನರಿಗೆ ತಪ್ಪು ಸಂದೇಶ ರವಾನಿಸಿದ್ದಾರೆ ಎಂದು ಸೇತುಪತಿ ವಿರುದ್ಧ ಟೀಕೆಗಳು ವ್ಯಕ್ತವಾದವು. ಕೂಡಲೇ ಎಚ್ಚೆತ್ತುಕೊಂಡ ಮಾಸ್ಟರ್ ನಟ ಸೇತುಪತಿ ತಲ್ವಾರ್ನಲ್ಲಿ ಕೇಕ್ ಕತ್ತರಿಸಿದ್ದಕ್ಕೆ ಕ್ಷಮೆಯಾಚಿಸಿದ್ದಾರೆ, ಇದೊಂದು ರೀತಿ ತಪ್ಪು ಉದಾಹರಣೆಯಾಗಿದೆ, ಮುಂದಿನ ದಿನದಲ್ಲಿ ಇಂತಹ ಘಟನೆ ಮರುಕಳಿಸುವುದಿಲ್ಲ ಎಂದು ಅಧಿಕೃತ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.

ಸೇತುಪತಿ ಪ್ರಕಟಣೆಯಲ್ಲಿ ಏನಿದೆ?
''ನನ್ನ ಜನ್ಮದಿನದಂದು ಹಾರೈಸಿದ ಕಲಾಬಂಧುಗಳು ಮತ್ತು ಅಭಿಮಾನಿಗಳಿಗೆ ಹೃದಯಪೂರ್ವಕ ಧನ್ಯವಾದಗಳು. ಮೂರು ದಿನಗಳ ಹಿಂದೆ ನನ್ನ ಜನ್ಮದಿನ ಆಚರಣೆಯ ಸಂದರ್ಭದಲ್ಲಿ ತೆಗೆದ ಫೋಟೋ ಈಗ ವಿವಾದಕ್ಕೆ ಕಾರಣವಾಗಿದೆ. ಈ ಫೋಟೋದಲ್ಲಿ ನಾನು ತಲ್ವಾರ್ನಿಂದ ಕೇಕ್ ಕತ್ತರಿಸಿದ್ದೆ. ನಿರ್ದೇಶಕ ಪೊನ್ರಾಮ್ ಅವರ ಮುಂದಿನ ಚಿತ್ರದಲ್ಲಿ ನಾನು ನಟಿಸಲಿದ್ದೇನೆ, ಈ ಸಿನಿಮಾದಲ್ಲಿ ತಲ್ವಾರ್ ಪ್ರಮುಖ ಪಾತ್ರ ವಹಿಸುತ್ತದೆ. ಹಾಗಾಗಿ, ನನ್ನ ಬರ್ತಡೇ ಆಚರಣೆ ವೇಳೆ ಕತ್ತಿ ಬಳಸಿ ಕೇಕ್ ಕತ್ತರಿಸಲಾಯಿತು'' ಎಂದು ಸ್ಪಷ್ಟನೆ ನೀಡಿದ್ದಾರೆ.

ನಾನು ಕ್ಷಮೆಯಾಚಿಸುತ್ತೇನೆ
''ಕತ್ತಿಯಲ್ಲಿ ಕೇಕ್ ಕತ್ತರಿಸಿದ್ದು ಕೆಟ್ಟ ಉದಾಹರಣೆ ಎಂದು ಹಲವರು ತಿಳಿಸಿದರು. ಇನ್ಮುಂದೆ ನಾನು ಜಾಗರೂಕರಾಗಿರುತ್ತೇನೆ. ಈ ಘಟನೆಯಿಂದ ಯಾರಿಗಾದರೂ ನೋವುಂಟು ಮಾಡಿದ್ದರೆ ನಾನು ಕ್ಷಮೆಯಾಚಿಸುತ್ತೇನೆ ಮತ್ತು ನನ್ನ ಕ್ರಮಕ್ಕೆ ವಿಷಾದಿಸುತ್ತೇನೆ'' ಎಂದು ಸೇತುಪತಿ ಪ್ರಕಟಿಸಿದ್ದಾರೆ.
ತಲ್ವಾರ್ನಲ್ಲಿ ಕೇಕ್ ಕತ್ತರಿಸಿದ್ದಕ್ಕೆ ಬಂಧನ
ಈ ಹಿಂದೆ ಚೆನ್ನೈನಲ್ಲಿ ವ್ಯಕ್ತಿಯೊಬ್ಬ ಬರ್ತಡೇ ವೇಳೆ ತಲ್ವಾರ್ನಿಂದ ಕೇಕ್ ಕತ್ತರಿಸಿದ್ದ. ಫೋಟೋ ವೈರಲ್ ಆಗಿತ್ತು. ಬಳಿಕ ಪೊಲೀಸರು ಆ ವ್ಯಕ್ತಿ ವಿರುದ್ಧ ಕೇಸ್ ದಾಖಲಿಸಿ ಅರೆಸ್ಟ್ ಮಾಡಿದ್ದರು. ಈಗ, ಆ ಘಟನೆಯನ್ನು ನೆನಪಿಸುತ್ತಿರುವ ನೆಟ್ಟಿಗರು ವಿಜಯ್ ಸೇತುಪತಿ ಅವರನ್ನು ಬಂಧಿಸಿ ಎಂದು ಒತ್ತಾಯಿಸಿದ್ದಾರೆ.\

ಮಾಸ್ಟರ್ನಲ್ಲಿ ಮಿಂಚಿದ ವಿಜಯ್
ಲೋಕೇಶ್ ಕನಕರಾಜ್ ನಿರ್ದೇಶಿಸಿದ್ದ ಮಾಸ್ಟರ್ ಸಿನಿಮಾ ಸಂಕ್ರಾಂತಿ ಹಬ್ಬದ ವಿಶೇಷವಾಗಿ ಜನವರಿ 13 ರಂದು ಬಿಡುಗಡೆಯಾಗಿತ್ತು. ವಿಜಯ್ ನಾಯಕನಾಗಿರುವ ಈ ಚಿತ್ರದಲ್ಲಿ ಸೇತುಪತಿ ಖಳನಾಯಕನ ಪಾತ್ರ ಮಾಡಿದ್ದಾರೆ. ಸೇತುಪತಿಯ ಅಭಿನಯಕ್ಕೆ ಮೆಚ್ಚುಗೆ ವ್ಯಕ್ತವಾಗಿದ್ದು, ಸೇತುಪತಿ ಆಕ್ಟಿಂಗ್ ಸೂಪರ್ ಎನ್ನುತ್ತಿದ್ದಾರೆ ಸಿನಿಮಾ ನೋಡಿ ಬಂದ ಪ್ರೇಕ್ಷಕರು.
This News Article is a Copy of FILMIBEAT
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 07:53 pm
HK News Staffer
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm