ಬ್ರೇಕಿಂಗ್ ನ್ಯೂಸ್
16-01-21 05:21 pm Source: FILMIBEAT Bharath Kumar K ಸಿನಿಮಾ
ದಕ್ಷಿಣ ಭಾರತದ ಖ್ಯಾತ ನಿರ್ದೇಶಕ ಮಣಿರತ್ನಂ ನಿರ್ದೇಶನದಲ್ಲಿ ತಯಾರಾಗುತ್ತಿರುವ ಪೊನ್ನಿಯನ್ ಸೆಲ್ವನ್ ಚಿತ್ರಕ್ಕೆ ಮತ್ತೊಬ್ಬ ಸ್ಟಾರ್ ಕಲಾವಿದ ಎಂಟ್ರಿಯಾಗಿದ್ದಾರೆ. ಬಹುಭಾಷೆ ನಟ ಪ್ರಕಾಶ್ ರಾಜ್ ಈ ಚಿತ್ರದಲ್ಲಿ ಪ್ರಮುಖ ಪಾತ್ರವೊಂದಕ್ಕೆ ಆಯ್ಕೆಯಾಗಿದ್ದಾರೆ. ಈ ಬಗ್ಗೆ ನಟ ಪ್ರಕಾಶ್ ರಾಜ್ ಸಂತಸ ಹಂಚಿಕೊಂಡಿದ್ದು, ಸುಮಾರು 23 ವರ್ಷದ ಚಿತ್ರವನ್ನು ಸ್ಮರಿಸಿಕೊಂಡಿದ್ದಾರೆ. ''23 ವರ್ಷದ ಹಿಂದೆ ಇರುವನ್ ಚಿತ್ರದಲ್ಲಿ ಮಣಿರತ್ನಂ ಅವರ ಜೊತೆ ಕೆಲಸ ಆರಂಭಿಸಿದ್ದೆ, ಈಗ ಅದನ್ನು ಮುಂದುವರಿಯುತ್ತಿದೆ. ಏನೋ ಒಂದು ರೀತಿ ಸಂತೋಷ, ಹೊಸತನ ಕಂಡುಕೊಳ್ಳಬಹುದು ಎಂಬ ಆಶಯ'' ಎಂದು ಟ್ವೀಟ್ ಮಾಡಿದ್ದಾರೆ.
ಅಂದ್ಹಾಗೆ, 'ಪೊನ್ನಿಯನ್ ಸೆಲ್ವನ್' ಚಿತ್ರದಲ್ಲಿ ಪ್ರಕಾಶ್ ರಾಜ್ ಅವರದ್ದು ಯಾವ ಪಾತ್ರ ಎನ್ನುವುದರ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಆದರೆ, ಐಶ್ವರ್ಯ ರೈ ಅವರ ಜೊತೆ ಸ್ಕ್ರೀನ್ ಶೇರ್ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.
1997ರಲ್ಲಿ ತೆರೆಕಂಡಿದ್ದ 'ಇರುವನ್' ಚಿತ್ರದಲ್ಲಿ ಮೋಹನ್ ಲಾಲ್, ಪ್ರಕಾಶ್ ರಾಜ್, ಐಶ್ವರ್ಯ ರೈ, ರೇವತಿ, ಟಬು, ಗೌತಮಿ ಅಂತಹ ಪ್ರಮುಖ ಕಲಾವಿದರು ನಟಿಸಿದ್ದರು. ಅಂತಹದ್ದೇ ಕಲಾವಿದರ ದಂಡು ಪೊನ್ನಿಯನ್ ಸೆಲ್ವನ್ ಚಿತ್ರದಲ್ಲಿಯೂ ಕಂಡು ಬರುತ್ತಿದೆ. ಲಾಕ್ಡೌನ್ನಿಂದ ಕಂಬ್ಯಾಕ್ ಮಾಡಿರುವ ಮಣಿರತ್ನಂ ಪೊನ್ನಿಯನ್ ಸೆಲ್ವನ್ ಚಿತ್ರೀಕರಣ ಪುನರಾರಂಭಿಸಿದ್ದಾರೆ. ಪೊನ್ನಿಯನ್ ಸೆಲ್ವನ್ ಚಿತ್ರವನ್ನು ಎರಡು ಭಾಗಗಳಲ್ಲಿ ತಯಾರಿಸಲು ನಿರ್ದೇಶಕ ಮಣಿರತ್ನಂ ಪ್ಲಾನ್ ಮಾಡಿದ್ದಾರೆ ಎಂದು ಈ ಹಿಂದೆಯೇ ವರದಿಯಾಗಿದೆ. ಎ ಆರ್ ರೆಹಮಾನ್ ಚಿತ್ರಕ್ಕೆ ಸಂಗೀತ ಒದಗಿಸುತ್ತಿದ್ದು, ಲೈಕಾ ಪ್ರೊಡಕ್ಷನ್ ಬಂಡವಾಳ ಹಾಕಿದ್ದಾರೆ.
ಚಿತ್ರದ ಪ್ರಧಾನ ಪಾತ್ರದಲ್ಲಿ ತ್ರಿಷಾ ನಟಿಸಿದ್ದಾರೆ. ವಿಕ್ರಂ, ಕಾರ್ತಿ, ಐಶ್ವರ್ಯ ರೈ ಬಚ್ಚನ್, ಅಮಿತಾಭ್ ಬಚ್ಚನ್, ವಿಕ್ರಂ ಪ್ರಭು, ಜಯಂ ರವಿ, ಐಶ್ವರ್ಯ ಲಕ್ಷ್ಮಿ, ಕಿಶೋರ್, ಸಾರಾ ಅರ್ಜುನ್ ಸೇರಿದಂತೆ ಹಲವು ಕಲಾವಿದರು ನಟಿಸುತ್ತಿದ್ದಾರೆ.
This News Article is a Copy of FILMIBEAT
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm