ಬ್ರೇಕಿಂಗ್ ನ್ಯೂಸ್
17-01-21 02:17 pm Source: FILMIBEAT ಸಿನಿಮಾ
ಬಾಲಿವುಡ್ ನಟಿ ಕಂಗನಾ ರಣಾವತ್ ವಿವಾದಗಳಿಂದ ದೂರ ಆಗುವ ಲಕ್ಷಣಗಳೇ ಕಾಣುತ್ತಿಲ್ಲ. ಒಂದಲ್ಲೊಂದು ವಿವಾದಗಳ ಮೂಲಕ ಸದಾ ಸುದ್ದಿಯಲ್ಲಿರುತ್ತಾರೆ. ಇದೀಗ ಮತ್ತೊಂದು ವಿವಾದದಲ್ಲಿ ಕಂಗನಾ ಸಿಲುಕಿಕೊಂಡಿದ್ದಾರೆ. ಕ್ವೀನ್ ನಟಿಯ ವಿರುದ್ಧ ಹಕ್ಕುಸ್ವಾಮ್ಯ ಉಲ್ಲಂಘನೆ ಆರೋಪ ಕೇಳಿಬಂದಿದೆ. ಕಂಗನಾ ಇತ್ತೀಚಿಗಷ್ಟೆ ಹೊಸ ಸಿನಿಮಾ ಅನೌನ್ಸ್ ಮಾಡಿದ್ದರು. 'ಮಣಿಕರ್ಣಿಕಾ; ದಿ ಲೆಜೆಂಡ್ ಆಫ್ ದಿಡ್ಡಾ' ಎಂಬ ಹೆಸರಿನ ಚಿತ್ರದಲ್ಲಿ ಕಾಶ್ಮೀರದ ರಾಣಿಯಾಗಿ ನಟಿಸುವುದಾಗಿ ಕಂಗನಾ ಘೋಷಣೆ ಮಾಡಿದ್ದರು. ಸಿನಿಮಾ ಘೋಷಣೆಯಾದ ಬೆನ್ನಲ್ಲೇ ವಿವಾದವೂ ಬೆನ್ನತ್ತಿದೆ. ಕಂಗನಾ ಕಥೆ ಕದ್ದಿದ್ದಾರೆ ಎಂದು ಲೇಖಕ ಆಶಿಶ್ ಕೌಲ್ ಆರೋಪಿಸಿ ಕಂಗನಾಗೆ ನೋಟಿಸ್ ನೀಡಲಾಗಿದೆ.
ದಿಡ್ಡಾ- ಕಾಶ್ಮೀರ್ ಕೀ ಯೋಧಾ ರಾಣಿ' ಪುಸ್ತಕಕ್ಕೆ ಮುನ್ನುಡಿ ಬರೆದುಕೊಡುವಂತೆ ಕಂಗನಾಗೆ ಈ ಹಿಂದೆ ಮೇಲ್ ಮಾಡಿದ್ದೆ, ಆದರೆೆ ಅವರ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಮುನ್ನುಡಿ ಬದಲು, ಅದನ್ನೇ ಸಿನಿಮಾ ಮಾಡಲು ಮುಂದಾಗಿದ್ದಾರೆ ಎಂದು ಲೇಖಕ ಆಶಿಶ್ ಆರೋಪಿಸಿದ್ದಾರೆ.
ನೋಟಿಸ್ ನಲ್ಲಿ ಕಂಗನಾಗೆ 72 ಗಂಟೆಯಲ್ಲಿ ಉತ್ತರ ನೀಡುವಂತೆ ಕೇಳಿಕೊಂಡಿದ್ದಾರೆ. ಇಲ್ಲವಾದರೇ ಕಾನೂನು ವ್ಯಾಪ್ತಿಯಲ್ಲಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಚಿತ್ರದ ನಿರ್ಮಾಪಕ ಕಮಲ್ ಜೈನ್ ಕಥೆ ಕದ್ದು ಮಾಡುತ್ತಿಲ್ಲ ಎಂದು ಹೇಳಿದ್ದಾರೆ. ಆದರೆ ಅವರ ಸಿನಿಮಾ ಪುಸ್ತಕವನ್ನು ಆಧರಿಸಿದೆ ಎಂದು ಲೇಖಕ ಆಶೀಶ್ ಆರೋಪಿಸಿದ್ದಾರೆ. ಅಲ್ಲದೇ ಕಂಗನಾ ವಿರುದ್ಧ ಕಥೆ ಕದ್ದ ಆರೋಪ ಮಾಡಿದ ಬಳಿಕ ಕಂಗನಾ ಅಭಿಮಾನಿಗಳು ಟ್ರೋಲ್ ಮಾಡುತ್ತಿದ್ದಾರೆ, ನಿಂದನೆ ಮಾಡುತ್ತಿದ್ದಾರೆ. ಇದರಿಂದ ತೀವ್ರ ಮಾನಸಿಕ ಯಾತನೆ ಅನುಭವಿಸಿರುವುದಾಗಿಯೂ ಅಶಿಶ್ ಹೇಳಿದ್ದಾರೆ.
ಅಲ್ಲದೆ ಈ ಪುಸ್ತಕ ಈಗಾಗಲೇ ಸಿನಿಮಾವಾಗಲು ಖ್ಯಾತ ನಿರ್ಮಾಣ ಸಂಸ್ಥೆ ಜೊತೆ ಮಾತುಕತೆ ನಡೆದಿದೆ. 2017ರಲ್ಲೇ ನೋಂದಾಯಿಸಲಾಗಿದೆ ಎಂದು ಹೇಳಿದ್ದಾರೆ. ಇದೀಗ ಕಂಗನಾ ಕಡೆಯಿಂದ ಯಾವ ಪ್ರತಿಕ್ರಿಯೆ ಬರಲಿದೆ ಎನ್ನುವ ಕಾತರ ಅಭಿಮಾನಿಗಲ್ಲಿದೆ. ಸಿನಿಮಾ ಪ್ರಾರಂಭಕ್ಕೂ ಮುನ್ನವೇ ಎದುರಾಗಿರುವ ವಿಘ್ನ ನಿವಾರಣೆಯಾಗುತ್ತಾ ಕಾದುನೋಡಬೇಕು.
This News Article is a Copy of FILMIBEAT
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 06:07 pm
HK News Desk
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm