ಬ್ರೇಕಿಂಗ್ ನ್ಯೂಸ್
17-01-21 02:17 pm Source: FILMIBEAT ಸಿನಿಮಾ
ಬಾಲಿವುಡ್ ನಟಿ ಕಂಗನಾ ರಣಾವತ್ ವಿವಾದಗಳಿಂದ ದೂರ ಆಗುವ ಲಕ್ಷಣಗಳೇ ಕಾಣುತ್ತಿಲ್ಲ. ಒಂದಲ್ಲೊಂದು ವಿವಾದಗಳ ಮೂಲಕ ಸದಾ ಸುದ್ದಿಯಲ್ಲಿರುತ್ತಾರೆ. ಇದೀಗ ಮತ್ತೊಂದು ವಿವಾದದಲ್ಲಿ ಕಂಗನಾ ಸಿಲುಕಿಕೊಂಡಿದ್ದಾರೆ. ಕ್ವೀನ್ ನಟಿಯ ವಿರುದ್ಧ ಹಕ್ಕುಸ್ವಾಮ್ಯ ಉಲ್ಲಂಘನೆ ಆರೋಪ ಕೇಳಿಬಂದಿದೆ. ಕಂಗನಾ ಇತ್ತೀಚಿಗಷ್ಟೆ ಹೊಸ ಸಿನಿಮಾ ಅನೌನ್ಸ್ ಮಾಡಿದ್ದರು. 'ಮಣಿಕರ್ಣಿಕಾ; ದಿ ಲೆಜೆಂಡ್ ಆಫ್ ದಿಡ್ಡಾ' ಎಂಬ ಹೆಸರಿನ ಚಿತ್ರದಲ್ಲಿ ಕಾಶ್ಮೀರದ ರಾಣಿಯಾಗಿ ನಟಿಸುವುದಾಗಿ ಕಂಗನಾ ಘೋಷಣೆ ಮಾಡಿದ್ದರು. ಸಿನಿಮಾ ಘೋಷಣೆಯಾದ ಬೆನ್ನಲ್ಲೇ ವಿವಾದವೂ ಬೆನ್ನತ್ತಿದೆ. ಕಂಗನಾ ಕಥೆ ಕದ್ದಿದ್ದಾರೆ ಎಂದು ಲೇಖಕ ಆಶಿಶ್ ಕೌಲ್ ಆರೋಪಿಸಿ ಕಂಗನಾಗೆ ನೋಟಿಸ್ ನೀಡಲಾಗಿದೆ.
ದಿಡ್ಡಾ- ಕಾಶ್ಮೀರ್ ಕೀ ಯೋಧಾ ರಾಣಿ' ಪುಸ್ತಕಕ್ಕೆ ಮುನ್ನುಡಿ ಬರೆದುಕೊಡುವಂತೆ ಕಂಗನಾಗೆ ಈ ಹಿಂದೆ ಮೇಲ್ ಮಾಡಿದ್ದೆ, ಆದರೆೆ ಅವರ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಮುನ್ನುಡಿ ಬದಲು, ಅದನ್ನೇ ಸಿನಿಮಾ ಮಾಡಲು ಮುಂದಾಗಿದ್ದಾರೆ ಎಂದು ಲೇಖಕ ಆಶಿಶ್ ಆರೋಪಿಸಿದ್ದಾರೆ.
ನೋಟಿಸ್ ನಲ್ಲಿ ಕಂಗನಾಗೆ 72 ಗಂಟೆಯಲ್ಲಿ ಉತ್ತರ ನೀಡುವಂತೆ ಕೇಳಿಕೊಂಡಿದ್ದಾರೆ. ಇಲ್ಲವಾದರೇ ಕಾನೂನು ವ್ಯಾಪ್ತಿಯಲ್ಲಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಚಿತ್ರದ ನಿರ್ಮಾಪಕ ಕಮಲ್ ಜೈನ್ ಕಥೆ ಕದ್ದು ಮಾಡುತ್ತಿಲ್ಲ ಎಂದು ಹೇಳಿದ್ದಾರೆ. ಆದರೆ ಅವರ ಸಿನಿಮಾ ಪುಸ್ತಕವನ್ನು ಆಧರಿಸಿದೆ ಎಂದು ಲೇಖಕ ಆಶೀಶ್ ಆರೋಪಿಸಿದ್ದಾರೆ. ಅಲ್ಲದೇ ಕಂಗನಾ ವಿರುದ್ಧ ಕಥೆ ಕದ್ದ ಆರೋಪ ಮಾಡಿದ ಬಳಿಕ ಕಂಗನಾ ಅಭಿಮಾನಿಗಳು ಟ್ರೋಲ್ ಮಾಡುತ್ತಿದ್ದಾರೆ, ನಿಂದನೆ ಮಾಡುತ್ತಿದ್ದಾರೆ. ಇದರಿಂದ ತೀವ್ರ ಮಾನಸಿಕ ಯಾತನೆ ಅನುಭವಿಸಿರುವುದಾಗಿಯೂ ಅಶಿಶ್ ಹೇಳಿದ್ದಾರೆ.
ಅಲ್ಲದೆ ಈ ಪುಸ್ತಕ ಈಗಾಗಲೇ ಸಿನಿಮಾವಾಗಲು ಖ್ಯಾತ ನಿರ್ಮಾಣ ಸಂಸ್ಥೆ ಜೊತೆ ಮಾತುಕತೆ ನಡೆದಿದೆ. 2017ರಲ್ಲೇ ನೋಂದಾಯಿಸಲಾಗಿದೆ ಎಂದು ಹೇಳಿದ್ದಾರೆ. ಇದೀಗ ಕಂಗನಾ ಕಡೆಯಿಂದ ಯಾವ ಪ್ರತಿಕ್ರಿಯೆ ಬರಲಿದೆ ಎನ್ನುವ ಕಾತರ ಅಭಿಮಾನಿಗಲ್ಲಿದೆ. ಸಿನಿಮಾ ಪ್ರಾರಂಭಕ್ಕೂ ಮುನ್ನವೇ ಎದುರಾಗಿರುವ ವಿಘ್ನ ನಿವಾರಣೆಯಾಗುತ್ತಾ ಕಾದುನೋಡಬೇಕು.
This News Article is a Copy of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm