ಬ್ರೇಕಿಂಗ್ ನ್ಯೂಸ್
16-01-21 05:21 pm Source: FILMIBEAT Bharath Kumar K ಸಿನಿಮಾ
ದಕ್ಷಿಣ ಭಾರತದ ಖ್ಯಾತ ನಿರ್ದೇಶಕ ಮಣಿರತ್ನಂ ನಿರ್ದೇಶನದಲ್ಲಿ ತಯಾರಾಗುತ್ತಿರುವ ಪೊನ್ನಿಯನ್ ಸೆಲ್ವನ್ ಚಿತ್ರಕ್ಕೆ ಮತ್ತೊಬ್ಬ ಸ್ಟಾರ್ ಕಲಾವಿದ ಎಂಟ್ರಿಯಾಗಿದ್ದಾರೆ. ಬಹುಭಾಷೆ ನಟ ಪ್ರಕಾಶ್ ರಾಜ್ ಈ ಚಿತ್ರದಲ್ಲಿ ಪ್ರಮುಖ ಪಾತ್ರವೊಂದಕ್ಕೆ ಆಯ್ಕೆಯಾಗಿದ್ದಾರೆ. ಈ ಬಗ್ಗೆ ನಟ ಪ್ರಕಾಶ್ ರಾಜ್ ಸಂತಸ ಹಂಚಿಕೊಂಡಿದ್ದು, ಸುಮಾರು 23 ವರ್ಷದ ಚಿತ್ರವನ್ನು ಸ್ಮರಿಸಿಕೊಂಡಿದ್ದಾರೆ. ''23 ವರ್ಷದ ಹಿಂದೆ ಇರುವನ್ ಚಿತ್ರದಲ್ಲಿ ಮಣಿರತ್ನಂ ಅವರ ಜೊತೆ ಕೆಲಸ ಆರಂಭಿಸಿದ್ದೆ, ಈಗ ಅದನ್ನು ಮುಂದುವರಿಯುತ್ತಿದೆ. ಏನೋ ಒಂದು ರೀತಿ ಸಂತೋಷ, ಹೊಸತನ ಕಂಡುಕೊಳ್ಳಬಹುದು ಎಂಬ ಆಶಯ'' ಎಂದು ಟ್ವೀಟ್ ಮಾಡಿದ್ದಾರೆ.
ಅಂದ್ಹಾಗೆ, 'ಪೊನ್ನಿಯನ್ ಸೆಲ್ವನ್' ಚಿತ್ರದಲ್ಲಿ ಪ್ರಕಾಶ್ ರಾಜ್ ಅವರದ್ದು ಯಾವ ಪಾತ್ರ ಎನ್ನುವುದರ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಆದರೆ, ಐಶ್ವರ್ಯ ರೈ ಅವರ ಜೊತೆ ಸ್ಕ್ರೀನ್ ಶೇರ್ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.
1997ರಲ್ಲಿ ತೆರೆಕಂಡಿದ್ದ 'ಇರುವನ್' ಚಿತ್ರದಲ್ಲಿ ಮೋಹನ್ ಲಾಲ್, ಪ್ರಕಾಶ್ ರಾಜ್, ಐಶ್ವರ್ಯ ರೈ, ರೇವತಿ, ಟಬು, ಗೌತಮಿ ಅಂತಹ ಪ್ರಮುಖ ಕಲಾವಿದರು ನಟಿಸಿದ್ದರು. ಅಂತಹದ್ದೇ ಕಲಾವಿದರ ದಂಡು ಪೊನ್ನಿಯನ್ ಸೆಲ್ವನ್ ಚಿತ್ರದಲ್ಲಿಯೂ ಕಂಡು ಬರುತ್ತಿದೆ. ಲಾಕ್ಡೌನ್ನಿಂದ ಕಂಬ್ಯಾಕ್ ಮಾಡಿರುವ ಮಣಿರತ್ನಂ ಪೊನ್ನಿಯನ್ ಸೆಲ್ವನ್ ಚಿತ್ರೀಕರಣ ಪುನರಾರಂಭಿಸಿದ್ದಾರೆ. ಪೊನ್ನಿಯನ್ ಸೆಲ್ವನ್ ಚಿತ್ರವನ್ನು ಎರಡು ಭಾಗಗಳಲ್ಲಿ ತಯಾರಿಸಲು ನಿರ್ದೇಶಕ ಮಣಿರತ್ನಂ ಪ್ಲಾನ್ ಮಾಡಿದ್ದಾರೆ ಎಂದು ಈ ಹಿಂದೆಯೇ ವರದಿಯಾಗಿದೆ. ಎ ಆರ್ ರೆಹಮಾನ್ ಚಿತ್ರಕ್ಕೆ ಸಂಗೀತ ಒದಗಿಸುತ್ತಿದ್ದು, ಲೈಕಾ ಪ್ರೊಡಕ್ಷನ್ ಬಂಡವಾಳ ಹಾಕಿದ್ದಾರೆ.
ಚಿತ್ರದ ಪ್ರಧಾನ ಪಾತ್ರದಲ್ಲಿ ತ್ರಿಷಾ ನಟಿಸಿದ್ದಾರೆ. ವಿಕ್ರಂ, ಕಾರ್ತಿ, ಐಶ್ವರ್ಯ ರೈ ಬಚ್ಚನ್, ಅಮಿತಾಭ್ ಬಚ್ಚನ್, ವಿಕ್ರಂ ಪ್ರಭು, ಜಯಂ ರವಿ, ಐಶ್ವರ್ಯ ಲಕ್ಷ್ಮಿ, ಕಿಶೋರ್, ಸಾರಾ ಅರ್ಜುನ್ ಸೇರಿದಂತೆ ಹಲವು ಕಲಾವಿದರು ನಟಿಸುತ್ತಿದ್ದಾರೆ.
This News Article is a Copy of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm