ಬ್ರೇಕಿಂಗ್ ನ್ಯೂಸ್
16-01-21 05:21 pm Source: FILMIBEAT Bharath Kumar K ಸಿನಿಮಾ
ದಕ್ಷಿಣ ಭಾರತದ ಖ್ಯಾತ ನಿರ್ದೇಶಕ ಮಣಿರತ್ನಂ ನಿರ್ದೇಶನದಲ್ಲಿ ತಯಾರಾಗುತ್ತಿರುವ ಪೊನ್ನಿಯನ್ ಸೆಲ್ವನ್ ಚಿತ್ರಕ್ಕೆ ಮತ್ತೊಬ್ಬ ಸ್ಟಾರ್ ಕಲಾವಿದ ಎಂಟ್ರಿಯಾಗಿದ್ದಾರೆ. ಬಹುಭಾಷೆ ನಟ ಪ್ರಕಾಶ್ ರಾಜ್ ಈ ಚಿತ್ರದಲ್ಲಿ ಪ್ರಮುಖ ಪಾತ್ರವೊಂದಕ್ಕೆ ಆಯ್ಕೆಯಾಗಿದ್ದಾರೆ. ಈ ಬಗ್ಗೆ ನಟ ಪ್ರಕಾಶ್ ರಾಜ್ ಸಂತಸ ಹಂಚಿಕೊಂಡಿದ್ದು, ಸುಮಾರು 23 ವರ್ಷದ ಚಿತ್ರವನ್ನು ಸ್ಮರಿಸಿಕೊಂಡಿದ್ದಾರೆ. ''23 ವರ್ಷದ ಹಿಂದೆ ಇರುವನ್ ಚಿತ್ರದಲ್ಲಿ ಮಣಿರತ್ನಂ ಅವರ ಜೊತೆ ಕೆಲಸ ಆರಂಭಿಸಿದ್ದೆ, ಈಗ ಅದನ್ನು ಮುಂದುವರಿಯುತ್ತಿದೆ. ಏನೋ ಒಂದು ರೀತಿ ಸಂತೋಷ, ಹೊಸತನ ಕಂಡುಕೊಳ್ಳಬಹುದು ಎಂಬ ಆಶಯ'' ಎಂದು ಟ್ವೀಟ್ ಮಾಡಿದ್ದಾರೆ.
ಅಂದ್ಹಾಗೆ, 'ಪೊನ್ನಿಯನ್ ಸೆಲ್ವನ್' ಚಿತ್ರದಲ್ಲಿ ಪ್ರಕಾಶ್ ರಾಜ್ ಅವರದ್ದು ಯಾವ ಪಾತ್ರ ಎನ್ನುವುದರ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಆದರೆ, ಐಶ್ವರ್ಯ ರೈ ಅವರ ಜೊತೆ ಸ್ಕ್ರೀನ್ ಶೇರ್ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.
1997ರಲ್ಲಿ ತೆರೆಕಂಡಿದ್ದ 'ಇರುವನ್' ಚಿತ್ರದಲ್ಲಿ ಮೋಹನ್ ಲಾಲ್, ಪ್ರಕಾಶ್ ರಾಜ್, ಐಶ್ವರ್ಯ ರೈ, ರೇವತಿ, ಟಬು, ಗೌತಮಿ ಅಂತಹ ಪ್ರಮುಖ ಕಲಾವಿದರು ನಟಿಸಿದ್ದರು. ಅಂತಹದ್ದೇ ಕಲಾವಿದರ ದಂಡು ಪೊನ್ನಿಯನ್ ಸೆಲ್ವನ್ ಚಿತ್ರದಲ್ಲಿಯೂ ಕಂಡು ಬರುತ್ತಿದೆ. ಲಾಕ್ಡೌನ್ನಿಂದ ಕಂಬ್ಯಾಕ್ ಮಾಡಿರುವ ಮಣಿರತ್ನಂ ಪೊನ್ನಿಯನ್ ಸೆಲ್ವನ್ ಚಿತ್ರೀಕರಣ ಪುನರಾರಂಭಿಸಿದ್ದಾರೆ. ಪೊನ್ನಿಯನ್ ಸೆಲ್ವನ್ ಚಿತ್ರವನ್ನು ಎರಡು ಭಾಗಗಳಲ್ಲಿ ತಯಾರಿಸಲು ನಿರ್ದೇಶಕ ಮಣಿರತ್ನಂ ಪ್ಲಾನ್ ಮಾಡಿದ್ದಾರೆ ಎಂದು ಈ ಹಿಂದೆಯೇ ವರದಿಯಾಗಿದೆ. ಎ ಆರ್ ರೆಹಮಾನ್ ಚಿತ್ರಕ್ಕೆ ಸಂಗೀತ ಒದಗಿಸುತ್ತಿದ್ದು, ಲೈಕಾ ಪ್ರೊಡಕ್ಷನ್ ಬಂಡವಾಳ ಹಾಕಿದ್ದಾರೆ.
ಚಿತ್ರದ ಪ್ರಧಾನ ಪಾತ್ರದಲ್ಲಿ ತ್ರಿಷಾ ನಟಿಸಿದ್ದಾರೆ. ವಿಕ್ರಂ, ಕಾರ್ತಿ, ಐಶ್ವರ್ಯ ರೈ ಬಚ್ಚನ್, ಅಮಿತಾಭ್ ಬಚ್ಚನ್, ವಿಕ್ರಂ ಪ್ರಭು, ಜಯಂ ರವಿ, ಐಶ್ವರ್ಯ ಲಕ್ಷ್ಮಿ, ಕಿಶೋರ್, ಸಾರಾ ಅರ್ಜುನ್ ಸೇರಿದಂತೆ ಹಲವು ಕಲಾವಿದರು ನಟಿಸುತ್ತಿದ್ದಾರೆ.
This News Article is a Copy of FILMIBEAT
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 08:53 pm
HK News Staffer
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm